Gazaಪಟ್ಟಿಯಲ್ಲಿ ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಿದ ಭಾರತ
2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಭಯೋತ್ಪಾದಕ ದಾಳಿ
Team Udayavani, Jul 18, 2024, 11:39 AM IST
ನ್ಯೂಯಾರ್ಕ್: ಗಾಜಾಪಟ್ಟಿಯಲ್ಲಿ ತಕ್ಷಣವೇ ಕದನವಿರಾಮ ಘೋಷಿಸಬೇಕು ಎಂದು ಭಾರತ ಬುಧವಾರ (ಜುಲೈ 17) ವಿಶ್ವಸಂಸ್ಥೆಯಲ್ಲಿ ಕರೆ ನೀಡಿದ್ದು, ಯಾವುದೇ ಷರತ್ತುಗಳಿಲ್ಲದೇ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ತಿಳಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ(UNSC)ಯಲ್ಲಿ ಮಧ್ಯ ಏಷ್ಯಾದ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಆರ್.ರವೀಂದ್ರ ಅವರು, ಪ್ಯಾಲೆಸ್ತೇನ್ ಅಭಿವೃದ್ಧಿಗೆ ಭಾರತವು ವಿವಿಧ ರೀತಿಯಲ್ಲಿ ನೆರವು ನೀಡಿದ್ದು, ಅದರ ಮೊತ್ತ ಅಂದಾಜು 120 ಮಿಲಿಯನ್ ಅಮೆರಿಕನ್ ಡಾಲರ್ ಎಂಬುದಾಗಿ ಹೇಳಿದರು.
2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಸೇರಿದಂತೆ ಎಲ್ಲಾ ದೇಶಗಳು ಬಲವಾಗಿ ಖಂಡಿಸಿವೆ. ಅದೇ ರೀತಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ನಾಗರಿಕರ ಪ್ರಾಣ ಹಾನಿಯನ್ನೂ ಖಂಡಿಸುವುದಾಗಿ ಭಾರತ ಹೇಳಿದ್ದು, ಕೂಡಲೇ ಕದನ ವಿರಾಮ ಘೋಷಿಸುವ ಮೂಲಕ ಮಾತುಕತೆಯಲ್ಲಿ ಬಿಕ್ಕಟ್ಟು ಬಗೆಹರಿಸಿಕೊಳ್ಳುವಂತೆ ಕರೆ ನೀಡಿದೆ.
ಗಾಜಾಪಟ್ಟಿಯಲ್ಲಿ ತಕ್ಷಣವೇ ಯುದ್ಧವನ್ನು ನಿಲ್ಲಿಸಿ, ಮಾನವೀಯ ನೆಲೆಯಲ್ಲಿ ನೆರವು ನೀಡಬೇಕೆಂಬುದು ಭಾರತದ ಆಶಯವಾಗಿದೆ. ಹಾಗೇ ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ಷರತ್ತುಗಳಿಲ್ಲದೇ ಬಂಧಮುಕ್ತಗೊಳಿಸಬೇಕು ಎಂದು ರಾಯಭಾರಿ ರವೀಂದ್ರ ವಿಶ್ವಸಂಸ್ಥೆಯಲ್ಲಿ ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ:B’town: ವಿಚ್ಚೇದನ ಕುರಿತ ಪೋಸ್ಟ್ಗೆ ಲೈಕ್ ಕೊಟ್ಟ ಅಭಿಷೇಕ್ ಬಚ್ಚನ್; ಸಂಬಂಧದಲ್ಲಿ ಬಿರುಕು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.