ಪಾಕಿಸ್ಥಾನದ ಶೆಲ್‌ ದಾಳಿಗೆ ಭಾರತೀಯ ಯೋಧ ಹುತಾತ್ಮ

ಜೂನ್‌ ತಿಂಗಳಲ್ಲಿ ಮೂವರು ಸೈನಿಕರ ಸಾವು ; 2,027 ಬಾರಿ ಕದನ ವಿರಾಮ ಉಲ್ಲಂಘನೆ

Team Udayavani, Jun 15, 2020, 6:40 AM IST

ಪಾಕಿಸ್ಥಾನದ ಶೆಲ್‌ ದಾಳಿಗೆ ಭಾರತೀಯ ಯೋಧ ಹುತಾತ್ಮ

ಜಮ್ಮು: ಗಡಿಯಲ್ಲಿ ಪಾಕ್‌ ಸೇನೆಯ ಅಟ್ಟ ಹಾಸ ಮಿತಿ ಮೀರಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಯುದ್ದಕ್ಕೆ ಅಪ್ರಚೋದಿತ ಗುಂಡು ಹಾರಾಟ ಮತ್ತು ಶೆಲ್‌ ದಾಳಿ ನಡೆಸಿದೆ. ಪರಿಣಾಮವಾಗಿ ಭಾರತೀಯ ಸೇನೆಯ ಒಬ್ಬ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಪೂಂಛ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಭಾರತೀಯ ಸೇನೆಯ ಮುಂಚೂಣಿ ನೆಲೆಗಳು, ಗಡಿ ಗ್ರಾಮ ಗಳನ್ನು ಗುರಿಯಾಗಿಸಿ  ಪಾಕ್‌ ಸೇನೆ ನಡೆಸುತ್ತಿರುವ ದಾಳಿಗೆ ಈ ತಿಂಗಳೊಂದರಲ್ಲೇ ಮೂವರು ಯೋಧರು ಬಲಿಯಾದಂತಾಗಿದೆ. ಶನಿವಾರ ರಾತ್ರಿ ಶಾಪುರ್‌ – ಕೆರ್ನಿ ವಲಯದಲ್ಲಿ ಮತ್ತೆ ದಾಳಿ ನಡೆ ದಿದ್ದು, ಭಾರ ತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ. ಗುಂಡಿನ ದಾಳಿ ಯಿಂದ ಮೂವರು ಯೋಧರು ಗಾಯಗೊಂಡಿದ್ದು, ಅವ ರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದಾರಿ ಮಧ್ಯೆ ಒಬ್ಬ ಯೋಧ ಅಸು ನೀಗಿದ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ರವಿವಾರ ಬೆಳಗ್ಗೆಯೂ ಬಾರಾ ಮುಲ್ಲಾ ಜಿಲ್ಲೆಯ ರಾಂಪುರ ವಲಯ ದಲ್ಲಿ ಪಾಕ್‌ ಪಡೆ ಶೆಲ್‌ ದಾಳಿ ಮುಂದುವರಿಸಿದ್ದು, ಎರಡೂ ಕಡೆ ಸ್ವಲ್ಪ ಕಾಲ ಗುಂಡಿನ ಚಕಮಕಿ ನಡೆದಿದೆ.

ಕದನ ವಿರಾಮ ಉಲ್ಲಂಘನೆ: ಶೇ.69 ಹೆಚ್ಚಳ
ಪ್ರಸಕ್ತ ವರ್ಷದ ಆರಂಭದಿಂದ ಜೂನ್‌ 10ರ ವರೆಗೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಯುದ್ದಕ್ಕೂ ಪಾಕ್‌ ಸೇನೆಯು ಬರೋಬ್ಬರಿ 2,027 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿ ಸಿದರೆ ಈ ವರ್ಷ ಪಾಕ್‌ ಪಡೆಯ ದಾಳಿಯ ಪ್ರಮಾಣ ಶೇ.69 ರಷ್ಟು ಹೆಚ್ಚಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಣಿವೆ ರಾಜ್ಯ ದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರ ರನ್ನು ಭಾರತದೊಳಕ್ಕೆ ನುಸುಳಿಸುವ ಕುತಂತ್ರದ ಭಾಗವಾಗಿ ಪಾಕ್‌ ಈ ರೀತಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದೆ. ಉಗ್ರರ ನುಸುಳುವಿಕೆಗೆ ನೆರವಾಗಲು ಅವರಿಗೆ ಗುರಾಣಿಯಾಗಿ ನಿಂತು ಪಾಕ್‌ ಪಡೆ ಇಂಥ ಕುಕೃತ್ಯ  ಎಸಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2019ರಲ್ಲಿ 3,168 ಬಾರಿ ಪಾಕ್‌ ಸೇನೆಯು ಗುಂಡಿನ ದಾಳಿ ನಡೆಸಿತ್ತು. 2018ರಲ್ಲಿ ಈ ಸಂಖ್ಯೆ 1,629 ಆಗಿತ್ತು. ಆದರೆ ಈ ವರ್ಷದ ಮೊದಲ 6 ತಿಂಗ ಳಲ್ಲೇ 2,027 ಬಾರಿ ದಾಳಿ ನಡೆಸಲಾಗಿದೆ. ಈ ಪೈಕಿ ಮಾರ್ಚ್‌ ತಿಂಗಳೊಂದರಲ್ಲೇ ಅತ್ಯಧಿಕ ಅಂದರೆ, 411 ಬಾರಿ ಕದನ ವಿರಾಮ ಉಲ್ಲಂಘನೆ ನಡೆದಿದೆ ಎಂದು ಸೇನೆ ತಿಳಿಸಿದೆ.

ಟಾಪ್ ನ್ಯೂಸ್

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.