High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!
ಜೀವನಾಂಶದ ಕುರಿತ ಕಾನೂನು ಹೋರಾಟ ಕಳವಳಕಾರಿ ವಿಷಯವಾಗಿದೆ...
Team Udayavani, Sep 25, 2024, 1:00 PM IST
ನವದೆಹಲಿ: ಈ ಪ್ರಕರಣಗಳನ್ನು ಗಮನಿಸಿದರೆ “ಕಲಿಯುಗ ಬಂದಂತೆ ತೋರುತ್ತಿದೆ…ಹೀಗೆಂದು ಅಭಿಪ್ರಾಯವ್ಯಕ್ತಪಡಿಸಿದ್ದು ಅಲಹಾಬಾದ್ ಹೈಕೋರ್ಟ್. ಅದಕ್ಕೆ ಕಾರಣ 75-80 ವರ್ಷ ನಡುವಿನ ದಂಪತಿಯ ಜೀವನಾಂಶದ ಕಾನೂನು ಹೋರಾಟದ ಪ್ರಕರಣ!
ಪತ್ನಿಯ ಪರವಾಗಿ ಕೌಟುಂಬಿಕ ನ್ಯಾಯಾಲಯ ಜೀವನಾಂಶ ನೀಡಬೇಕೆಂದು ನೀಡಿರುವ ಆದೇಶದ ವಿರುದ್ಧ ಪತಿ, ಅಲಿಗಢ್ ನಿವಾಸಿ ಮುನೇಶ್ ಕುಮಾರ್ ಗುಪ್ತಾ(80ವರ್ಷ) ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ವೇಳೆ ಜಸ್ಟೀಸ್ ಸೌರಭ್ ಶ್ಯಾಮ್ ಶಂಶೇರಿ ಈ ಮೇಲಿನಂತೆ ಅಭಿಪ್ರಾಯವ್ಯಕ್ತಪಡಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಜಸ್ಟೀಸ್ ಸೌರಭ್ ಅವರು, ಜೀವನಾಂಶದ ಕುರಿತ ಕಾನೂನು ಹೋರಾಟ ಕಳವಳಕಾರಿ ವಿಷಯವಾಗಿದೆ. ಆದರೂ ದಂಪತಿಗೆ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಬಗ್ಗೆ ಸಲಹೆ ನೀಡಲು ಪ್ರಯತ್ನಿಸಿರುವುದಾಗಿ ವರದಿ ವಿವರಿಸಿದೆ.
ತನಗೆ ಕೌಟುಂಬಿಕ ನ್ಯಾಯಾಲಯ ನೀಡಿರುವ ಆದೇಶದ ಪ್ರಕಾರ ಪತಿ ಜೀವನಾಂಶ ನೀಡಬೇಕೆಂಬುದು ಪತ್ನಿಯ ಬೇಡಿಕೆಯಾಗಿದೆ. ಆದರೆ ಪತಿ ಗುಪ್ತಾ ಈ ಆದೇಶವನ್ನು ಪ್ರಶ್ನಿಸಿ ಪತ್ನಿಗೆ ನೋಟಿಸ್ ನೀಡಿದ್ದರು. ಏತನ್ಮಧ್ಯೆ ಅಲಹಾಬಾದ್ ಹೈಕೋರ್ಟ್, ಮುಂದಿನ ವಿಚಾರಣೆ ವೇಳೆ ದಂಪತಿ ಒಪ್ಪಂದದೊಂದಿಗೆ ಹಾಜರಾಗುವಂತೆ ಭರವಸೆ ವ್ಯಕ್ತಪಡಿಸಿ ವಿಚಾರಣೆ ಮುಂದೂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ದೇಶದ ಯಾವುದೇ ಭಾಗವನ್ನು ಪಾಕ್ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?
BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್
Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್ ಬುಲ್ ಶ್ವಾನ!
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!
Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್ ಲಾರಿ ಹಾಗೂ ಮೃತದೇಹ ಪತ್ತೆ
Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!
Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ
Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.