ಕಲಘಟಗಿ ಪೊಲೀಸ್‌ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ


Team Udayavani, Feb 9, 2023, 9:00 AM IST

add-thumb-1

– ನೀಗಿದೆ ಪೊಲೀಸ್‌ ಫೈರಿಂಗ್‌ ತರಬೇತಿ ಮೈದಾನದ ಕೊರತೆ

– ಸ್ಥಳೀಯ ಪೊಲೀಸರ ಶ್ರಮಕ್ಕೆ ಎಸ್ಪಿ ಧನ್ಯತೆ

– ಅಪರಾ ಧಿಗಳ ಹೆಡೆಮುರಿ ಕಟ್ಟುವಲ್ಲಿ ಆರಕ್ಷಕ ನಿರೀಕ್ಷಕ ಶ್ರೀಶೈಲ್‌ ಕೌಜಲಗಿ ನೇತೃತ್ವದ ಸಿಬ್ಬಂದಿ ಯಶಸ್ವಿ

– ಕಲಘಟಗಿ ತಾಲೂಕಿನಾದ್ಯಂತ ಅಕ್ರಮ ಚಟುವಟಿಕೆಗಳಿಗೆ ಬಿದ್ದಿದೆ ಕಡಿವಾಣ

ಕಲಘಟಗಿ: ತಾಲೂಕಿನ ಗಂಜೀಗಟ್ಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿರುವ ಪೊಲೀಸ್‌ ಇಲಾಖೆ ಮಾಲೀಕತ್ವದ 12 ಎಕರೆ ಜಮೀನಿನಲ್ಲಿ ಇಲ್ಲಿನ ಪೊಲೀಸ್‌ ಅಧಿ ಕಾರಿ ಮತ್ತು ಸಿಬ್ಬಂದಿ ಒಂದು ತಿಂಗಳು ಕಾಲ ನಿರ್ವಹಿಸಿದ್ದ ಪರಿಶ್ರಮದಿಂದ ಜಿಲ್ಲೆಯಲ್ಲಿ ಪೊಲೀಸ್‌ ಫೈರಿಂಗ್‌ ತರಬೇತಿ ಮೈದಾನದ ಕೊರತೆ ನೀಗಿಸಿದಂತಾಗಿದೆ.

ಬೆಳಗಾವಿ ಉತ್ತರ ವಲಯ ಪೊಲೀಸ್‌ ಮಹಾನಿರೀಕ್ಷಕ ಎನ್‌. ಸತೀಶಕುಮಾರ ಅವರು ಜಿಲ್ಲೆಯ ಹಿರಿಯ ಪೊಲೀಸ್‌ ಅಧಿ ಕಾರಿಗಳ ಜತೆ ಸೇರಿ ನವೆಂಬರ್‌ನಲ್ಲಿ ಲೋಕಾರ್ಪಣೆಗೊಳಿಸಿದ್ದಾರೆ.

ಜಿಲ್ಲೆಯ ಪೊಲೀಸರಿಗೆ ಫೈರಿಂಗ್‌ ತರಬೇತಿಗಾಗಿ ಒಂದು ಪ್ರತ್ಯೇಕ ಮೈದಾನವಿಲ್ಲದೇ ಅಭ್ಯಾಸಕ್ಕಾಗಿ ದೂರದ ಹಾವೇರಿ ಜಿಲ್ಲೆ ಗಂಗಿಬಾವಿಯಲ್ಲಿನ 10ನೇ ಬಟಾಲಿಯನ್‌ ಮೈದಾನಕ್ಕೆ ಹೋಗಬೇಕಿತ್ತು. ಇಲಾಖೆ ಸ್ಥಳೀಯ ಸಿಬ್ಬಂದಿ ವರ್ಗ ಸಣ್ಣ ಸಣ್ಣ ಗುಡ್ಡ, ಕುರುಚಲು ಗಿಡಗಂಟಿಗಳಿಂದ ಕೂಡಿದ್ದ ಪೊಲೀಸ್‌ ಇಲಾಖೆ ಮಾಲೀಕತ್ವದ ಈ ಪ್ರದೇಶವನ್ನು ಅಗತ್ಯವಿರುವಷ್ಟು ಸಮತಟ್ಟುಗೊಳಿಸಿ ಗುಂಡು ಗುರಿ(ಫೈರಿಂಗ್‌) ಅಭ್ಯಾಸಕ್ಕೆ ಸುಸಜ್ಜಿತ ಮೈದಾನ ಸಿದ್ಧಗೊಳಿಸಲಾಗಿದೆ.

