Janandolana Convention: ಮೈತ್ರಿ ಪಕ್ಷಗಳ ವಿರುದ್ಧ ಇಂದು ಕಾಂಗ್ರೆಸ್‌ ಶಕ್ತಿ ಪ್ರದರ್ಶನ

ಬಿಜೆಪಿ ಸರಕಾರದ ಅವಧಿಯ 21 ಹಗರಣಗಳ ದಾಖಲೆಗಳ ಬಿಡುಗಡೆಗೆ ಕಾಂಗ್ರೆಸ್‌ ತಯಾರಿ, 2 ಲಕ್ಷಕ್ಕೂ ಅಧಿಕ ಜನರು ಭಾಗಿ ನಿರೀಕ್ಷೆ

Team Udayavani, Aug 9, 2024, 6:30 AM IST

COngrss

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ-ಜಾತ್ಯತೀಯ ದಳ ನಡೆಸುತ್ತಿರುವ ಪಾದಯಾತ್ರೆಯ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್‌ ಶುಕ್ರವಾರ ಮೈಸೂರಿನಲ್ಲಿ ದೊಡ್ಡ ಮಟ್ಟದಲ್ಲಿ ಶಕ್ತಿ ಪ್ರದರ್ಶನಕ್ಕೆ ತಯಾರಿ ಮಾಡಿಕೊಂಡಿದೆ.

ಮೈತ್ರಿಕೂಟದ ಪಾದಯಾತ್ರೆಯ ಅಂತ್ಯದ ಮುನ್ನ ದಿನವಾದ ಶುಕ್ರವಾರ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿರುವ ಬಿಜೆಪಿ- ಜೆಡಿಎಸ್‌ ಸರಕಾರಗಳ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ಧದ ಜನಾಂದೋಲನ ಸಮಾವೇಶದಲ್ಲಿ ಶಕ್ತಿ ಪ್ರದರ್ಶಿಸುವ ಮೂಲಕ ಎದುರಾಳಿಗಳಿಗೆ ಖಡಕ್‌ ಸಂದೇಶ ರವಾನಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಬಿಜೆಪಿ-ಜೆಡಿ ಎಸ್‌ ಪಾದ ಯಾತ್ರೆ ಮೈಸೂರು ನಗರಕ್ಕೆ ಆ. 9ರ ರಾತ್ರಿ ಆಗಮಿಸಿ ವಾಸ್ತವ್ಯ ಹೂಡಿದರೂ ಮರುದಿನ 10ರಂದು ಬೃಹತ್‌ ಸಮಾವೇಶ ನಡೆಸುತ್ತಿದೆ. ಇದಕ್ಕೆ ಮುಂಚಿತವಾಗಿಯೇ ಶುಕ್ರವಾರ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶವನ್ನು ನಡೆಸಿ ಬಿಜೆಪಿ ಸರಕಾರದ ಅವಧಿಯಲ್ಲಿ ಆಗಿರುವ 21ಕ್ಕೂ ಹೆಚ್ಚು ಹಗರಣಗಳ ದಾಖಲೆಗಳನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ.

3 ಹಂತದ ವೇದಿಕೆ ನಿರ್ಮಾಣ
ಮಹಾರಾಜ ಕಾಲೇಜು ಮೈದಾನದಲ್ಲಿ 3 ಹಂತದ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವಾಟರ್‌ ಪ್ರೂಫ್ ವ್ಯವಸ್ಥೆ ಮಾಡಲಾಗಿದೆ. 300 ಮಂದಿ ಕುಳಿತುಕೊಳ್ಳುವಂತೆ ಮುಖ್ಯ ವೇದಿಕೆ ಇದ್ದು, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟ ಸದಸ್ಯರು, ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು, ನಿಗಮ ಮಂಡಳಿಗಳ ಅಧ್ಯಕ್ಷರು ಕುಳಿತುಕೊಳ್ಳಲಿದ್ದಾರೆ. ಎಡಭಾಗದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಎಡಭಾಗದ ವೇದಿಕೆಯಲ್ಲಿ ಜಿಲ್ಲಾ, ಬ್ಲಾಕ್‌ ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು ಆಸೀನರಾಗಲಿದ್ದಾರೆ. ಮುಂದುಗಡೆ 2 ಲಕ್ಷ ಮಂದಿ ಕುಳಿತುಕೊಳ್ಳುವುದಕ್ಕೆ ಅನುಕೂಲವಾಗುವಂತೆ ಶಾಮಿಯಾನ ಹಾಕಲಾಗಿದೆ. ಹತ್ತಿರದಲ್ಲಿ ವೀಕ್ಷಿಸುವಂತೆ ಪರದೆಗಳನ್ನು ಅಳವಡಿಸಲಾಗಿದೆ.

