ಭಾರತೀಯ ರೈಲ್ವೆ: ಇಲ್ಲಿನ ವಿಶೇಷ ನಿಯಮ ಮತ್ತು ಉಚಿತ ಸೌಲಭ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿವೆ ಮಾಹಿತಿ


Team Udayavani, Nov 20, 2022, 4:00 PM IST

railway facility news

ಭಾರತೀಯ ರೈಲ್ವೆಯನ್ನು ದೇಶದ ಜೀವನಾಡಿ ಎಂದೇ ಕರೆಯಲಾಗಿದೆ. ಭಾರತೀಯ ರೈಲ್ವೆ ವಿಶ್ವದ 4ನೇ ಅತಿದೊಡ್ಡ ಪ್ರಯಾಣದ ಸಂಪರ್ಕ ಜಾಲವಾಗಿರುವುದು ಮಾತ್ರವಲ್ಲದೆ ಇದು ದೇಶದಾದ್ಯಂತ 1.2 ಲಕ್ಷ ಕಿ.ಮೀ ವ್ಯಾಪ್ತಿ ಹೊಂದಿದೆ ಹಾಗು ರೈಲ್ವೇ ಪ್ರಯಾಣದ ಕುರಿತು ಮತ್ತಷ್ಟು ಅಭಿವೃದ್ಧಿ ಮತ್ತು ಅನ್ವೇಷನಾತ್ಮಕ ಪ್ರಯೋಗಗಳು ಭಾರತದಲ್ಲಿ ಇಲ್ಲಿನ ಭಾಗೋಳಿಕ ರಚನೆಗೆ ತಕ್ಕಂತೆ ನಡೆಯುತ್ತಿರುವುದು ಸಂತೋಷಕರ ವಿಷಯ.
ಕಾಶ್ಮೀರ ಅಥವಾ ಕನ್ಯಾಕುಮಾರಿಯಾಗಿರಲಿ ದೇಶದ ಹೆಚ್ಚಿನ ಜನರು ರೈಲ್ವೆ ಪ್ರಯಾಣವನ್ನೇ ಇಷ್ಟಪಡುತ್ತಾರೆ ಮತ್ತು ಅವಲಂಬಿಸಿದ್ದಾರೆ. ರೈಲ್ವೆಯ ಮಾರ್ಗಸೂಚಿಗಳು ಹೇಳುವಂತೆ ನಿಮ್ಮ ಆಸನ, ಕಂಪಾರ್ಟ್‌ಮೆಂಟ್ ಅಥವಾ ಕೋಚ್‌ನಲ್ಲಿರುವ ಯಾವುದೇ ಪ್ರಯಾಣಿಕರು ಮೊಬೈಲ್‌ನಲ್ಲಿ ದೊಡ್ಡ ಧ್ವನಿಯಲ್ಲಿ ಮಾತನಾಡುವಂತಿಲ್ಲ ಅಥವಾ ದೊಡ್ಡ ಧ್ವನಿಯಲ್ಲಿ ಹಾಡುಗಳನ್ನು ಕೇಳುವಂತಿಲ್ಲ.
ಅನೇಕ ಪ್ರಯಾಣಿಕರು ಫೋನ್‌ನಲ್ಲಿ ಜೋರಾಗಿ ಮಾತನಾಡುತ್ತಾರೆ ಅಥವಾ ತಡರಾತ್ರಿಯವರೆಗೆ ಹಾಡುಗಳನ್ನು ಕೇಳುತ್ತಾರೆ ಎಂದು ಸಹ ಪ್ರಯಾಣಿಕರು ದೂರುವುದು ಸಾಮಾನ್ಯವಾಗಿರುತ್ತದೆ. ಇದಲ್ಲದೇ ಅನೇಕ ಪ್ರಯಾಣಿಕರು ರಾತ್ರಿ 10 ಗಂಟೆಯ ನಂತರವೂ ಲೈಟ್‌ಗಳನ್ನು ಹಾಕುವುದರಿಂದ ಅವರ ನಿದ್ದೆಗೆ ತೊಂದರೆ ಅನುಭವಿಸಿ ದೂರುವುದು ನಾವು ಕಂಡಿರುತ್ತೇವೆ ಅಥವಾ ನಮಗೆ ಅನುಭವವಾಗಿರುತ್ತವೆ.
ಯಾವುದೇ ಪ್ರಯಾಣಿಕರು ನಿಯಮಗಳನ್ನು ಪಾಲಿಸದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ರೈಲ್ವೇ ಇಲಾಖೆ ತಿಳಿಸುತ್ತದೆ ಆದರೆ ಇದು ಹಲವರಿಗೆ ತಿಳಿದಿಲ್ಲ ಮತ್ತು ಹೆಚ್ಚಿನವರು ಈ ಕಿರಿಕಿರಿ ನಮಗೇಕೆ ಎಂದು ಸುಮ್ಮನಾಗುತ್ತಾರೆ.

