India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ಬೆಂಗಳೂರು ಟೆಸ್ಟ್‌ : ಭಾರತ 3 ವಿಕೆಟಿಗೆ 231, ರೋಹಿತ್‌, ಕೊಹ್ಲಿ, ಸರ್ಫರಾಜ್‌ ಖಾನ್‌ ಅರ್ಧಶತಕ, ರಚಿನ್‌ ಶತಕ, ನ್ಯೂಜಿಲ್ಯಾಂಡ್‌ 402 ರನ್‌,  ಪ್ರವಾಸಿ ತಂಡಕ್ಕೆ ಭರ್ಜರಿ 356 ರನ್‌ ಮುನ್ನಡೆ

Team Udayavani, Oct 19, 2024, 1:52 AM IST

NZ-Rachin

ಬೆಂಗಳೂರು: ಪ್ರವಾಸಿ ನ್ಯೂಜಿಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ನ ಮೊದಲನೇ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್ನಿಗೆ ಕುಸಿದಿದ್ದ ಭಾರತ ತಂಡವು ದ್ವಿತೀಯ ಇನ್ನಿಂಗ್ಸ್‌ ನಲ್ಲಿ ಚೇತರಿಕೆಯ ಪ್ರದರ್ಶನ ನೀಡಿದೆ.

ನಾಯಕ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಮತ್ತು ಸರ್ಫರಾಜ್‌ ಖಾನ್‌ ಅವರ ಅರ್ಧ ಶತಕದ ನೆರವಿನೊಂದಿಗೆ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ಮೂರು ವಿಕೆಟಿಗೆ 231 ರನ್‌ ಬಾರಿಸಿ ತಿರುಗೇಡು ನೀಡಲು ಪ್ರಯತ್ನಿಸುತ್ತಿದೆ. ಸದ್ಯ ಭಾರತ ತಂಡ 125 ರನ್‌ ಹಿನ್ನಡೆಯಲ್ಲಿದೆ. ಈ ಮೊದಲು ರಚಿನ್‌ ರವೀಂದ್ರ ಅವರ ಆಕರ್ಷಕ ಶತಕದಿಂದಾಗಿ ನ್ಯೂಜಿಲ್ಯಾಂಡ್‌ ತಂಡವು ಮೊದಲ ಇನ್ನಿಂಗ್ಸ್‌ ನಲ್ಲಿ 402 ರನ್‌ ಬಾರಿಸಿತ್ತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 356 ರನ್‌ ಭರ್ಜರಿ ಮುನ್ನಡೆ ಗಳಿಸಿತ್ತು.

ರಚಿನ್‌ ಅಮೋಘ ಶತಕ
ಮೂರು ವಿಕೆಟಿಗೆ 180 ರನ್ನಿನಿಂದ ದಿನ ದಾಟ ಆರಂಭಿಸಿದ ನ್ಯೂಜಿಲ್ಯಾಂಡಿಗೆ ರಚಿನ್‌ ರವೀಂದ್ರ ಅವರ ಅಮೋಘ ಬ್ಯಾಟಿಂಗ್‌ ನೆರವು ಲಭಿಸಿತು. ರಚಿನ್‌ ಅವರು ಭಾರತೀಯ ದಾಳಿಯನ್ನು ಸಮರ್ಥವಾಗಿ ಎದುರಿಸಿ 134 ರನ್‌ ಬಾರಿಸಿ ತಂಡಕ್ಕೆ ಬಲ ತುಂಬಿದರು. ಅವರೊಂದಿಗೆ ಟಿಮ್‌ ಸೌಥಿ 65 ರನ್‌ ಸಿಡಿಸಿ ತಂಡದ ದೊಡ್ಡ ಮೊತ್ತಕ್ಕೆ ಕೊಡುಗೆ ಸಲ್ಲಿಸಿದರು.

