Incentive money: ಪ್ರತೀ ಲೀಟರ್‌ ಹಾಲಿಗೆ 10 ರೂ. ಪ್ರೋತ್ಸಾಹ ಧನ!

ಹೈನುಗಾರಿಕೆಗೆ ಬೆನ್ನೆಲುಬಾಗಿ ನಿಂತ ಮರಸೂರು ಗ್ರಾಮ ಪಂಚಾಯಿತಿ

Team Udayavani, Sep 27, 2024, 7:20 AM IST

Milk

ಬೆಂಗಳೂರು: ಬೆಂಗಳೂರು ನಗರ ಜಿ.ಪಂ. ವ್ಯಾಪ್ತಿಯ ಮರಸೂರು ಗ್ರಾ.ಪಂ. ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಪ್ರತೀ ಲೀಟರ್‌ ಮೇಲೆ 10 ರೂ. ಪ್ರೋತ್ಸಾಹ ಧನ ನೀಡುತ್ತ ಅನ್ನದಾತರ ಬೆನ್ನೆಲುಬಾಗಿ ನಿಂತಿದೆ. ಈ ಉದ್ದೇಶಕ್ಕಾಗಿಯೇ ಪ್ರತೀ ತಿಂಗಳು ಸುಮಾರು 5 ಲಕ್ಷ ರೂ.ಗಳಿಗೂ ಅಧಿಕ ಹಣವನ್ನು ರೈತರ ಖಾತೆಗೆ ಜಮಾ ಮಾಡುತ್ತ ಇಡೀ ರಾಜ್ಯಕ್ಕೆ ಮಾದರಿಯಾಗಿದೆ.

ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಬೆನ್ನೆಲುಬಾಗಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾ.ಪಂ. ಈ ಕಾರ್ಯಕ್ಕೆ ಮುಂದಾಗಿದೆ. ಪಂಚಾಯತ್‌ ಸ್ವಂತ ಅನುದಾನದಲ್ಲಿ (ತೆರಿಗೆ) ಪ್ರೋತ್ಸಾಹ ಹಣವನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡುತ್ತದೆ. ಹಲವು ರೈತರು 500ರಿಂದ 5 ಸಾವಿರ ರೂ. ವರೆಗೆ ಪ್ರೋತ್ಸಾಹ ಧನ ಪಡೆಯುತ್ತಿದ್ದಾರೆ ಎಂದು ಮರಸೂರು ಗ್ರಾ.ಪಂ.ನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

50 ಲಕ್ಷ ರೂ. ಮೀಸಲು
ಹಲವು ತಿಂಗಳುಗಳಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕಳೆದ ಆಗಸ್ಟ್‌ನಲ್ಲಿ 167 ರೈತರು 50,067 ಲೀ. ಹಾಲನ್ನು ಬಮೂಲ್‌ಗೆ ಮಾರಾಟ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಕಳೆದ ತಿಂಗಳು 5 ಲಕ್ಷ ರೂ.ಗಳನ್ನು ಪ್ರೋತ್ಸಾಹ ಧನದ ರೂಪದಲ್ಲಿ ರೈತರ ಬ್ಯಾಂಕ್‌ ಖಾತೆಗೆ ಜಮಾವಣೆ ಮಾಡಲಾಗಿದೆ ಎಂದು ಮರಸೂರು ಗ್ರಾ.ಪಂ. ಪಿಡಿಒ ಡಿ. ಮುರಳಿ ಹೇಳಿದ್ದಾರೆ. ಕಷ್ಟದಲ್ಲಿರುವ ರೈತರು ನೆಮ್ಮದಿ ಜೀವನ ನಡೆಸಲಿ ಎಂಬ ಉದ್ದೇಶದಿಂದ ಪ್ರತೀ ಲೀಟರ್‌ ಮೇಲೆ 10 ರೂ. ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಇದಕ್ಕಾಗಿಯೇ ವರ್ಗ-1ರ ಸ್ವನಿಧಿಯಲ್ಲಿ 50 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ ಎಂದಿದ್ದಾರೆ.

ಪಶುವೈದ್ಯರಿಂದ ಪರಿಶೀಲನೆ
ಗ್ರಾ.ಪಂ.ನ ಹಾಲಿನ ಕೇಂದ್ರಕ್ಕೆ ಯಾವ ರೈತ ಪ್ರತೀ ದಿನ ಎಷ್ಟು ಲೀಟರ್‌ ಹಾಲು ಹಾಕಿದ್ದಾರೆ ಎಂಬುದನ್ನು ಹಾಲಿನ ಕೇಂದ್ರದ ಅಧಿಕಾರಿಗಳು ಪಂಚಾಯತ್‌ನ ಹಿರಿಯ ಅಧಿಕಾರಿಗಳಿಗೆ ಅಂಕಿ-ಸಂಖ್ಯೆ ಸಮೇತ ಮಾಹಿತಿ ನೀಡುತ್ತಾರೆ. ಇದಾದ ಬಳಿಕ ಪಂಚಾಯತ್‌ ವ್ಯಾಪ್ತಿಯ ಪಶು ವೈದ್ಯಾಧಿಕಾರಿಗಳು ಮರು ಪರಿಶೀಲನೆ ನಡೆಸುತ್ತಾರೆ. ಒಬ್ಬ ರೈತ ಎಷ್ಟು ಲೀಟರ್‌ ಬೇಕಾದರೂ ಹಾಲು ಹಾಕಬಹುದು. ಮಾಸಾಂತ್ಯದ ಅನಂತರ ಪ್ರೋತ್ಸಾಹ ಧನ ರೈತರ ಕೈಸೇರುತ್ತದೆ ಎಂದು ಗ್ರಾ.ಪಂ. ಆಡಳಿತ ಮಂಡಳಿ ತಿಳಿಸಿದೆ.

‘ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯದಿರಲಿ ಎಂಬ ಸದುದ್ದೇಶದಿಂದ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರುವ ಮರಸೂರು ಗ್ರಾ.ಪಂ. ಪ್ರತೀ ಲೀ.ಗೆ 10.ರೂ. ಪ್ರೋತ್ಸಾಹ ಧನ ನೀಡುತ್ತಿದೆ. ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮರಸೂರು ಗ್ರಾ.ಪಂ. ಕಾರ್ಯ ಹೆಮ್ಮೆಪಡುವಂಥದ್ದಾಗಿದೆ.’
– ಡಾ| ಸಿ.ಎನ್‌. ಮಂಜುನಾಥ್‌, ಬೆಂ. ಗ್ರಾಮಾಂತರ ಸಂಸದ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

western-Ghat

Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್‌ ವರದಿ ತಿರಸ್ಕಾರ

BJp-Protest

MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.