INS Submarine ship: ಮಲ್ಪೆ, ಮೂಲ್ಕಿ ಹೆಸರಿನ ಹಡಗು ಲೋಕಾರ್ಪಣೆ

ಸಂಪೂರ್ಣವಾಗಿ ದೇಶೀಯವಾಗಿ ನಿರ್ಮಾಣ 16 ಹಡಗು ತಯಾರು ಮಾಡಲು ಒಪ್ಪಂದ

Team Udayavani, Sep 11, 2024, 7:49 AM IST

INS-malpe

ಮಂಗಳೂರು: ಕರ್ನಾಟಕದ ಪ್ರಮುಖ ಸ್ಥಳಗಳಾದ ಮಲ್ಪೆ ಮತ್ತು ಮೂಲ್ಕಿ ಎಂಬ ಹೆಸರನ್ನು ಹೊಂದಿರುವ ಆಳವಿಲ್ಲದ ನೀರಿನಲ್ಲಿ ಚಲಿಸಬಲ್ಲ 2 ಜಲಾಂತರ್ಗಾಮಿ ನಿಗ್ರಹ ಹಡಗುಗಳನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಗಿದೆ.

ಭಾರತೀಯ ನೌಕಾಪಡೆ ಈ ಹಡಗುಗಳನ್ನು ತಯಾರಿಸಿದ್ದು, ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ತಯಾರು ಮಾಡಲಾಗಿದೆ. ಈ ಮೊದಲೇ ಇಂತಹ 2 ಹಡಗುಗಳನ್ನು ನೌಕಾಪಡೆಯ ವಶಕ್ಕೆ ನೀಡಲಾಗಿತ್ತು. ಈ ಹಡಗುಗಳಲ್ಲಿ ನೀರಿನಾಳದಲ್ಲಿರುವ ವಸ್ತುಗಳನ್ನು ಗುರುತಿಸಬಲ್ಲ ಸೆನ್ಸರ್‌ಗಳನ್ನು ಅಳವಡಿಸಲಾಗಿದೆ.

ತೀರ ಪ್ರದೇಶದಲ್ಲಿ ಮೈನ್‌ (ನೆಲಬಾಂಬ್‌)ಗಳನ್ನು ಪತ್ತೆ ಹಚ್ಚಲು, ಜಲಂತರ್ಗಾಮಿಗಳ ಸಂಚಾರದ ಮೇಲೆ ಕಣ್ಣಿಡಲು ಇವು ಸಹಾಯ ಮಾಡುತ್ತವೆ. ಒಟ್ಟು 16 ಜಲಂತರ್ಗಾಮಿ ನಿಗ್ರಹ ಹಡಗುಗಳನ್ನು ತಯಾರು ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕೊಚ್ಚಿ ಹಾಗೂ ಕೋಲ್ಕತಾದಲ್ಲಿರುವ ಸಂಸ್ಥೆಗಳು ತಲಾ 8 ಹಡಗುಗಳನ್ನು ತಯಾರು ಮಾಡಲಿವೆ. ಇದಕ್ಕಾಗಿ ಕೇಂದ್ರ ಸರಕಾರದ ಜತೆಗೆ 2019ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಹೆಸರು ಇರಿಸಲು ಕಾರಣ:
ಐಎನ್‌ಎಸ್‌ ಮೂಲ್ಕಿ ಹಾಗೂ ಐಎನ್‌ಎಸ್‌ ಮಲ್ಪೆ ಎಂಬ ಹೆಸರು ಇರಿಸುವುದಕ್ಕೆ ಕಾರಣವೂ ಇದೆ. ಹಿಂದೆಯೂ ಇದೇ ಹೆಸರಿನ ನೌಕೆಗಳಿದ್ದವು. ರಷ್ಯಾದಿಂದ ಆಮದು ಮಾಡಿಕೊಳ್ಳಲಾಗಿದ್ದ 6 ಮೈನ್ ಸ್ವೀಪಿಂಗ್‌ ನೌಕೆಗಳಲ್ಲಿ ಇವೂ ಸೇರಿದ್ದವು. 1984ರಿಂದ ತೊಡಗಿ 2003(ಮೂಲ್ಕಿ) ಹಾಗೂ 2006 (ಮಲ್ಪೆ)ರ ವರೆಗೆ ಕಾರ್ಯಾಚರಿಸಿದ್ದ ಈ ನೌಕೆಗಳನ್ನು ಮುಖ್ಯವಾಗಿ ಸಮುದ್ರ ತಟದಲ್ಲಿ ಕಡಲಿನ ಮೈನ್‌ ಸ್ಫೋಟಕ ಪತ್ತೆ ಮಾಡುವುದಕ್ಕೆ ಬಳಸಲಾಗುತ್ತಿತ್ತು.

