Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ


Team Udayavani, Sep 26, 2024, 6:00 AM IST

railaw

ದೇಶದಲ್ಲಿ ಕಳೆದ ನಾಲ್ಕು ತಿಂಗಳುಗಳ ಅವಧಿಯಲ್ಲಿ ರೈಲುಗಳನ್ನು ಹಳಿ ತಪ್ಪಿಸಲು ದುಷ್ಕರ್ಮಿಗಳು 21 ಬಾರಿ ಪ್ರಯತ್ನ ನಡೆಸಿರುವ ಘಟನೆಗಳು ನಡೆದಿವೆ. ಈ ಕೃತ್ಯಗಳಲ್ಲಿ ಉಗ್ರಗಾಮಿ ಸಂಘಟನೆ ಶಾಮೀಲಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಬೆನ್ನಲ್ಲೇ ಇದನ್ನು ಪುಷ್ಟೀಕರಿಸಲೋ ಎಂಬಂತೆ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಉಗ್ರರೊಂದಿಗೆ ನಂಟು ಹೊಂದಿರುವ ಆರೋಪಿಗಳನ್ನು ತನಿಖಾ ಸಂಸ್ಥೆಗಳು ಬಂಧಿಸಿದ್ದವು. ಆದರೆ ಮಂಗಳವಾರ ಇವೆಲ್ಲವುಗಳಿಗೆ ವ್ಯತಿರಿಕ್ತವಾದ ಬೆಳವಣಿಗೆಯೊಂದು ನಡೆದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ರೈಲನ್ನು ಹಳಿ ತಪ್ಪಿಸಲು ನಡೆಸಿದ ಪ್ರಯತ್ನ ಮತ್ತು ಗುಜರಾತ್‌ನಲ್ಲಿ ರೈಲು ಹಳಿಯ 40ಕ್ಕೂ ಅಧಿಕ ನಟ್‌ ಬೋಲ್ಟ್ ಗಳನ್ನು ಸಡಿಲಗೊಳಿಸಿದ್ದು ರೈಲ್ವೇ ಸಿಬಂದಿಯೇ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೈಲ್ವೇಯ ನಾಲ್ವರು ಸಿಬಂದಿಯನ್ನು ಬಂಧಿಸಲಾಗಿದೆ.

ರೈಲು ಹಳಿ ತಪ್ಪಿಸುವ ದುಷ್ಕೃತ್ಯದಲ್ಲಿ ಉಗ್ರಗಾಮಿ ಸಂಘಟನೆಗಳು ವಹಿಸಿರುವ ಪಾತ್ರದ ಬಗೆಗೆ ಗಮನವನ್ನು ಕೇಂದ್ರೀಕರಿಸಿ ತನಿಖಾ ಸಂಸ್ಥೆಗಳು ತನಿಖೆಯನ್ನು ಚುರುಕುಗೊಳಿಸಿದ್ದವು. ಆದರೆ ರೈಲ್ವೇ ಇಲಾಖೆಯ ಸಿಬಂದಿಯೇ ಇಂತಹ ದುಷ್ಕೃತ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಈಗ ಕೇಳಿ ಬಂದಿ ರುವುದರಿಂದಾಗಿ ಇದು ಇಡೀ ತನಿಖಾ ಪ್ರಕ್ರಿಯೆಯ ಹಾದಿ ತಪ್ಪಿಸುವ ಷಡ್ಯಂತ್ರವೇ ಎಂಬ ಅನುಮಾನ ದೇಶವಾಸಿಗಳನ್ನು ಸಹಜವಾಗಿಯೇ ಕಾಡ ತೊಡಗಿದೆ.

ಉಗ್ರಗಾಮಿ ಸಂಘಟನೆಗಳು ದೇಶದ ವಿವಿಧೆಡೆ ರೈಲುಗಳನ್ನು ಹಳಿ ತಪ್ಪಿಸುವ ಬೆದರಿಕೆ ಒಡ್ಡಿದ ಬಳಿಕ ಇಂತಹ ಘಟನಾವಳಿಗಳು ದೇಶದ ವಿವಿಧೆಡೆಗಳಿಂದ ವರದಿಯಾಗತೊಡಗಿತ್ತು. ಆಯಾಯ ರಾಜ್ಯಗಳ ಪೊಲೀಸರು, ರೈಲ್ವೇ ಸುರಕ್ಷ ಸಂಸ್ಥೆಗಳು, ರೈಲ್ವೇ ಪೊಲೀಸರೊಂದಿಗೆ ಎನ್‌ಐಎ ಅಧಿಕಾರಿಗಳು ಕೂಡ ತನಿಖೆಯಲ್ಲಿ ಭಾಗಿಯಾಗಿದ್ದರು. ಇದರ ಹೊರತಾಗಿಯೂ ದೇಶದ ಅಲ್ಲಲ್ಲಿ ಪದೇಪದೆ ಇಂತಹ ಪ್ರಯತ್ನಗಳು ನಡೆಯುತ್ತಲೇ ಬಂದಿದ್ದವಲ್ಲದೆ ರೈಲು ಚಾಲಕರು, ರೈಲ್ವೇ ಇಲಾಖೆಯ ನಿರ್ವಹಣ ವಿಭಾಗದ ಸಿಬಂದಿಯ ಸಮಯಪ್ರಜ್ಞೆಯಿಂದಾಗಿ ರೈಲುಗಳು ಹಳಿ ತಪ್ಪಿ ದುರಂತ ಸಂಭವಿಸುವುದು ತಪ್ಪುತ್ತಿತ್ತು.