ಜಿಲ್ಲಾ ಪೊಲೀಸ್‌ ಇಲಾಖೆ ಜತೆಗೆ ಫೈರಿಂಗ್‌ ತರಬೇತಿ ಅಗತ್ಯವಿರುವ ಮಹಾನಗರ ಪೊಲೀಸ್‌, ಪೊಲೀಸ್‌ ತರಬೇತಿ ಶಾಲೆ, ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ, ಅರಣ್ಯ ತರಬೇತಿ ಅಕಾಡೆಮಿ, ಅಬಕಾರಿ ಇಲಾಖೆ, ಎನ್‌ಸಿಸಿ ಸೇರಿದಂತೆ ಫೈರಿಂಗ್‌ ತರಬೇತಿ ಅಭ್ಯಾಸ ಅಗತ್ಯವಿರುವ ಇತರೆ ಇಲಾಖೆಯವರಿಗೂ ಈ ಮೈದಾನ ಅನುಕೂಲವಾಗಲಿದೆ ಎಂದು ಜಿಲ್ಲಾ ಪೊಲೀಸ್‌ ಅಧಿಧೀಕ್ಷಕ ಲೋಕೇಶ್‌ ಜಗಲಾಸರ ಅವರು ಸಂತಸ ವ್ಯಕ್ತಪಡಿಸಿರುವುದು ಸ್ಥಳೀಯ ಪೊಲೀಸರ ಶ್ರಮಕ್ಕೆ ಧನ್ಯತೆ ತೋರಿದಂತಾಗಿದೆ.

ಹಲವಾರು ವರ್ಷಗಳಿಂದ ಈ ಭಾಗದ ಜನರು ಫೈರಿಂಗ್‌ ತರಬೇತಿ ಮೈದಾನದಲ್ಲಿ ಓಡಾಡುತ್ತ ದನಗಳನ್ನು ಮೇಯಿಸುತ್ತ ಇತರೇ ಕೆಲಸಗಳಲ್ಲಿ ತೊಡಗಿದವರಿಗೆ ಅಲ್ಲದೇ ಅವರ ಎಲ್ಲ ಚಟುವಟಿಕೆಗಳಿಗೂ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಉಪಾಧಿಧೀಕ್ಷಕ ಎಂ.ಬಿ.ಸಂಕದ ಅವರು ಪ್ರೀತಿಯಿಂದಲೇ ತಿಳಿಸಿದ್ದಾರೆ.

ಇತ್ತೀಚೆಗೆ ತಾಲೂಕಿನಾದ್ಯಂತ ಕೊಲೆ, ದರೋಡೆ ಮುಂತಾದ ಕ್ರಿಮಿನಲ್‌ ಪ್ರಕರಣಗಳನ್ನು ತ್ವರಿತವಾಗಿ ಭೇದಿಸಿ ಅಪರಾಧಿಗಳ ಹೆಡೆಮುರಿ ಕಟ್ಟುವಲ್ಲಿಯೂ ಆರಕ್ಷಕ ನಿರೀಕ್ಷಕ ಶ್ರೀಶೈಲ್‌ ಕೌಜಲಗಿ ನೇತೃತ್ವದ ಸಿಬ್ಬಂದಿ ವರ್ಗ ಯಶಸ್ವಿಯಾಗಿದ್ದು, ತಾಲೂಕಿನ ಜನರಿಗೆ ನೆಮ್ಮದಿ ತಂದಿದೆ.