ಇವೆರಡನ್ನೂ ಬಳಿಕ ಸೇವೆಯಿಂದ ನಿವೃತ್ತಿಗೊಳಿಸಲಾಗಿತ್ತು. ಆದರೆ ಇಂತಹ ಹೆಸರನ್ನು ಸಾಮಾನ್ಯವಾಗಿ ಮತ್ತೆ ಇರಿಸಲಾಗುತ್ತದೆ. ನೌಕಾಪಡೆಯಲ್ಲಿ 150ಕ್ಕೂ ಅಧಿಕ ಹಡಗುಗಳಿದ್ದು, ಹೆಸರನ್ನು ಸಾಮಾನ್ಯವಾಗಿ ಪುನರಾವರ್ತಿಸುತ್ತಾರೆ ಎನ್ನುತ್ತಾರೆ ಮೂಲ್ಕಿಯವರೇ ಆಗಿರುವ ನಿವೃತ್ತ ನೇವಲ್‌ ಅಧಿಕಾರಿ ವೈಸ್‌ ಅಡ್ಮಿರಲ್‌ ಬಿ.ಆರ್‌.ರಾವ್‌.

ಹಿಂದೆ ಮೂಲ್ಕಿ ಹೇಗೆ ಆಯ್ಕೆ?
ಮೂಲ್ಕಿ ಹಿಂದೆ ರಾಜ್ಯದ ಬಂದರುಗಳಲ್ಲೊಂದಾಗಿತ್ತು, ಆಗ ದೇಶ ವಿದೇಶಗಳಿಂದ ಸಣ್ಣ ಹಡಗುಗಳು ಮೂಲ್ಕಿ ಸಮುದ್ರದ ವರೆಗೆ ಬಂದು ಅಲ್ಲಿಂದ ಶಾಂಭವಿ ನದಿಯ ಒಳಗೆ ಬರುತ್ತಿದ್ದವು, ಪ್ರಮುಖ ವಾಣಿಜ್ಯ ಚಟುವಟಿಕೆಗೆ ಆಗ ಮೂಲ್ಕಿ ಕೇಂದ್ರವಾಗಿತ್ತು. 1930ರಿಂದ 1960ರ ವರೆಗೆ ಪ್ರಯಾಣಿಕರ ಸ್ಟೀಮರ್‌ ನೌಕೆಗಳೂ ಇಲ್ಲಿಗೆ ಬಂದು ಹೋಗುತ್ತಿದ್ದವು. ಉಡುಪಿಯಿಂದ ಮಂಗಳೂರಿಗೆ ಹೋಗಲು ಫೆರ್ರಿ ಮೂಲಕ ಇಲ್ಲಿ ಜನರು ನದಿ ದಾಟುತ್ತಿದ್ದರು. ಹಾಗಾಗಿಯೇ ಬ್ರಿಟಿಷರ ಕಾಲದಲ್ಲೇ ಕಡಲ ನಕ್ಷೆಯಲ್ಲಿ ಮೂಲ್ಕಿ ಹಾಗೂ ಮಲ್ಪೆ ಇವೆರಡರ ಹೆಸರುಗಳಿದ್ದವು.

ಉಪಯೋಗವೇನು?

1. ಜಲಂತರ್ಗಾಮಿಗಳ ಸಂಚಾರ ಪತ್ತೆ ಹಚ್ಚಲು. 2. ತೀರದಲ್ಲಿ ಅಡಗಿಸಿಟ್ಟ ಬಾಂಬ್‌ ಪತ್ತೆ ಮಾಡಲು. 3. ತೀರ ಪ್ರದೇಶದ ಮೇಲೆ ಕಣ್ಗಾವಲು ಇಡಲು.
4. ದ್ವೀಪಪ್ರದೇಶಗಳ ರಕ್ಷಣೆಗಾಗಿ ಬಳಕೆ

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.