Kampli: ಹೆಚ್ಚಿದ ನೆರೆ ಪ್ರವಾಹ; ಹೊಲಗಳಿಗೆ ನುಗ್ಗಿದ ನೀರು

ಕಂಪ್ಲಿ-ಕೋಟೆಯ ಪಂಪಾಪತಿ ದೇವಸ್ಥಾನ ಬಳಿಯ ಮಾಗಾಣಿ ರಸ್ತೆ ಮುಳುಗಡೆ

Team Udayavani, Jul 27, 2024, 8:40 PM IST

Kampli

ಕಂಪ್ಲಿ: ಎಲ್ಲೋ ಮಳೆ, ಎಲ್ಲೋ ಪ್ರವಾಹ ಎಂಬಂತೆ ತುಂಗಾಭದ್ರಾ ಜಲಾಯಶವು ಮೇಲ್ಭಾಗದ ಮಳೆಯಿಂದ ಹರಿದು ಬಂದ ನೀರಿನಿಂದ ತುಂಬಿಕೊಂಡಿದೆ. ಆದರೆ, ನದಿ ಪಾತ್ರದಲ್ಲಿ ಮಳೆ ಇಲ್ಲದಿದ್ದರೂ ಪ್ರವಾಹದ ಸ್ಥಿತಿ ಎದುರಿಸುವಂತಾಗಿದೆ.

ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಪ್ರವಾಹ ಉಂಟಾಗಿ, ಕಂಪ್ಲಿ-ಕೋಟೆಯ ಕೆಲ ಮನೆಗಳಿಗೆ ನೀರು ನುಗ್ಗುವಂತಾಗಿದೆ.‌ ಇಲ್ಲಿನ ಮೀನುಗಾರರ ಕುಟುಂಬಗಳ ರಕ್ಷಣೆಗಾಗಿ ಕಾಳಜಿ ಕೇಂದ್ರ ತೆರೆಯುವ ಜತೆಗೆ ನಿರಾಶ್ರಿತರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಈಗಾಗಲೇ ಸೇತುವೆ ಮುಳುಗಡೆ ಪರಿಣಾಮ ಎರಡು ಜಿಲ್ಲೆಯ ಜನರ ಸಂಪರ್ಕ ಕಡಿತಗೊಂಡಿದೆ. ವಾಣಿಜ್ಯ ಕೇಂದ್ರ ಹಾಗೂ ರೈತರು ಜಮೀನುಗಳಿರುವುದರಿಂದ ಕಂಪ್ಲಿ-ಗಂಗಾವತಿಗೆ ಸಂಪರ್ಕಿಸಬೇಕಾದರೆ, ಜನರು ಬುಕ್ಕಸಾಗರ ಸೇತುವೆ ಮೂಲಕ ಸುಮಾರು 30 ಕಿ.ಮೀ ಕ್ರಮಿಸಬೇಕಾದ ದುಸ್ಥಿತಿ ಎದುರಾಗಿದೆ.  ಕಂಪ್ಲಿ-ಕೋಟೆಯ ಪಂಪಾಪತಿ ದೇವಸ್ಥಾನ ಬಳಿಯ ಮಾಗಾಣಿ ರಸ್ತೆಯು ಸಂಪೂರ್ಣವಾಗಿ ಮುಳುಗಿ, ಭತ್ತ, ಕಬ್ಬು ಜಲದಿಗ್ಭಂಧನವಾಗಿದೆ. ಇಲ್ಲಿನ ಹೊಳೆ ಆಂಜನೇಯ ದೇವಸ್ಥಾನವು ನದಿ ಹಿನ್ನೀರಿನಿಂದ ಜಲಾವೃತವಾಗಿದೆ. ಇಲ್ಲಿನ ಕೋಟೆಯ ಜನರು ತೆಪ್ಪದ ಮೂಲಕ ಸಂಪರ್ಕಿಸಬೇಕಾದ ಅನಿವಾರ್ಯತೆ ಉಂಟಾಗಿದೆ.