2 ಲಕ್ಷ ಜನರು ಭಾಗಿ
2 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸು ವಂತೆ ಸಿಎಂ ಗುರಿ ನೀಡಿದ್ದಾರೆ. ಈಗಾಗಲೇ ಬೆಂಗಳೂರು, ಮೈಸೂರು ನಗರದಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ರಾಮನಗರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ನಡೆಸಿ ಜವಾಬ್ದಾರಿ ನೀಡಿದ್ದಾರೆ. ಆರು ಜಿಲ್ಲೆಗಳಿಂದ ಜನರನ್ನು ಕರೆತರುವ ವ್ಯವಸ್ಥೆ ಮಾಡಿದರೂ ಮೈಸೂರು ಜಿಲ್ಲೆಯವರೇ ಒಂದು ಲಕ್ಷ ಜನರನ್ನು ಸೇರಿಸುವುದಕ್ಕೆ ಶಾಸಕರಿಗೆ ಟಾರ್ಗೆಟ್‌ ನೀಡಲಾಗಿದೆ. ಅಹಿಂದ ಸಂಘಟನೆಗಳ ಒಕ್ಕೂಟದಿಂದಲೂ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾಕ ಸಮುದಾಯದವರನ್ನು ಕರೆತರಲು ತಯಾರಿ ಮಾಡಿಕೊಳ್ಳಲಾಗಿದೆ.

ಒಂದೇ ವೇದಿಕೆಯಲ್ಲಿ 2 ಸಮಾವೇಶ
ಸಾಂಸ್ಕೃ ತಿಕ ನಗರಿ ಮೈಸೂರು ರಾಜಕೀಯ ಶಕ್ತಿ ಕೇಂದ್ರ ವಾಗಿ ಮಾರ್ಪಟ್ಟಿದ್ದು, ಶುಕ್ರವಾರ ಮತ್ತು ಶನಿವಾರ 2 ಬೃಹತ್‌ ಸಮಾವೇಶಗಳು ಒಂದೇ ಸ್ಥಳದಲ್ಲಿ ನಡೆಯುತ್ತಿವೆ. ವಿಶೇಷ ಎಂದರೆ ಎರಡು ರಾಜಕೀಯ ಪಕ್ಷಗಳ ಕಾರ್ಯಕ್ರ ಮಕ್ಕೆ ಒಂದೇ ವೇದಿಕೆ ಬಳಕೆಯಾಗುತ್ತಿದೆ. ಆ. 9ರಂದು ಕಾಂಗ್ರೆಸ್‌, 10ರಂದು ಬಿಜೆಪಿ ಬೃಹತ್‌ ಸಮಾವೇಶ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳ ನಿಲುವುಗಳು, ತತ್ವ , ಸಿದ್ಧಾಂತ, ಸಂಘಟನೆ ಬೇರೆಯಾದರೂ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ಒಂದೇ ವೇದಿಕೆಯಲ್ಲಿ ಒಬ್ಬರಾದ ಅನಂತರ ಮತ್ತೂಬ್ಬರು ಬೃಹತ್‌ ಸಮಾವೇಶ ಮಾಡುತ್ತಿದ್ದಾರೆ.

