Juvenile delinquency: ರಾಜ್ಯದಲ್ಲಿ ಬಾಲಾಪರಾಧ ಪ್ರಕರಣ ಹೆಚ್ಚಳ!

ರಾಜಧಾನಿ ಬೆಂಗಳೂರಿನಲ್ಲೇ ಅತಿ ಹೆಚ್ಚು ಅನಂತರದಲ್ಲಿ ತುಮಕೂರು, ಬೆಂಗಳೂರು ಗ್ರಾಮಾಂತರ

Team Udayavani, Aug 31, 2024, 6:55 AM IST

balaparadha

ಬೆಂಗಳೂರು: ಮಕ್ಕಳ ಸಂರಕ್ಷಣೆ, ವಿದ್ಯಾಭ್ಯಾಸ, ಕ್ರೀಡೆ ಸೇರಿ ಇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಟ್ಟದಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದರೂ ಬಾಲಾಪರಾಧ ಕೃತ್ಯಗಳಿಗೆ ಕಡಿವಾಣ ಬಿದ್ದಿಲ್ಲ. ರಾಜ್ಯಾದ್ಯಂತ ಕಳೆದ ಐದು ವರ್ಷಗಳಲ್ಲಿ 4,788 ಪ್ರಕರಣಗಳು ದಾಖಲಾಗಿವೆ.

ಹೌದು! ಉತ್ತಮ ಕೌಟುಂಬಿಕ ಪರಿಸರ, ಆರ್ಥಿಕ ಭದ್ರತೆ, ಹದಿಹರೆಯುವವರಿಗೆ ಉತ್ತಮ ಮಾರ್ಗದರ್ಶನ ಇಲ್ಲದಿರುವುದು, ಐಷಾರಾಮಿ ಜೀವನ, ಹೆಚ್ಚು ಹಣ ಸಂಪಾದಿಸಬೇಕೆಂಬ ಹಂಬಲ, ಆಮಿಷಗಳಿಗೆ ಒಳಗಾಗುವುದು, ಸಾಮಾಜಿಕ ಜಾಲತಾಣಗಳಿಂದ ನಿಂದನೆ, ಹೀಗೆ ನಾನಾ ಕಾರಣಗಳಿಂದಾಗಿ ಬಾಲ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಚಿಕ್ಕಪುಟ್ಟ ಕಳ್ಳತನದಿಂದ ಹಿಡಿದು ಕೊಲೆ ಮಾಡುವಂತಹ ದೊಡ್ಡ ಅಪರಾಧ ಕೃತ್ಯಗಳಲ್ಲಿ ಮಕ್ಕಳು ಭಾಗಿಯಾಗಿರು ವುದು ತೀರಾ ಆತಂಕಕಾರಿ ಸಂಗತಿಯಾಗಿದೆ.

ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ-ಅಂಶಗಳ ಪ್ರಕಾರ, ಕ್ಷುಲ್ಲಕ, ಗಂಭೀರ ಹಾಗೂ ಘೋರ ಕೃತ್ಯಗಳಿಗೆ ಸಂಬಂಧಿಸಿ ಐದು ವರ್ಷಗಳಲ್ಲಿ 4,788 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶೇ. 50ರಷ್ಟು ಕ್ಷುಲ್ಲಕ, ಶೇ. 27ರಷ್ಟು ಗಂಭೀರ ಹಾಗೂ ಶೇ. 21ರಷ್ಟು ಘೋರ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳು. ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು 1,315 ಪ್ರಕರಣಗಳು ದಾಖಲಾಗಿವೆ. ಅನಂತರ ಮೈಸೂರು ಜಿಲ್ಲೆಯಲ್ಲಿ 509 ಪ್ರಕರಣ, ಬೆಂಗಳೂರು ಗ್ರಾಮಾಂತರದಲ್ಲಿ 383, ವಿಜಯಪುರ ಜಿಲ್ಲೆಯಲ್ಲಿ 347, ಧಾರವಾಡ ಜಿಲ್ಲೆಯಲ್ಲಿ 264 ಪ್ರಕರಣಗಳು ದಾಖಲಾಗಿವೆ ಎಂದು ನಿರ್ದೇಶನಾಲಯದ ಅಧಿಕಾರಿಗಳು ತಿಳಿಸುತ್ತಾರೆ.

ಶಾಲಾ ಹಂತ ಮುಗಿಸುತ್ತಿರುವ 15ರಿಂದ 16 ವರ್ಷದ ಮಕ್ಕಳು ಹಾಗೂ ಕಾಲೇಜು ಮೆಟ್ಟಿಲೇರಿ, ಉತ್ತಮ ಭವಿಷ್ಯ ನಿರ್ಧರಿಸಿಕೊಳ್ಳುವಂತಹ 17ರಿಂದ 18 ವಯೋಮಾನದ ಮಕ್ಕಳು ಇಂತಹ ಅಪರಾಧ ಕೃತ್ಯಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಈ ಬಗ್ಗೆ ಪಾಲಕರು ಗಮನಹರಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಕಳೆದ 5 ವರ್ಷಗಳಲ್ಲಿ 15-16 ವಯೋಮಾನದವರು 1,356 ಪ್ರಕರಣಗಳು ಹಾಗೂ 17ರಿಂದ 18 ವರ್ಷದ 3,169 ಮಕ್ಕಳ ವಿರುದ್ಧ ಪ್ರಕರಣಗಳು ದಾಖಲಾಗಿರುವುದನ್ನು ಮೂಲಗಳು ತಿಳಿಸಿವೆ.

“ಮಕ್ಕಳ ಸಂರಕ್ಷಣಾ ನಿರ್ದೇಶನಾಲಯದಿಂದ ಶಾಲಾ-ಕಾಲೇಜುಗಳ ಮಕ್ಕಳಲ್ಲಿ ಅಪರಾಧಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪ್ರತೀ ಜಿಲ್ಲೆಗಳಲ್ಲಿ ಕೈಗೊಳ್ಳಲಾಗುತ್ತದೆ. 16-17 ವಯೋಮಿತಿಯ ಮಕ್ಕಳು ಹೆಚ್ಚಾಗಿ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಈ ಕುರಿತು ಪೋಷಕರು ಸೇರಿ ಎಲ್ಲರೂ ಗಮನಹರಿಸಬೇಕಾಗಿದೆ.”  – ಡಾ| ಎಂ.ಆರ್‌. ರವಿ, ನಿರ್ದೇಶಕ, ರಾಜ್ಯದ ಮಕ್ಕಳ ರಕ್ಷಣಾ ನಿರ್ದೇಶನಾಲಯ

– ಭಾರತಿ ಸಜ್ಜನ್‌

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Munirathna

MLA Munirathna: ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

18-ct-ravi

Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.