ದಂಡ ಪರಿಷ್ಕರಣೆ ಇಂದು ಪ್ರಕಟ?

ಕನಿಷ್ಠ ಶೇ. 20ರಿಂದ ಗರಿಷ್ಠ 80ರಷ್ಟು ದರ ಪರಿಷ್ಕರಣೆ ಸಾಧ್ಯತೆ.

Team Udayavani, Sep 21, 2019, 5:10 AM IST

u-51

ಬೆಂಗಳೂರು: ಅಳೆದು-ತೂಗಿ ಕೊನೆಗೂ ಸರಕಾರ ಸಾರಿಗೆ ನಿಯಮಗಳ ಉಲ್ಲಂಘನೆಯ ದಂಡದ ಪ್ರಮಾಣವನ್ನು ತಗ್ಗಿಸಲು ಮುಂದಾಗಿದ್ದು, ಬಹುತೇಕ ಎಲ್ಲ 24 ನಿಯಮಗಳ ಉಲ್ಲಂಘನೆಗೆ ಕೇಂದ್ರ ಸರಕಾರ ವಿಧಿಸಿರುವ ದಂಡದ ಮೊತ್ತ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.

ವಿಕಾಸಸೌಧದಲ್ಲಿ ಶುಕ್ರವಾರ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಸಿದ ಬಳಿಕ ಈ ಸಂಬಂಧ ಸೂಚನೆ ನೀಡಲಾಗಿದೆ. ಶನಿವಾರ ಪರಿಷ್ಕೃತ ದರವನ್ನು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.

ಈ ಮೊದಲು ಗುಜರಾತ್‌ ಮಾದರಿಯಲ್ಲಿ ದರ ಪರಿಷ್ಕರಣೆಗೆ ನಿರ್ಧರಿಸಲಾಗಿತ್ತು. ಈಗ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಕುಡಿದು ವಾಹನ ಚಾಲನೆ ಹೊರತುಪಡಿಸಿ ಉಳಿದೆಲ್ಲ ನಿಯಮಗಳ ಉಲ್ಲಂಘನೆಯಲ್ಲೂ ದಂಡ ತಗ್ಗಿಸಲು ಸರಕಾರ ಮುಂದಾಗಿದೆ. ಈ ಸಂಬಂಧ ಸಾರಿಗೆ ಇಲಾಖೆಗೆ ಸೂಚಿಸಿದ್ದು, ಅಧಿಕಾರಿಗಳು ಪರಿಷ್ಕೃತ ಪಟ್ಟಿ ಸಿದ್ಧ ಪಡಿಸುತ್ತಿದ್ದಾರೆ.

ಕನಿಷ್ಠ 20ರಿಂದ ಗರಿಷ್ಠ 80ರಷ್ಟು ದರ ಪರಿಷ್ಕರಣೆ ಮಾಡಲು ಉದ್ದೇಶಿಸಿದ್ದು, ಸರಾಸರಿ ಶೇ. 50ರಷ್ಟು ಕಡಿಮೆ ಆಗಲಿದೆ. ಶನಿವಾರ ಸಾರಿಗೆ ಇಲಾಖೆಯು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಸಾರಿಗೆ ಸಚಿವರು ಅನುಮೋದನೆ ನೀಡಿದ ಅನಂತರ ಅಂತಿಮಗೊಳ್ಳಲಿದೆ. ಎರಡು- ಮೂರು ದಿನಗಳಲ್ಲಿ ಅಧಿಸೂಚನೆ ಹೊರ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

“ನಿಯಮದ ಪ್ರಕಾರ ನೇರವಾಗಿ ರಾಜ್ಯಕ್ಕೆ ಅಧಿಕಾರ ಇಲ್ಲದಿರಬಹುದು. ಆದರೆ ಪರೋಕ್ಷವಾಗಿ ಹೆಚ್ಚು-ಕಡಿಮೆ ಮಾಡಲು ಅವಕಾಶ ಇದೆ’ ಎಂದು ಕಾನೂನು ಇಲಾಖೆ ಅಭಿ ಪ್ರಾಯಪಟ್ಟಿದೆ. ಅದರಂತೆ ಈ ಮೊದಲು ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ಹೊರಡಿಸಿದ್ದ ಅಧಿ ಸೂಚನೆ ಯನ್ನು ಹಿಂಪಡೆದು, ಶೀಘ್ರದಲ್ಲೇ ಪರಿಷ್ಕರಣೆ ಮಾಡಿ ಮತ್ತೂಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ದಂಡ ಪರಿಷ್ಕರಣೆ ವಿಧಾನ ಶೇ. 80ರಷ್ಟು ಗುಜರಾತ್‌ ಮಾದರಿ ಆಗಿರಲಿದೆ. ಕೆಲವು ದಂಡದ ಪ್ರಮಾಣ ಗುಜರಾತ್‌ಗಿಂತ ಭಿನ್ನವಾಗಿಯೂ ಇರಲಿದೆ ಎಂದೂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.