ಅವರಿಬ್ಬರು 8ನೇ ವಿಕೆಟಿಗೆ 137 ರನ್ನುಗಳ ಜತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಸೌಥಿ 73 ಎಸೆತಗಳಿಂದ 65 ರನ್‌ ಗಳಿಸಿದರು. 5 ಬೌಂಡರಿ ಮತ್ತು 4 ಸಿಕ್ಸರ್‌ ಬಾರಿಸಿದರು. ರಚಿನ್‌ ಕೊನೆಯವರಾಗಿ ಔಟಾಗುವ ಮೊದಲು 157 ಎಸೆತಗಳಿಂದ 134 ರನ್‌ ಹೊಡೆದರು. 13 ಬೌಂಡರಿ ಮತ್ತು 4 ಸಿಕ್ಸರ್‌ ಹೊಡೆದಿದ್ದರು.

ಮೂವರಿಂದ ಅರ್ಧಶತಕ
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ ಉತ್ತಮ ಆಟದ ಪ್ರದರ್ಶನ ನೀಡಿ ತಿರುಗೇಟು ನೀಡಲು ಪ್ರಯತ್ನಿಸುತ್ತಿದೆ. ನಾಯಕ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಮತ್ತು ಸರ್ಫರಾಜ್‌ ಅರ್ಧಶತಕ ಹೊಡೆದು ಆಧರಿಸಿದ್ದಾರೆ. ಇನ್ನಿಂಗ್ಸ್‌ ಆರಂಭಿಸಿದ ಯಶಸ್ವಿ ಜೈಸ್ವಾಲ್‌ ಮತ್ತು ರೋಹಿತ್‌ ಶರ್ಮ ಮೊದಲ ವಿಕೆಟಿಗೆ 72 ರನ್‌ ಪೇರಿಸಿದರು. ಈಹಂತದಲ್ಲಿ ತಂಡ ಜೈಸ್ವಾಲ್‌ ಅವರ ವಿಕೆಟನ್ನು ಕಳೆದುಕೊಂಡಿತು. 52 ರನ್‌ ಗಳಿಸಿದ ವೇಳೆ ರೋಹಿತ್‌ ಭಾರತೀಯ ಮೂಲದ ಸ್ಪಿನ್ನರ್‌ ಅಜಾಜ್‌ ಪಟೇಲ್‌ ಅವರಿಗೆ ವಿಕೆಟ್‌ ಒಪ್ಪಿಸಿದರು. ಈ ವೇಳೆ ಅವರ ಮುಖದಲ್ಲಿ ಮೂಡಿದ ಆಘಾತ ಭಾವದ ಚಿತ್ರಗಳು ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೊನೆ ಹಂತದಲ್ಲಿ ತಂಡವನ್ನು ಆಧರಿಸಿದ ವಿರಾಟ್‌ ಕೊಹ್ಲಿ ಮತ್ತು ಸರ್ಫರಾಜ್‌ ಖಾನ್‌ ಮೂರನೇ ವಿಕೆಟಿಗೆ 136 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು. ದಿನದಾಟ ಅಂತ್ಯಗೊಳ್ಳಲು ಸ್ವಲ್ಪವೇ ಸಮಯವಿರುಗಾಗ 70 ರನ್‌ ಗಳಿಸಿದ ವಿರಾಟ್‌ ಕೊಹ್ಲಿ ಔಟಾಗಿ ನಿರಾಸೆ ಅನುಭವಿಸಿದರು. ಅಲ್ಲಿಗೆ ದಿನದಾಟ ಅಂತ್ಯಗೊಳಿಸಲಾಯಿತು. 70 ರನ್‌ ಬಾರಿಸಿದ ಸರ್ಫರಾಜ್‌ ಕ್ರೀಸ್‌ನಲ್ಲಿ ಉಳಿದಿದ್ದಾರೆ.