ರೈಲ್ವೇ ನಿಯಮಗಳ ಬಗ್ಗೆ ಕೆಲವು ಮಾಹಿತಿ ಹೀಗಿವೆ:
1. ರೈಲಿನಲ್ಲಿ ಪ್ರಯಾಣಿಸುವಾಗ ರಾತ್ರಿ 10 ಗಂಟೆಯ ನಂತರ ಮೊಬೈಲ್ ನಲ್ಲಿ ಜೋರಾಗಿ ಮಾತನಾಡುತ್ತಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
2. ಹೊಸ ನಿಯಮಗಳ ಪ್ರಕಾರ ರಾತ್ರಿ ಪ್ರಯಾಣದ ವೇಳೆ ಪ್ರಯಾಣಿಕರು ಜೋರಾಗಿ ಮಾತನಾಡುವಂತಿಲ್ಲ ಮತ್ತು ಸಂಗೀತ ಕೇಳುವಂತಿಲ್ಲ.
3. ಯಾವುದೇ ಪ್ರಯಾಣಿಕರು ದೂರು ನೀಡಿದರೆ, ಅದನ್ನು ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯಾಗಿರುತ್ತದೆ.ಈ ನಿಯಮಗಳ ಪ್ರಕಾರ ಈಗಾಗಲೆ ಹಲವರು ಆಚರಿಸುವ ಹುಟ್ಟುಹಬ್ಬ, ಸಂತೋಷಕ್ಕಾಗಿ       ಆಚರಿಸುವ ಪಾರ್ಟಿ ಮುಂತಾದ ಯಾವುದೇ ರೀತಿಯ ಆಚರಣೆಗಳನ್ನು ರೈಲಿನ ಒಳಗೆ ಪ್ರಯಾಣಿಸುವಾಗ ಆಚರಿಸುವಂತಿಲ್ಲ.
ಭಾರತೀಯ ರೈಲ್ವೆ ಹಲವು ಉಚಿತ ಸೇವೆಗಳನ್ನೂ ನೀಡುತ್ತದೆ, ಅವುಗಳ ಬಗ್ಗೆ ತಿಳಿಯೋಣ:
ಟಿಕೆಟ್‌ಗಳ ಬುಕಿಂಗ್ ಸಮಯದಲ್ಲಿ ರೈಲ್ವೆಯು ಪ್ರಯಾಣಿಕರಿಗೆ ವರ್ಗ ಉನ್ನತೀಕರಣ(Class Upgradation)ದ ಸೌಲಭ್ಯವನ್ನು ಒದಗಿಸುತ್ತದೆ. ಅಂದರೆ ಸ್ಲೀಪರ್‌ ಕೋಚ್ ಬುಕ್ ಮಾಡಿದ ಪ್ರಯಾಣಿಕರು 3ನೇ ಎಸಿ ಕ್ಲಾಸ್‍(AC 3 Tier) ಪಡೆಯಬಹುದು ಮತ್ತು 3ನೇ ಎಸಿ ಕ್ಲಾಸ್ ಪ್ರಯಾಣಿಕರು 2ನೇ ಎಸಿ ಕ್ಲಾಸ್(AC 2 Tier) ಪಡೆಯಬಹುದು.
2ನೇ ಎಸಿ ಕ್ಲಾಸ್ ಪ್ರಯಾಣಿಕರು ಅದೇ ದರದಲ್ಲಿ ಫಸ್ಟ್ ಎಸಿ ಕ್ಲಾಸ್ ಸೌಲಭ್ಯ(First AC Facility)ವನ್ನು ಪಡೆಯಲು ಅನುವು ಮಾಡಿ ಕೊಡಲಾಗುತ್ತದೆ. ಈ ಸೌಲಭ್ಯವನ್ನು ಪಡೆಯಲು ಪ್ರಯಾಣಿಕರು ಟಿಕೆಟ್ ಬುಕ್ಕಿಂಗ್ ಸಮಯದಲ್ಲಿ ಆಟೋ ಅಪ್‌ಗ್ರೇಡ್ ಆಯ್ಕೆ ಕ್ಲಿಕ್ ಮಾಡಬೇಕು. ಇದರ ನಂತರ ರೈಲ್ವೆ ಲಭ್ಯತೆಯ ಆಧಾರದ ಮೇಲೆ ಟಿಕೆಟ್ ನವೀಕರಿಸುತ್ತದೆ.