ನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆನ್ನುವುದು ಸುಳ್ಳು! ನ್ಯಾಯಮೂರ್ತಿ ಎನ್.ವಿ.ರಮಣ
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ
Team Udayavani, Dec 26, 2021, 8:43 PM IST
ನವದೆಹಲಿ: ನ್ಯಾಯಾಧೀಶರನ್ನು ನ್ಯಾಯಾಲಯದ ಕೊಲಿಜಿಯಂ ವ್ಯವಸ್ಥೆಯೇ ನೇಮಕ ಮಾಡುತ್ತದೆ…
ಹೀಗೊಂದು ಜನಪ್ರಿಯ ಅಭಿಪ್ರಾಯವಿದೆ. ಆದರೆ ಅದು ಸುಳ್ಳು ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಕಾನೂನು ಕಾಲೇಜೊಂದರಲ್ಲಿ ದತ್ತಿ ಉಪನ್ಯಾಸ ನೀಡಿದ ಅವರು ಮೇಲಿನಂತೆ ಮಾತನಾಡಿದರು.
ಇತ್ತೀಚೆಗೆ ನ್ಯಾಯಾಧೀಶರು ತಾವೇ ನ್ಯಾಯಧೀಶರನ್ನು ನೇಮಿಸುತ್ತಾರೆ ಎಂಬ ಮಾತು ಪದೇಪದೆ ಪುನರುಕ್ತಿಗೊಳ್ಳುತ್ತಿದೆ. ಆದರೆ ಈ ಆಯ್ಕೆಪ್ರಕ್ರಿಯೆಯಲ್ಲಿ ಹಲವು ಅಂಗಗಳು ಮುಖ್ಯ ಪಾತ್ರ ವಹಿಸುತ್ತವೆ. ಕೇಂದ್ರ ಕಾನೂನು ಸಚಿವಾಲಯ, ರಾಜ್ಯ ಸರ್ಕಾರಗಳು, ರಾಜ್ಯಪಾಲರು, ಉಚ್ಚ ನ್ಯಾಯಾಲಯಗಳ ಕೊಲಿಜಿಯಂ, ಗುಪ್ತಚರ ಸಂಸ್ಥೆ, ನ್ಯಾಯಾಲಯ, ಅಂತಿಮವಾಗಿ ಉನ್ನತ ಸಮಿತಿ ನ್ಯಾಯಾಧೀಶರ ಆಯ್ಕೆಯನ್ನು ನಿರ್ಧರಿಸುತ್ತದೆ ಎಂದು ವಿವರಿಸಿದ್ದಾರೆ. ಹಾಗೆಯೇ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಕಡ್ಡಾಯವಾಗಿ ಸಮಯಮಿತಿ ಪಾಲನೆ ಮಾಡಲೇಬೇಕು. ಉಚ್ಚ ನ್ಯಾಯಾಲಯಗಳು ಮಾಡಿರುವ ಹಲವು ಶಿಫಾರಸುಗಳನ್ನು ಇನ್ನೂ ಕೇಂದ್ರ ಕಾನೂನು ಸಚಿವಾಲಯ ಸರ್ವೋಚ್ಚ ನ್ಯಾಯಾಲಯಕ್ಕೆ ಕಳುಹಿಸಿಕೊಟ್ಟೇ ಇಲ್ಲ ಎಂದು ಮುಖ್ಯ ನ್ಯಾ.ರಮಣ ಹೇಳಿದ್ದಾರೆ.
ಇದನ್ನೂ ಓದಿ : ಮಂಗಳೂರು : ಬಸ್ ಸಿಬ್ಬಂದಿಗಳ ಈ ಕಾರ್ಯಕ್ಕೆ ಪೊಲೀಸ್ ಆಯುಕ್ತರಿಂದ ಶ್ಲಾಘನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.