ಆತಂಕದಲ್ಲಿ ರೈತರು : ನದಿ ಪ್ರವಾಹದಿಂದ ಜಮೀನುಗಳಿಗೆ ನೀರು ನುಗ್ಗಿದ್ದು, ಅನ್ನದಾತರು ಸಂಕಷ್ಟಕ್ಕೀಡಾಗುವಂತಾಗಿದೆ. ಕಂಪ್ಲಿ-ಕೋಟೆ ಪ್ರದೇಶ, ಇಟಗಿ, ಸಣಾಪುರದ ನದಿ ಪಾತ್ರದಲ್ಲಿ ರೈತರ ಬೆಳೆಗಳು ನೀರು ಪಾಲಾಗಿವೆ. ನದಿ ಪ್ರವಾಹ ಇಳಿದ ತಕ್ಷಣ ಅಧಿಕಾರಿಗಳ ಸರ್ವೆ ನಡೆಸಿ, ಬೆಳೆ ನಷ್ಟ ಪರಿಹಾರ ಒದಗಿಸಿದರೆ, ರೈತರ ಉಳಿಸಬಹುದು ಎನ್ನಲಾಗುತ್ತಿದೆ.

ಕಾಳಜಿ ಕೇಂದ್ರ: ಇಲ್ಲಿನ‌ ನಿರಾಶ್ರಿತರಿಗಾಗಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ೫೭ ಕುಟುಂಬಗಳ ಪಟ್ಟಿ ಮಾಡಿದ್ದು, ಹೆಚ್ಚಿನ ಪ್ರವಾಹ ಉಂಟಾದರೆ, ಉಪಹಾರ, ಊಟದ ಸಿದ್ಧತೆ ಮಾಡಿಕೊಳ್ಳಲಾಗಿದೆ.  ಕಂಪ್ಲಿ-ಕೋಟೆಯ ಹೊಳೆ ಆಂಜನೇಯ ದೇವಸ್ಥಾನಕ್ಕೆ ನೀರು ನುಗ್ಗಿ, ಜಲಾವೃತವಾಗಿದೆ. ಇಲ್ಲಿನ ಸಣಾಪುರ ಗ್ರಾಪಂಯ ಇಟಗಿ ಸಂಪರ್ಕದ ರಸ್ತೆಯು ನದಿ ಹಿನ್ನೀರಿನಿಂದ ಜಲಾವೃತವಾಗಿದ್ದು, ಜನರಿಗೆ  ತೊಂದರೆ ಉಂಟಾಗಿದೆ. ಇಲ್ಲಿನ ಗ್ರಾಮಗಳು ಜನರು ಬೇರೆ ಮಾರ್ಗದಲ್ಲಿ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಮೋಟರ್ ರಕ್ಷಿಸಿಕೊಂಡ ರೈತರು : ನದಿ ಪಾತ್ರದಲ್ಲಿರುವ ರೈತರು ನೀರಿನಲ್ಲಿ ಮುಳುಗಡೆಯ ಭೀತಿಯಲ್ಲಿರುವ ಮೋಟರ್‌ಗಳನ್ನು ರಕ್ಷಿಸಿಕೊಂಡಿದ್ದಾರೆ. ಕೆಲವೊಂದು ಮೋಟರ್‌ಗಳು ನೀರಿನಲ್ಲಿ ಮುಳುಗಿವೆ.  ಇಲ್ಲಿನ ನೆರೆ ಹಾವಳಿ ಮುಂದುವರಿದಿದ್ದು, ಸೇತುವೆ ಮೇಲೆ ನಾಲ್ಕು ಅಡಿಯಷ್ಟು ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡು, ಅಸ್ತವ್ಯಸ್ತವಾಗಿದೆ.

ಟಾಪ್ ನ್ಯೂಸ್

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.