ಈ ಹಿನ್ನೆಲೆಯಲ್ಲಿ ರೈಲ್ವೇ ಇಲಾಖೆ ಮತ್ತು ಸಾರ್ವಜನಿಕ ವಲಯದಿಂದ ರೈಲ್ವೇ ಸಿಬಂದಿಯ ಸಮಯ ಮತ್ತು ಕರ್ತವ್ಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಈ ಶ್ಲಾಘನೆ, ಸಮ್ಮಾನದ ಗೀಳಿನಿಂದ ಮತ್ತು ಇಂತಹ ಸಿಬಂದಿಯನ್ನು ಸಾಧ್ಯವಾದಷ್ಟು ರಾತ್ರಿ ಪಾಳಿಯಲ್ಲಿ ನೇಮಿಸಿಕೊಳ್ಳಲು ಇಲಾಖೆ ಆಸಕ್ತಿ ತೋರಿದ್ದ ಪರಿಣಾಮ ಹಗಲಿನಲ್ಲಿ ರಜೆ ಲಭಿಸುತ್ತದೆ ಎಂಬ ಕಾರಣದಿಂದ ಇಂತಹ ಕೃತ್ಯ ಎಸಗಿದ್ದಾಗಿ ಮಂಗಳವಾರ ಬಂಧಿತರಾದ ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಮೇಲ್ನೋಟಕ್ಕೆ ಇದೊಂದು ಕುಚೋದ್ಯದ ಮತ್ತು ಕಿಡಿಗೇಡಿ ಕೃತ್ಯ ಎಂದೆನಿಸಿದರೂ ಇಂತಹ ಅನಾಹುತಕಾರಿ ಕೃತ್ಯಕ್ಕೆ ರೈಲ್ವೇ ಸಿಬಂದಿ ಮುಂದಾಗಿದ್ದಾರೆ ಎಂದರೆ ಅದರ ಹಿಂದೆ ಬಲುದೊಡ್ಡ ಹುನ್ನಾರವಿದ್ದಂತೆ ತೋರುತ್ತದೆ.

ಹೀಗಾಗಿ ತನಿಖಾ ಸಂಸ್ಥೆಗಳು ಆರೋಪಿಗಳು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಅವರ ಹಿಂದೆ ಯಾರಿದ್ದಾರೆ ಎಂಬ ಬಗೆಗೆ ಕೂಲಂಕಷ ತನಿಖೆ ನಡೆಸಬೇಕು. ತಮಗೆ ಅನ್ನ ನೀಡುತ್ತಿರುವ ವೃತ್ತಿಗೇ ದ್ರೋಹ ಬಗೆಯುವ ನಿರ್ಧಾರವನ್ನು ರೈಲ್ವೇ ಸಿಬಂದಿ ಕೈಗೊಂಡಿದ್ದಾರೆ ಎಂದಾದರೆ ಅವರು ಯಾವುದಾದರೂ ಬಾಹ್ಯಶಕ್ತಿಗಳ ಆಮಿಷ, ಒತ್ತಡಕ್ಕೆ ಬಲಿಯಾಗಿದ್ದಾರೆಯೇ ಎಂಬ ಬಗೆಗೆ ತನಿಖಾ ಸಂಸ್ಥೆಗಳು ಆಮೂಲಾಗ್ರ ತನಿಖೆ ನಡೆಸಬೇಕು. ಇಂತಹ ಘಟನಾವಳಿಗಳು ಮತ್ತು ಬೆಳವಣಿಗೆಗಳು ಭಾರತೀಯ ರೈಲ್ವೇ ಮಸಿ ಬಳಿಯುವಂಥವುಗಳಾಗಿರುವುದರಿಂದ ಇದರ ಹಿಂದಿರುವ ಎಲ್ಲ ಕುತಂತ್ರವನ್ನು ಬಯಲಿಗೆಳೆಯ ಬೇಕು. ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಿ ಭಾರತೀಯ ರೈಲ್ವೇ ಮೇಲಣ ಜನತೆಯ ವಿಶ್ವಾಸಾರ್ಹತೆಯನ್ನು ಉಳಿಸುವ ಹೊಣೆಗಾರಿಕೆ ತನಿಖಾ ಸಂಸ್ಥೆಗಳು ಮತ್ತು ರೈಲ್ವೇ ಇಲಾಖೆಯದ್ದಾಗಿದೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

Karnataka: ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸಿ

Karnataka: ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.