![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 15, 2021, 7:50 AM IST
ಹೊಸದಿಲ್ಲಿ: “ಸ್ವಾತಂತ್ರ್ಯಾನಂತರದ ಭಾರತದ ನಿರ್ಮಾತೃಗಳು, ಭಾರತದ ಅಂದಿನ ದೈನೇಸಿ ಪರಿಸ್ಥಿತಿಗೆ ಬ್ರಿಟಿಷ್ ಸರಕಾರವನ್ನು ಹೊಣೆಗಾರರನ್ನಾಗಿಸದೇ ಇದ್ದಿದ್ದರಿಂದಲೇ, ಸ್ವಾತಂತ್ರ ಪೂರ್ವದಲ್ಲಿ ದೇಶದಲ್ಲಿ ಅನೇಕ ವಿಧ್ವಂಸಕ ಕೃತ್ಯಗಳನ್ನು ನಡೆಸಿದ ಅಂದಿನ ಬ್ರಿಟನ್ ಪ್ರಧಾನಿ ವಿನ್ಸ್ಟನ್ ಚರ್ಚಿಲ್ರನ್ನು ಇಲ್ಲಿಗೆ ಕರೆತಂದು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಲಿಲ್ಲ’ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಈ ನಡುವೆ, “1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಬ್ರಿಟಿಷರ ಭಿಕ್ಷೆ’ ಎಂದಿದ್ದ ಕಂಗನಾರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ, ದಿಲ್ಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದಾರೆ. ಇನ್ನೊಂದೆಡೆ ಹಿರಿಯ ಮರಾಠಿ ನಟ ವಿಕ್ರಂ ಗೋಖಲೆ ಅವರೂ ಕಂಗನಾ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರ ಹೇಳಿಕೆ ಸರಿಯಾಗಿದೇ ಇದೆ ಎಂದಿದ್ದಾರೆ.
ಈ ನಡುವೆ, ಕಂಗನಾ ಹೇಳಿಕೆ ಕುರಿತು ರವಿವಾರ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, ಭಾರತವು ಸಾಂಸ್ಕೃತಿಕ ಹಾಗೂ ಇತರ ರೀತಿಯ ಸ್ವಾತಂತ್ರ್ಯವನ್ನು ಪಡೆದಿದ್ದು 2014ರ ಅನಂತರ’ ಎಂದು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.