ಪತ್ನಿ ಮೃತಪಟ್ಟಿದ್ದಾಳೆಂದು ನಕಲಿ ಪ್ರಮಾಣ ಪತ್ರ ತಯಾರಿಸಿ ಪಾಲಿಸಿ ಹಣ ಪಡೆದವನಿಗೆ ಜೈಲು

ಭಾರತಿ ಯಾನೆ ಭಾಗ್ಯಲಕ್ಷ್ಮೀ ಎಂಬವರ ಜಂಟಿ ಖಾತೆಗೆ ವರ್ಗಾಯಿಸಿ ನಗದೀಕರಿಸಿಕೊಂಡಿದ್ದ.

Team Udayavani, Jan 7, 2022, 10:50 AM IST

ಪತ್ನಿ ಮೃತಪಟ್ಟಿದ್ದಾಳೆಂದು ನಕಲಿ ಪ್ರಮಾಣ ಪತ್ರ ತಯಾರಿಸಿ ಪಾಲಿಸಿ ಹಣ ಪಡೆದವನಿಗೆ ಜೈಲು

ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಜೀವವಿಮೆ ಪಾಲಿಸಿಯ ಹಣ ಪಡೆದ ವ್ಯಕ್ತಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಮಂಗಳೂರಿನ 2ನೇ ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.

ಶಿವರಾಮ ಶೆಣೈ (55) ಈ ಪ್ರಕರಣದ ಆರೋಪಿ. ಈತ ನಗರದ ಕೆಎಸ್‌ ರಾವ್‌ ರಸ್ತೆಯ ಪಾಪ್ಯುಲರ್‌ ಬಿಲ್ಡಿಂಗ್‌ನಲ್ಲಿರುವ ಜೀವವಿಮೆ ಕಚೇರಿಯಲ್ಲಿ ತನ್ನ ಪತ್ನಿ ಸುಮನಾ ಶೆಣೈ ಹೆಸರಿನಲ್ಲಿ ಇದ್ದ 2 ಎಲ್‌ಐಸಿ ಪಾಲಿಸಿಗಳಿಗೆ ತನ್ನನ್ನು ನಾಮ ನಿರ್ದೇಶಿತ ವ್ಯಕ್ತಿಯನ್ನಾಗಿ ಮಾಡಿಕೊಂಡಿದ್ದ. ಪತ್ನಿ ಜೀವಂತ ಇರುವಾಗಲೇ 20-8-2008ರಂದು ಮೃತಪಟ್ಟಿರುವುದಾಗಿ ನಕಲಿ ಪ್ರಮಾಣಪತ್ರ ತಯಾರಿಸಿ 2 ಪಾಲಿಸಿಗಳಿಂದ ಒಟ್ಟು 3,96,922 ರೂ. ಹಣವನ್ನು ಚೆಕ್‌ ಮೂಲಕ ಪಡೆದುಕೊಂಡಿದ್ದ.

ಬಳಿಕ ಆ ಹಣವನ್ನು ತನ್ನ ಹಾಗೂ ಭಾರತಿ ಯಾನೆ ಭಾಗ್ಯಲಕ್ಷ್ಮೀ ಎಂಬವರ ಜಂಟಿ ಖಾತೆಗೆ ವರ್ಗಾಯಿಸಿ ನಗದೀಕರಿಸಿಕೊಂಡಿದ್ದ. ಈ ಬಗ್ಗೆ ಆಗಿನ ಜೀವ ವಿಮಾ ನಿಗಮದ ಶಾಖಾ ಮ್ಯಾನೇಜರ್‌ ಗಣೇಶ್‌ ಕಾಮತ್‌ ಬಂದರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2ನೇ ಆರೋಪಿ ಭಾರತಿ ಯಾನೆ ಭಾಗ್ಯಲಕ್ಷ್ಮೀ ತಲೆಮರೆಸಿಕೊಂಡಿರುವುದರಿಂದ ಆಕೆಯ ವಿರುದ್ಧದ ಪ್ರಕರಣವನ್ನು ಬೇರ್ಪಡಿಸಲಾಗಿದೆ. ಸರಕಾರದ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮೋಹನ್‌ ಕುಮಾರ್‌ ಬಿ. ವಾದಿಸಿದ್ದರು.

ಟಾಪ್ ನ್ಯೂಸ್

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vitla

Bajpe: ವಿಷ ಸೇವನೆ; ವಿದ್ಯಾರ್ಥಿನಿ ಸಾ*ವು

dw

Kinnigoli: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

5(1)

Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

10

Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.