ಮೀನು ರಫ್ತು ಆದಾಯ 1 ಲಕ್ಷ ಕೋ.ರೂ.ಗೆ ಹೆಚ್ಚಿಸುವ ಗುರಿ


Team Udayavani, Mar 22, 2022, 5:44 AM IST

ಮೀನು ರಫ್ತು ಆದಾಯ 1 ಲಕ್ಷ ಕೋ.ರೂ.ಗೆ ಹೆಚ್ಚಿಸುವ ಗುರಿ

ಮಂಗಳೂರು: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ)ಯಲ್ಲಿ 2024-25ರ ವೇಳೆಗೆ ದೇಶದ ಮೀನು ಉತ್ಪಾದನೆಯನ್ನು 22 ದಶಲಕ್ಷ ಮೆಟ್ರಿಕ್‌ ಟನ್‌ ಹಾಗೂ ಮೀನು ರಫ್ತು ಆದಾಯ ಪ್ರಮಾಣವನ್ನು ಒಂದು ಲಕ್ಷ ಕೋಟಿ ರೂ.ಗೇರಿಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್‌ಸಿಡಿಸಿ) ಹಿರಿಯ ಸಲಹೆಗಾರ ಡಾ| ರಾಜೀವ್‌ ರಂಜನ್‌ ಹೇಳಿದ್ದಾರೆ.

ಸಹಕಾರಿ ವಲಯ ರಫ್ತು ಉತ್ತೇಜನ ಕೌನ್ಸಿಲ್‌, ಎನ್‌ಸಿಡಿಸಿ, ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ನಿಗಮ (ಎನ್‌ಎಫ್‌ಡಿಬಿ), ಕೇಂದ್ರ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ಮೀನು ರಫ್ತು ಉತ್ತೇಜನ ಕುರಿತು ನಗರದಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಗಳ ಮೀನುಗಾರಿಕೆ ಪ್ರತಿನಿಧಿಗಳಿಗೆ ಶನಿ ವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.

ದೇಶದ ಜಿಡಿಪಿಯಲ್ಲಿ ಸಹಕಾರಿ ಕ್ಷೇತ್ರದ ಭಾಗೀದಾರಿಕೆ ಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೌನ್ಸಿಲ್‌ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಮೀನುಗಾರಿಕೆ ವಲಯದಲ್ಲಿ ರಫ್ತು ವ್ಯವಹಾರಕ್ಕೆ ಎನ್‌ಡಿಸಿಸಿ ಅಗತ್ಯ ನೆರವು ನೀಡುತ್ತಿದೆ ಎಂದು ಸಹಕಾರಿ ವಲಯ ರಫ್ತು ಉತ್ತೇಜನ ಕೌನ್ಸಿಲ್‌ ಅಧ್ಯಕ್ಷ ಹಾಗೂ ಎನ್‌ಸಿಡಿಸಿ ವ್ಯವಸ್ಥಾಪಕ ನಿರ್ದೇಶಕ ಸಂದೀಪ್‌ ಕುಮಾರ್‌ ನಾಯಕ್‌ ಹೇಳಿದರು.

ಮೀನುಗಾರಿಕೆಯಲ್ಲಿ ಸಹಕಾರ ಹೆಚ್ಚಿಸಬೇಕು ಎಂದು ಸಹಕಾರ ಭಾರತಿಯ ಮಾಜಿ ಅಧ್ಯಕ್ಷ ರಮೇಶ್‌ ವೈದ್ಯ ಹೇಳಿದರು. ಎನ್‌ಎಫ್‌ಡಿಬಿಯ ರಾಜೇಂದ್ರ ನಾೖಕ್‌, ರಾಜ್ಯ ಮೀನುಗಾರಿಕೆ ಇಲಾಖೆ ನಿರ್ದೇಶಕ ಎಂ.ಎಲ್‌. ದೊಡ್ಡಮನಿ, ಮೀನು ಗಾರಿಕೆ ಕಾಲೇಜಿನ ಡೀನ್‌ ಡಾ| ಶಿವ ಕುಮಾರ್‌ ಮಗದ, ಸಿಎಂಎಫ್‌ಆರ್‌ಐಯ ಡಾ| ಪ್ರತಿಭಾ ಉಪನ್ಯಾಸ ನೀಡಿದರು. ಸಹಕಾರಿ ವಲಯ ರಫ್ತು ಉತ್ತೇಜನ ಕೌನ್ಸಿಲ್‌, ಎನ್‌ಸಿಡಿಸಿ ನಿರ್ದೇಶಕ ಪ್ರಭು ಪೌಲ್‌ರಾಜ್‌ ಸ್ವಾಗತಿಸಿದರು. ಸಲಹೆಗಾರ ಡಾ| ಕೆ.ಟಿ. ಚನ್ನೇಶಪ್ಪ ನಿರೂಪಿಸಿದರು.

ಮೀನು ಸಂಸ್ಕರಣ ತಂತ್ರಜ್ಞಾನ ಪಾರ್ಕ್‌ ಅಗತ್ಯ
ಕರ್ನಾಟಕವು 320 ಕಿ.ಮೀ. ಸಮುದ್ರ ತೀರವನ್ನು ಹೊಂದಿದೆ. ಗಣನೀಯ ಪ್ರಮಾಣದಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಮೀನು ರಫ್ತಿಗೂ ವಿಪುಲ ಅವಕಾಶವಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಮಾನದಂಡಕ್ಕೆ ಅನುಗುಣವಾಗಿ ಮೀನು ಸಂಸ್ಕರಣೆಗೆ ಪೂರಕವಾಗಿ ಕರಾವಳಿಯಲ್ಲಿ ಮೀನು ಸಂಸ್ಕರಣ ತಂತ್ರಜ್ಞಾನ ಪಾರ್ಕ್‌ ಸ್ಥಾಪನೆಯ ಅಗತ್ಯವಿದೆ ಎಂದು ಮೀನುಗಾರಿಕೆ ಕಾಲೇಜಿನ ಡೀನ್‌ ಡಾ| ಶಿವಕುಮಾರ್‌ ಮಗದ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

7

Mangaluru: ಕಳ್ಳರ ನಿದ್ದೆಗೆಡಿಸಿದ ಮಹಿಳಾ ಸಾರಥ್ಯದ ಟೀಮ್‌!

3(1)

Mangalore ಬೆಳಗಲು 15 ಲಕ್ಷ ಬಲ್ಬ್ !; ಸಂಜೆ 6ರಿಂದ ಜಗಮಗ!

de

BC Road: ಬಿಹಾರ ಮೂಲದ ಕಾರ್ಮಿಕ ಆತ್ಮ*ಹತ್ಯೆ

courts-s

Mangaluru: ಪೋಕ್ಸೋ ಪ್ರಕರಣ: ಆರೋಪಿ ಖುಲಾಸೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

13(2)

Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್‌ಬಿನ್‌ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.