Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ


Team Udayavani, Sep 4, 2024, 6:00 AM IST

CBi

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾಗಿರುವ ಸಿಬಿಐ ತನಿಖೆಗೆ ಕೈಗೆತ್ತಿಕೊಂಡಿರುವ ಪ್ರಕರಣಗಳಲ್ಲಿ 6,903 ಭ್ರಷ್ಟಾಚಾರ ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿ ಬಾಕಿ ಉಳಿದಿವೆ . ಅವುಗಳಲ್ಲಿ ಕೆಲವು ದಶಕಗಳಷ್ಟು ಹಳೆಯವು ಎಂಬ ಮಾಹಿತಿಯನ್ನು ಕೇಂದ್ರ ವಿಚಕ್ಷಣ ದಳ ತನ್ನ ವಾರ್ಷಿಕ ವರದಿಯಲ್ಲಿ ಹೊರಗೆಡಹಿದೆ. ಒಂದು ದೇಶದ ಉನ್ನತ ತನಿಖಾ ಸಂಸ್ಥೆಯಲ್ಲಿ ಇಷ್ಟೊಂದು ಪ್ರಕರಣಗಳು ಬಾರಿ ಇರುವುದು ನಿಜಕ್ಕೂ ಆಘಾತಕಾರಿ ವಿಷಯವೇ ಆಗಿದೆ.

ದೇಶದ ತನಿಖಾ ವ್ಯವಸ್ಥೆಯಲ್ಲಿ ಸ್ವಾಯತ್ತ ಮತ್ತು ಅತ್ಯುನ್ನತ ತನಿಖಾ ಸಂಸ್ಥೆಯಾ ಗಿರುವ ಸಿಬಿಐನಲ್ಲಿ ಪ್ರಕರಣಗಳ ವಿಲೇವಾರಿ ಇಷ್ಟೊಂದು ವಿಳಂಬಗತಿಯಲ್ಲಿ ಸಾಗುತ್ತಿ ರುವುದು ಯಾರಿಗೂ ಶೋಭೆಯಲ್ಲ. ದೇಶದ ಯಾವುದೇ ರಾಜ್ಯದಲ್ಲಿ ಭ್ರಷ್ಟಾಚಾರದ ಬೃಹತ್‌ ಪ್ರಕರಣಗಳು ವರದಿಯಾದಾಗಲೆಲ್ಲ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸ ಬೇಕೆಂಬ ಆಗ್ರಹ ಕೇಳಿಬರುತ್ತದೆ.

ಆಯಾಯ ರಾಜ್ಯ ಸರಕಾರದ ಶಿಫಾರಸಿನ ಮೇಲೆ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುತ್ತದೆ. ಸಿಬಿಐ ತನಿಖೆಗೆ ಒಪ್ಪಿಸ ಲಾಗುವ ಬಹುತೇಕ ಪ್ರಕರಣಗಳು ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದವು ಗಳಾಗಿದ್ದು, ದಾಖಲೆಗಳ ಸಂಗ್ರಹಕ್ಕಾಗಿ ಹಲವು ಇಲಾಖೆಗಳಿಗೆ ಅಲೆದಾಟ, ಆರೋಪಕ್ಕೆ ಪೂರಕವಾದ ಸಾಕ್ಷ್ಯಾಧಾರಗಳ ಸಂಗ್ರಹ, ಸಾಕ್ಷಿಗಳ ಹಾಜರಾತಿ ಇವೆಲ್ಲದಕ್ಕೂ ಸಾಕಷ್ಟು ಸಮಯ ತಗಲುತ್ತದೆ.

ಇನ್ನು ಸಿಬಿಐ ಮೇಲೆ ಭಾರೀ ಪ್ರಮಾಣದ ಕಾರ್ಯ ದೊತ್ತಡ ವಿರುವುದು ಕೂಡ ತನಿಖೆ ಮತ್ತು ವಿಚಾರಣೆ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಸಿಬಂದಿ ಇಲ್ಲದಿರುವುದು, ನ್ಯಾಯಾಲಯಗಳಲ್ಲಿನ ಮೂಲಸೌಕರ್ಯ ಕೊರತೆ ಇವೆಲ್ಲವೂ ಸಿಬಿಐನ ಒಟ್ಟಾರೆ ಕಾರ್ಯವಿಧಾನದ ಮೇಲೆ ಪರಿಣಾಮ ಬೀರುತ್ತಿದೆ. ಇವೆಲ್ಲದರ ಫ‌ಲವಾಗಿ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ.