ಒಂದು ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಕುಳಿತಿದ್ದ ಅದೇ ಆಸನದಲ್ಲಿ ಮಾರನೇ ದಿನ ಅದೇ ಆಸನಗಳಲ್ಲಿ ಮತ್ತೂಂದು ಪಕ್ಷದ ಕಾರ್ಯಕರ್ತರು ಹಾಗೂ ಜನರು ಆಸೀನರಾಗಿ ರಾಜ್ಯದ ರಾಜಕೀಯ ಮುಖಂಡರು ಮಾಡುವ ಭಾಷಣ ಆಲಿಸಲಿ ದ್ದಾರೆ. ಕಾಂಗ್ರೆಸ್‌ ಮೊದಲಿಗೆ ತನ್ನ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಿದರೆ, ಬಿಜೆಪಿ ಮತ್ತು ಜೆಡಿಎಸ್‌ನವರು ಆರೋಪ, ಪ್ರತ್ಯಾರೋಪ ಟೀಕೆ ಟಿಪ್ಪಣಿಗಳನ್ನು ಜನರ ಮುಂದಿಡಲಿದ್ದಾರೆ.

ಒಂದೇ ವೇದಿಕೆಯಲ್ಲಿ 2 ಸಮಾವೇಶ: ಅಡಕತ್ತರಿಗೆ ಸಿಲುಕಿದ ಗುತ್ತಿಗೆದಾರ
ಮಹಾರಾಜ ಕಾಲೇಜು ಮೈದಾನದಲ್ಲಿ ಸಜ್ಜಾಗಿರುವ ಒಂದೇ ವೇದಿಕೆಯಲ್ಲಿ ಆ. 9ರಂದು ಕಾಂಗ್ರೆಸ್‌ ಜನಾಂದೋಲನ ಮತ್ತು ಆ. 10ರಂದು ಮೈಸೂರು ಚಲೋ ಪಾದಯಾತ್ರೆ ಸಮಾರೋಪ ನಡೆಯಲಿದ್ದು, ಹಣದ ವಿಚಾರಕ್ಕೆ ಪೆಂಡಾಲ್‌ ಗುತ್ತಿಗೆ ಪಡೆದಿರುವ ಶರೀಫ್ ಇಕ್ಕಟ್ಟಲ್ಲಿ ಸಿಲುಕಿದ್ದಾರೆ.

ಪೆಂಡಾಲ್‌ ಹಾಕಿ ಕೊಡುವಂತೆ ಕಾಂಗ್ರೆಸ್‌ನವರು ಮೊದಲಿಗೆ ತಿಳಿಸಿದ್ದರಿಂದ ತಯಾರಿ ಮಾಡಿಕೊಂಡಿದ್ದೆವು. ಬಳಿಕ ಬಿಜೆಪಿಯವರು, ನಾವೂ ಮರುದಿನ ಅಲ್ಲೇ ಸಮಾವೇಶ ನಡೆಸುತ್ತೇವೆ. ಅದೇ ಪೆಂಡಾಲ್‌ ಹಾಗೂ ವೇದಿಕೆ ಬಿಟ್ಟುಕೊಡಿ ಎಂದು ಕೇಳಿದ್ದರಿಂದ ಒಪ್ಪಿಲ್ಲ. ಆದರೆ ಈಗ ಎರಡೂ ಪಕ್ಷದವರು ಸಂಪೂರ್ಣ ವೆಚ್ಚ ಕೊಡಲು ನಿರಾಕರಿಸುತ್ತಿದ್ದಾರೆ. ಅವರ ಬಳಿಯೂ ಹಣ ಪಡೆದುಕೊಳ್ಳುತ್ತೀರಲ್ಲ, ನಾವೇಕೆ ಸಂಪೂರ್ಣ ವೆಚ್ಚ ಕೊಡಬೇಕು ಎಂದು ಎರಡು ಪಕ್ಷದವರೂ ಪ್ರಶ್ನಿಸುತ್ತಿದ್ದಾರೆ. ಇದರಿಂದ ನನಗೆ ನಷ್ಟವಾಗುತ್ತಿದೆ ಎಂದು ಪೆಂಡಾಲ್‌ ಶರೀಫ್ ಸುದ್ದಿಗಾರರಲ್ಲಿ ಬೇಸರ  ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.