ಟೆಸ್ಟ್‌ನಲ್ಲಿ 9000 ರನ್‌ ಕ್ಲಬ್‌ಗ ವಿರಾಟ್‌ ಕೊಹ್ಲಿ
ನ್ಯೂಜಿಲ್ಯಾಂಡ್‌ ವಿರುದ್ಧ 70 ರನ್‌ ಬಾರಿಸುವ ಮೂಲಕ ವಿರಾಟ್‌ ಕೊಹ್ಲಿ, ಟೆಸ್ಟ್‌ ಕ್ರಿಕೆಟ್‌ನಲ್ಲಿ 9000 ರನ್‌ ಪೂರೈಸಿದ್ದಾರೆ. ಅವರು ಈ ಸಾಧನೆ ಮಾಡಿದ ಭಾರತದ 4ನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಸಚಿನ್‌ ತೆಂಡುಲ್ಕರ್‌ (15,921), ರಾಹುಲ್‌ ದ್ರಾವಿಡ್‌ (13,265), ಸುನೀಲ್‌ ಗಾವಸ್ಕರ್‌ (10,122) ಈ ಪಟ್ಟಿಯಲ್ಲಿ ಅಗ್ರ ಮೂರು ಸ್ಥಾನದಲ್ಲಿದ್ದಾರೆ.

ಟೆಸ್ಟ್‌ ನಲ್ಲಿ 102 ಸಿಕ್ಸರ್‌: ಭಾರತ ಗರಿಷ್ಠ ದಾಖಲೆ
ಕಿವೀಸ್‌ ವಿರುದ್ಧ 5 ಸಿಕ್ಸರ್‌ ಬಾರಿಸಿರುವ ಭಾರತ, ಪ್ರಸಕ್ತ ವರ್ಷ ಟೆಸ್ಟ್‌ ಕ್ರಿಕೆಟ್‌ನಲ್ಲಿ 100+ ಸಿಕ್ಸರ್‌ ಪೂರೈಸಿದ ಮೊದಲ ತಂಡವೆನಿಸಿದೆ. ಇಂಗ್ಲೆಂಡ್‌ 2022ರಲ್ಲಿ 89 ಸಿಕ್ಸರ್‌ ಬಾರಿಸಿದ್ದು ಹಿಂದಿನ ದಾಖಲೆ.

ಮೊಣಕಾಲು ಗಾಯ: ಕೀಪಿಂಗ್‌ ಮಾಡದ ಪಂತ್‌
ಇನ್ನಿಂಗ್ಸ್‌ ಸೋಲಿನ ಭೀತಿಯಲ್ಲಿರುವ ಭಾರತಕ್ಕೆ ಮತ್ತೂಂದು ಹಿನ್ನಡೆಯಾಗಿದೆ. ಎರಡನೇ ದಿನ ಕಿವೀಸ್‌ ಇನ್ನಿಂಗ್ಸ್‌ನ 37ನೇ ಓವರ್‌ನಲ್ಲಿ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದ ರಿಷಭ್‌ ಪಂತ್‌ 3ನೇ ದಿನವೂ ಮೈದಾನಕ್ಕಿಳಿಯಲಿಲ್ಲ. ಹೀಗಾಗಿ ಪಂತ್‌ ಬದಲು ಧೃವ್‌ ಜುರೆಲ್‌ ವಿಕೆಟ್‌ ಕೀಪಿಂಗ್‌ ನಿರ್ವಹಿಸಿದರು.

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

pro-Kabaddi1

Pro Kabaddi League: ತೆಲುಗು ಟೈಟಾನ್ಸ್‌ ಅಬ್ಬರಕ್ಕೆ ತಣ್ಣಗಾದ ಬೆಂಗಳೂರು ಬುಲ್ಸ್‌

Newzeland

Womens T-20 World Cup: ವಿಂಡೀಸ್ ಸೋಲಿಸಿ 14 ವರ್ಷ ಬಳಿಕ ಫೈನಲ್‌ ಪ್ರವೇಶಿಸಿದ ಕಿವೀಸ್‌!

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.