ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ : ಮಾಹಿತಿ ತರಿಸಿ ಅವಲೋಕಿಸುವೆ ; ಅಬ್ದುಲ್ ಅಜೀಮ್
Team Udayavani, Mar 23, 2022, 9:28 PM IST
ಕಲಬುರಗಿ: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯ ಜಾತ್ರೆಗಳಲ್ಲಿನ ಮಳಿಗೆ ಸ್ಥಾಪನೆಯಲ್ಲಿ ಮುಸ್ಲಿಂ ರಿಗೆ ನಿರ್ಬಂಧ ಹೇರಿರುವ ಕುರಿತಾಗಿ ಮಾಹಿತಿ ತರಿಸಿ ನಂತರ ಅವಲೋಕನ ನಡೆಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದರು.
ಆಯೋಗದ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರೆಗಳ ಮಳಿಗೆಗಳನ್ನು ಮುಸ್ಲಿಂ ವ್ಯಾಪಾರಸ್ಥರಿಗೆ ನೀಡಿಲ್ಲ ಎಂಬುದನ್ನು ಮಾಧ್ಯಮದಲ್ಲೇ ನೋಡಿದ್ದೇನೆ ಹಾಗೂ ಓದಿದ್ದೇನೆ. ಹೀಗಾಗಿ ವರದಿ ಕೇಳಲಾಗಿದೆ. ಮಾಹಿತಿ ಬಂದ ನಂತರವಷ್ಟೇ ಪ್ರತಿಕ್ರಿಯಿಸುವೆ ಎಂದರು.
ಅಲ್ಪಸಂಖ್ಯಾತರ ಮೇಲೆ ಯಾವುದೇ ನಿಟ್ಟಿನಲ್ಲಿ ದೌರ್ಜನ್ಯ ನಡೆದರೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸುವಂತೆ ಪೊಲೀಸ್ ರಿಗೆ ನಿರ್ದೇಶನ ನೀಡಲಾಗಿದೆ. ಆದರೆ ಶಿವಮೊಗ್ಗ, ಉಡುಪಿ ಜಾತ್ರೆಯಲ್ಲಿನ ಮಳಿಗೆಗಳಲ್ಲಿ ಮುಸ್ಲಿಂರಿಗೆ ನೀಡದೇ ಇರುವುದರ ವಿಷಯ ಬೇರೆಯದ್ದೇ . ಹೀಗಾಗಿ ವರದಿ ಬಂದ ನಂತರವಷ್ಟೇ ಉತ್ತರ ನೀಡಿದರೆ ಸಮಂಜಸವಾಗಿರುತ್ತದೆ ಎಂದರು.
ಭಗವದ್ಗೀತೆ ಪಠ್ಯದಲ್ಲಿ ಅಳವಡಿಕೆ ಕುರಿತಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. ಆದರೆ ಭಗವದ್ಗೀತೆ, ಖುರಾನ್, ಬೈಬಲ್ ಕುರಿತಾಗಿಯೂ ಸಲಹೆ ಪಡೆದಿದ್ದಾರೆ. ಸೇರ್ಪಡೆ ಕುರಿತಾಗಿ ಆದೇಶ ಹೊರ ಬಿದ್ದ ನಂತರ ಪ್ರತಿಕ್ರಿಯಿಸುವೆ ಎಂದರು.
ಹಿಜಾಬ್ ಬಳಕೆ ಕುರಿತಾಗಿ ಈಗಾಗಲೇ ಹೈಕೋರ್ಟ್ ತನ್ನ ತೀರ್ಪು ನೀಡುವ ನೀಡಿದೆ. ಶಾಲಾ- ಕಾಲೇಜ್ದೊಳಗೆ ಬಳಕೆಗೆ ನಿರ್ಬಂಧ ಹೇರಲಾಗಿದೆ. ಆದರೆ ಹೊರಗಡೆ ಬಳಕೆಗೆ ಆಕ್ಷೇಪವಿಲ್ಲ. ಹೀಗಾಗಿ ನೆಲದ ಕಾನೂನು ಗೌರವಿಸಿ ಹೈಕೋರ್ಟ್ ತೀರ್ಪು ನೀಡಿದೆ. ಸ್ವಾಗತಿಸುವುದು ಆದ್ಯ ಕರ್ತವ್ಯವಾಗಿದೆ ಎಂದರು.
ಇದನ್ನೂ ಓದಿ : ಮುಂಬೈ-ಅಹಮದಾಬಾದ್: ಬುಲೆಟ್ ರೈಲು ಯೋಜನೆಗೆ ಶೇ.89ರಷ್ಟು ಭೂಮಿ ಸ್ವಾಧೀನ: ಸಚಿವ ವೈಷ್ಣವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.