ಭ್ರಷ್ಟಾಚಾರ ಸಹಿತ ಗಂಭೀರ ಅಪರಾಧ ಪ್ರಕರಣಗಳ ನ್ಯಾಯಸಮ್ಮತ ತನಿಖೆ ಮತ್ತು ವಿಚಾರಣೆಯ ದೃಷ್ಟಿಯಿಂದ ಅವುಗಳ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸ ಲಾಗುತ್ತದೆ. ಆದರೆ ಸಿಬಿಐ ದೇಶದ ಇತರ ತನಿಖಾ ಸಂಸ್ಥೆಗಳು ಮತ್ತು ನ್ಯಾಯಾಲಯಗಳಂತೆ ಇಡೀ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿರುವುದರಿಂದಾಗಿ ತನಿಖಾ ಸಂಸ್ಥೆಯ ಮೇಲಣ ವಿಶ್ವಾಸಾರ್ಹತೆಯನ್ನು ಜನತೆ ಕಳೆದುಕೊಳ್ಳುವಂತಾಗಿದೆ.

ಈ ಕಾರಣದಿಂದಾಗಿಯೇ ಸಿಬಿಐ ಕೂಡ ಭ್ರಷ್ಟರು ಮತ್ತು ಅಪರಾಧಿಗಳ ಪಾಲಿಗೆ ಬೆದರು ಗೊಂಬೆಯಾಗಿ ಮಾರ್ಪಡುವಂತಾಗಿದೆ. ತ್ವರಿತಗತಿಯಲ್ಲಿ ತನಿಖಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದರ ಜತೆಯಲ್ಲಿ ಅಪರಾಧಿಗೆ ಶೀಘ್ರ ಶಿಕ್ಷೆಯಾಗಬೇಕು ಎಂಬ ಉದ್ದೇಶದಿಂದ ಪ್ರಕರಣಗಳನ್ನು ಸಿಬಿಐಗೆ ವಹಿಸುತ್ತ ಬರಲಾಗುತ್ತಿದೆಯಾದರೂ ಸಿಬಿಐ ಇಷ್ಟೊಂದು ಭಾರೀ ಸಂಖ್ಯೆಯ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿರುವುದನ್ನು ನೋಡಿದಾಗ ಜನರ ನಿರೀಕ್ಷೆ ಹುಸಿಯಾದಂತೆ ತೋರುತ್ತಿದೆ.

ದಶಕದ ಹಿಂದೆ ಸಿಬಿಐ ಸಾಕಷ್ಟು ವಿವಾದಕ್ಕೀಡಾಗಿತ್ತಲ್ಲದೆ ಆಡಳಿತಾರೂಢ ಪಕ್ಷಗಳು ಸಿಬಿಐಯನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊ ಳ್ಳುತ್ತಿದ್ದು ಅದು ಪಂಜರದ ಗಿಣಿಯಾಗಿ ಮಾರ್ಪಟ್ಟಿದೆ ಎಂದು ಸುಪ್ರೀಂ ಕೋರ್ಟ್‌ ಕಟು ಮಾತಿನಲ್ಲಿ ಸಿಬಿಐ ಕಾರ್ಯವೈಖರಿಯ ಬಗೆಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ ಈಗ ಸಿಬಿಐ ತನ್ನ ನಿಧಾನಗತಿಯ ತನಿಖಾ ಪ್ರಕ್ರಿಯೆಯಿಂದ ಸುದ್ದಿಯಲ್ಲಿದೆ.

ಸಿಬಿಐ ಮೇಲಣ ಜನರ ವಿಶ್ವಾಸವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ತತ್‌ಕ್ಷಣ ಕಾರ್ಯಪ್ರವೃತ್ತವಾಗಬೇಕಿದೆ. ಸಿಬಿಐಗೆ ಅಗತ್ಯ ಸಂಖ್ಯೆಯ ಸಿಬಂದಿಯನ್ನು ನೇಮಿಸುವುದರ ಜತೆಯಲ್ಲಿ, ತ್ವರಿತಗತಿಯ ನ್ಯಾಯಾಲಯಗಳನ್ನು ಸ್ಥಾಪಿಸಿ, ಪ್ರಕರಣಗಳ ಕ್ಷಿಪ್ರ ವಿಲೇವಾರಿಗೆ ಅನುವು ಮಾಡಿಕೊಡಬೇಕು. ಇದೇ ವೇಳೆ ರಾಜ್ಯ ಸರಕಾರಗಳು ಕೂಡ ಸಿಬಿಐಗೆ ಒಪ್ಪಿಸಲಾಗುವ ಪ್ರಕರಣಗಳ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಬೇಕು. ಸಿಬಿಐ ಕೂಡ ತನ್ನ ಹೊಣೆಗಾರಿಕೆ ಮತ್ತು ಜನತೆ ತನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಒಂದಿಷ್ಟು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು. ಇವೆಲ್ಲವೂ ಸಾಧ್ಯವಾದಾಗ ಮಾತ್ರ ಸಿಬಿಐ ತನ್ನ ಗತವೈಭವವನ್ನು ಕಂಡುಕೊಳ್ಳಲು ಸಾಧ್ಯ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.