![1-vijayendra](https://www.udayavani.com/wp-content/uploads/2024/07/1-vijayendra-415x277.jpg)
K.R. ಪುರ ತೂಗುಸೇತುವೆ ಮೇಲೆ ಹರಿದ ರಾಷ್ಟ್ರಧ್ವಜ ಹಾರಾಟ: ಪ್ರಕರಣ ದಾಖಲು
Team Udayavani, Oct 31, 2023, 6:13 PM IST
![Bangalore torn flag](https://www.udayavani.com/wp-content/uploads/2023/10/Bangalore-torn-flag-620x455.jpg)
ಕೆ.ಆರ್.ಪುರ: ಕೆಆರ್ ಪುರ ತೂಗುಸೇತುವೆ ಮೇಲೆ ತಿರಂಗ ರಾಷ್ಟ್ರಧ್ವಜ ಹರಿದು ಇಬ್ಭಾಗವಾಗಿರುವ ಕುರಿತು ಸಾಮಾಜಿಕ ಹೋರಾಟಗಾರ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಆಗಸ್ಟ್ 15ರಂದು ರಾಷ್ಟ್ರಧ್ವಜ ವನ್ನು ಐವತ್ತು ಅಡಿ ಎತ್ತರದ ತುದಿಯ ಮೇಲೆ ಕಟ್ಟಲಾಗಿತ್ತು, ಮಳೆ ಗಾಳಿ, ಬಿಸಿಲಿಗೆ ತಿರಂಗ ಬಾವುಟ ಹರಿದು ಇಬ್ಭಾಗವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೂಗುಸೇತುವೆ ನಿರ್ವಹಣೆ ಮಾಡುತ್ತಿದ್ದು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಇದರಿಂದ ಹರಿದು ಇಬ್ಬಾಗವಾಗಿದೆ ರಾಷ್ಟ್ರಧ್ವಜ ಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.
ಕಾಡುಗುಡಿ ನಿವಾಸಿ ಸಾಮಾಜಿಕ ಹೋರಾಟಗಾರ ಸುಭಾಷ್ ಎಂಬುವವರು ತೂಗುಸೇತುವೆ ಮೇಲೆ ತೆರಳುವಾಗ ಸೇತುವೆ ಮೇಲೆ ಕಟ್ಟಿರುವ ಬಾವುಟ ಹರಿದಿರುವುದನ್ನು ಗಮನಿಸಿದ್ದು ತದನಂತರ ಸ್ಥಳೀಯ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ದೇಶದ್ರೋಹಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಷ್ಟ್ರಧ್ವಜವನ್ನು ಧ್ವಜಾರೋಹಣ ಹಾರಾಟ ಮಾಡಿದ ನಂತರ ಸೂರ್ಯಾಸ್ತ ಮುಂಚಿತವಾಗಿ ಕೆಳಗೆ ಇಳಿಸಿ ಮಡಚಿ ಇಡುವುದು ಗೌರವಯುತವಾದ ಪಧ್ಧತಿ, ಆದರೆ ರಾಷ್ಟ್ರದ ಪ್ರತೀಕದ ಸಂಕೇತವಾಗಿರುವ ರಾಷ್ಟ್ರ ಧ್ವಜವನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ತಿಂಗಳುಗಳಿಂದ ತೂಗು ಸೇತುವೆ ಮೇಲೆ ಕಟ್ಟಿರುವುದರಿಂದ ರಾಷ್ಟ್ರಧ್ವಜ ಹರಿದು ಇಬ್ಭಾಗವಾಗಿದೆ ಈ ಕುರಿತು ಇದಕ್ಕೆ ಕಾರಣರಾದವರ ಮೇಲೆ ಕ್ರಮ ಜರುಗಿಸುವಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸುಭಾಷ್ ತಿಳಿಸಿದರು.
ಟಾಪ್ ನ್ಯೂಸ್
![1-vijayendra](https://www.udayavani.com/wp-content/uploads/2024/07/1-vijayendra-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.