ಅದೇ ರೀತಿ waiting list ಪ್ರಯಾಣಿಕರಿಗೆ ಮತ್ತೊಂದು ರೈಲಿನಲ್ಲಿ ಆಸನ ಲಭ್ಯತೆಯ ಆಧಾರದ ಮೇಲೆ ಪ್ರಯಾಣಿಸಲು ಅವಕಾಶ ನೀಡುತ್ತದೆ.
ದೃಢೀಕೃತ ಟಿಕೆಟ್ ಪಡೆಯಲು ಸಾಧ್ಯವಾಗದ ಪ್ರಯಾಣಿಕರು ಮತ್ತೊಂದು ರೈಲಿನಲ್ಲಿ ಸೀಟು ಪಡೆಯಲು ಆಯ್ಕೆ ಮಾಡಿಕೊಳ್ಳಬಹುದು. ಇದಕ್ಕಾಗಿ ಟಿಕೆಟ್ ಬುಕ್ಕಿಂಗ್ ಸಮಯದಲ್ಲಿ ‘Option’ ಆಯ್ಕೆ ಮಾಡಿಕೊಳ್ಳಬೇಕು. ಇದರ ನಂತರ ರೈಲ್ವೆ ಈ ಸೌಲಭ್ಯವನ್ನು ಒದಗಿಸುತ್ತದೆ.
ಭಾರತೀಯ ರೈಲ್ವೆಯು ಟಿಕೆಟ್‌ಗಳನ್ನು ವರ್ಗಾಯಿಸುವ ಆಯ್ಕೆಯನ್ನು ಸಹ ನೀಡುತ್ತದೆ. ಒಬ್ಬ ವ್ಯಕ್ತಿಯು ಯಾವುದೇ ಕಾರಣದಿಂದ ಪ್ರಯಾಣಿಸಲು ಸಾಧ್ಯವಾಗದಿದ್ದರೆ, ಅವರು ತನ್ನ ಕುಟುಂಬದ ಯಾವುದೇ ಸದಸ್ಯರ ಹೆಸರಿಗೆ ಟಿಕೆಟ್ ವರ್ಗಾಯಿಸಬಹುದು. ಆದರೆ ಪ್ರಯಾಣ ದಿನದ 24 ಗಂಟೆಗಳ ಮೊದಲು ಟಿಕೆಟ್ ವರ್ಗಾವಣೆ ಮಾಡಿಕೊಳ್ಳಬಹುದು.ಈ ಉಪಯೋಗಗಳನ್ನು ಪಡೆದುಕೊಳ್ಳೋಣ ಮತ್ತು ಸಮರ್ಪಕವಾಗಿ ಜಾರಿಯಾಗುವಂತೆ ನೋಡಿಕೊಳ್ಳೋಣ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

Sheetal Devi: ಕೈಗಳಿಲ್ಲದ ಹುಡುಗಿ ಬಿಲ್ಗಾರಿಕೆಯಲ್ಲಿ ನಿಪುಣೆ; ಇದು ಸ್ಪೂರ್ತಿಯ ಕಥೆ

Sheetal Devi: ಕೈಗಳಿಲ್ಲದ ಹುಡುಗಿ ಬಿಲ್ಗಾರಿಕೆಯಲ್ಲಿ ನಿಪುಣೆ; ಇದು ಸ್ಪೂರ್ತಿಯ ಕಥೆ

1-asaasas

Haryana ಗೆಲ್ಲಲು ಕೈ ಕಸರತ್ತು: ರಾಹುಲ್ ಭೇಟಿಯಾದ ವಿನೇಶ್, ಬಜರಂಗ್ !

6-WLD

Weight Loss Drinks: ತೂಕ, ಕೊಬ್ಬು ಕಡಿಮೆ ಮಾಡಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.