ಹುಬ್ಬಳ್ಳಿಯಿಂದ ದಾಂಡೇಲಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಅಪಹರಣಗೊಳಿಸಿದ ಪ್ರಕರಣವನ್ನು ಚಾಕಚಕ್ಯತೆಯಿಂದ ಕಾರ್ಯೋನ್ಮುಖರಾಗಿ ಶಿಗ್ಗಟ್ಟಿ ಮತ್ತು ಅರೆಬಸನಕೊಪ್ಪ ಗ್ರಾಮಗಳಲ್ಲಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವಾಗಲೇ ಧಾವಿಸಿ ಲಾರಿ ಮತ್ತು ಮಾಲು ಸಹಿತ ಆರೋಪಿಯನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಎಮ್ಮೆ ಕೋಣಗಳನ್ನು ಖರೀದಿಸಿ ಕೇರಳ ರಾಜ್ಯಕ್ಕೆ ಸಾಗಿಸುವ ಅಕ್ರಮ ಪ್ರಕರಣಗಳನ್ನು ಸಾಗಿಸುವ ಪೂರ್ವದಲ್ಲಿಯೇ ಭೇದಿಸಿ ಅಕ್ರಮ ಸಾಗಾಟಕ್ಕೆ ಬಳಸಿದ ಲಾರಿ, ಎರಡು ಕಾರುಗಳನ್ನು ಜಪ್ತಿ ಮಾಡಿ ಕ್ರಮ ಜರುಗಿಸಿ ರುವುದಲ್ಲದೇ ಎಲ್ಲ ಮೂಕ ಪ್ರಾಣಿಗಳನ್ನು ಬುಡರ ಸಿಂಗಿ ಗೋಶಾಲೆಗೆ ಸ್ಥಳಾಂತರಿಸಿದ್ದಾರೆ.ಇದಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬಂಗಾರದ ಆಭರಣಗಳನ್ನು ಧರಿಸಿ ಒಂಟಿಯಾಗಿ ಓಡಾಡುವ 40 ರಿಂದ 45ರ ವಯೋಮಾನದ ಮಹಿಳೆಯರನ್ನು ಗುರುತಿಸಿ, ತಿಂಗಳು ಕಾಲ ಅವರನ್ನು ಹಿಂಬಾಲಿಸಿ ರಸ್ತೆಯಲ್ಲಿ ಯಾರೂ ಸಂಚರಿಸದ ಸಮಯದಲ್ಲಿ ನೇರವಾಗಿ ಅವರ ಮನೆಯೊಳಗೆ ಕುಡಿಯುವ ನೀರು ಬೇಕೆಂದು ಹೇಳಿ ಸೇರಿಕೊಂಡು ನಂತರ ಮಾರಕಾಸ್ತ್ರದಿಂದ ತಲೆ-ಕುತ್ತಿಗೆಗೆ ಇರಿದು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿಕೊಂಡು ಸಾಗ ಹಾಕಿ ಅವರ ಮೈಮೇಲಿದ್ದ ಬಂಗಾರ ಆಭರಣಗಳನ್ನು ತೆಗೆದುಕೊಂಡು ಆಮೇಲೆ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಮೃತ ದೇಹವನ್ನು ಎಸೆದು, ಸಾಕ್ಷಿ ನಾಶಪಡಿಸಲು ಪೆಟ್ರೋಲ್‌, ಡಿಸೇಲ್‌ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ ಪ್ರಕರಣ ಸ್ಥಳೀಯ ಹಾಗೂ ಜಿಲ್ಲಾ ಪೊಲೀಸರಿಗೆ ತಲೆ ನೋವಾಗಿತ್ತು. ಈ ಪ್ರಕರಣ ಜರುಗಿದ 40 ರಿಂದ 45 ದಿನಗಳಲ್ಲಿ ಇದೇ ಗುಂಪು ತಮ್ಮ ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿರುವು ದನ್ನು ಗಮನಿಸಿ ಇನ್ನೊಂದು ಒಂಟಿ ಮಹಿಳೆಯನ್ನು ಕೊಲೆ ಮಾಡಿ ಬಂಗಾರ ಕಳವು ಮಾಡಿ ಸಾಕ್ಷé ನಾಶ ಪಡಿಸಿರುವುದನ್ನು ಗಂಭೀರವಾಗಿ ಸ್ವೀಕರಿಸಿದ ಸ್ಥಳೀಯ ಪೊಲೀಸರು ಕೆಲವೇ ದಿನಗಳಲ್ಲಿ ಎರಡೂ ಪ್ರಕರಣವನ್ನು ಭೇದಿಸಿ ಕೊಲೆಗಾರರ ಹೆಡೆ ಮುರಿಕಟ್ಟಿರುವುದಲ್ಲದೇ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವುದನ್ನು ಹಿರಿಯ ಅ ಧಿಕಾರಿ ವರ್ಗದವರು ತಮ್ಮ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಕೆಲವರ್ಷ ಗಳಿಂದ ತಾಲೂಕಿನಾದ್ಯಂತ ಅಪಘಾತದಿಂದ ಮೃತರಾಗುತ್ತಿರು ವುದು ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದನ್ನು ನಿಯಂತ್ರಣಕ್ಕೆ ತರಲು ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ ಅಪಘಾತ ಹಾಗೂ ಅಪರಾಧ ಪ್ರಕರಣಗಳನ್ನು ಕಡಿಮೆಗೊಳಿಸಲು ಆರಕ್ಷಕ ನಿರೀಕ್ಷಕ ಶ್ರೀಶೈಲ ಕೌಜಲಗಿ ನೇತೃತ್ವದ ಸಿಬ್ಬಂದಿ ವರ್ಗ ಹಗಲು-ರಾತ್ರಿ ಗಸ್ತು¤, ಗುಡ್‌ ಮಾರ್ನಿಂಗ್‌ ಬೀಟ್‌, ನಾಕಾ ಬಂದಿ ಪೆಟ್ರೋಲಿಂಗ್‌ಗಳನ್ನು ನಿರಂತರವಾಗಿ ಮಾಡುವ ಮೂಲಕ ಜನಸ್ನೇಹಿ ಪೊಲೀಸರಾಗಿ ಕಾರ್ಯ ನಿರ್ವಹಿಸಿ ಹಿರಿಯ ಅಧಿಕಾರಿಗಳ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.