ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ


Team Udayavani, Sep 19, 2024, 3:36 AM IST

Kapu2

ಕಾಪು: ಮಜೂರು ಗ್ರಾ. ಪಂ. ವ್ಯಾಪ್ತಿಯ ಪಾದೂರು ಐಎಸ್‌ಪಿಆರ್‌ಎಲ್‌ ಯೋಜನಾ ಪ್ರದೇಶದೊಳಗೆ ನಿರ್ಮಿಸಲು ಉದ್ದೇಶಿಸಿರುವ ಪಾದೂರು ಜಲ್ಲಿ ಕ್ರಷರ್‌ಗೆ ಜಮೀನು ನೀಡುವ ಬಗ್ಗೆ ಜಂಟಿ ಸರ್ವೆಗೆ ಆಗಮಿಸಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ಬುಧವಾರ ಹಿಂದಕ್ಕೆ ಕಳಿಸಿದ್ದಾರೆ.

ಐಎಸ್‌ಪಿಆರ್‌ಎಲ್‌ ಯೋಜನಾ ಪ್ರದೇಶದೊಳಗೆ ಸಂಗ್ರಹಗೊಂಡಿರುವ ಬಂಡೆ ಕಲ್ಲುಗಳನ್ನು ತೆರವುಗೊಳಿಸುವುದಕ್ಕಾಗಿ ಯೋಜನಾ ಪ್ರದೇಶದೊಳಗೆ ಜಲ್ಲಿ ಕ್ರಷರ್‌ ನಿರ್ಮಾಣ ಮಾಡುವ ಬಗ್ಗೆ ಮಜೂರು ಗ್ರಾ.ಪಂ.ಗೆ ಮಾಹಿತಿ ಸಿಕ್ಕಿತ್ತು. ಇದನ್ನು ವಿರೋಧಿಸಿ ಮಜೂರು ಗ್ರಾ. ಪಂ. ಗ್ರಾಮಸ್ಥರನ್ನು ಸೇರಿಸಿಕೊಂಡು ಜನಾಭಿಪ್ರಾಯ ಸಭೆ ನಡೆಸಿದ್ದು, ಅಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಕ್ರಷರ್‌ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿತ್ತು.

ಶಾಸಕರ ಬೆಂಬಲ
ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು ಗ್ರಾಮಸ್ಥರ ಆಗ್ರಹ ಮತ್ತು ಗ್ರಾಮ ಪಂಚಾಯತ್‌ ತೆಗೆದುಕೊಂಡಿದ್ದ ನಿರ್ಣಯಕ್ಕೆ ಬೆಂಬಲ ಸೂಚಿಸಿದ್ದು, ಯಾವುದೇ ಕಾರಣಕ್ಕೂ ಕ್ರಷರ್‌ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಇದನ್ನು ಸಭೆಗೆ ಆಗಮಿಸಿದ್ದ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿ‌ನಿ ಅವರಿಗೂ ಮನವರಿಕೆ ಮಾಡಿಕೊಡಲಾಗಿತ್ತು.

ಇದರ ನಡುವೆಯೂ ಬುಧವಾರ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿ‌ನಿ ನೇತೃತ್ವದ ಅಧಿಕಾರಿಗಳ ತಂಡ ಏಕಾಏಕಿಯಾಗಿ ಐಎಸ್‌ಪಿಆರ್‌ಎಲ್‌ ಪರಿಸರದಲ್ಲಿ ಜಂಟಿ ಸರ್ವೆಗಾಗಿ ಬಂದಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಜೂರು ಗ್ರಾ.ಪಂ. ಅಧ್ಯಕ್ಷ ಪ್ರಸಾದ್‌ ಶೆಟ್ಟಿ, ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್‌ ಶೆಟ್ಟಿ ಪಾದೂರು ನೇತೃತ್ವದ ತಂಡ ಸರ್ವೆಗೆ ವಿರೋಧ ವ್ಯಕ್ತಪಡಿಸಿ ಗ್ರಾ.ಪಂ. ಮಂಡಿಸಿದ್ದ ನಿರ್ಣಯದ ಪ್ರತಿಯನ್ನು ಅಧಿಕಾರಿಗಳಿಗೆ ನೀಡಿತು.

ಜಿಲ್ಲಾಧಿಕಾರಿಯವರ ಆದೇಶದಂತೆ ಸರ್ವೆಗೆ ಬಂದಿದ್ದು, ಜನರ ವಿರೋಧದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮರಳಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.