Karnataka: ರಾಜ್ಯದಲ್ಲಿ ಮತ್ತಷ್ಟು ಭ್ರೂಣಹತ್ಯೆ ಪ್ರಕರಣ ಆತಂಕಕಾರಿ


Team Udayavani, Jul 25, 2024, 6:05 AM IST

fetosd

ಕೇಂದ್ರ ಸರಕಾರದ 10ಕ್ಕೂ ಹೆಚ್ಚು ಅಧಿಕಾರಿಗಳ ವಿಶೇಷ ತಂಡ (ಪಿಸಿ ಮತ್ತು ಪಿಎನ್‌ಡಿಟಿ)ವೊಂದು ಬುಧವಾರ ಬಾಗಲಕೋಟೆ ಜಿಲ್ಲೆಗೆ ಆಗಮಿಸಿ, ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ವಿವಿಧಡೆ ಶೋಧ ನಡೆಸಿದೆ. ಈ ವೇಳೆ, ಸರಕಾರಿ ವೈದ್ಯರೊಬ್ಬರು ಭ್ರೂಣಹತ್ಯೆ ಕಾನೂನು ಬಾಹಿರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವು ಆತಂಕ ಸೃಷ್ಟಿಸಿದೆ. ಒಂದು ವೇಳೆ ಈ ಆರೋಪ ನಿಜವಾದರೆ, ಲಿಂಗ ಭ್ರೂಣ ಪತ್ತೆ, ಹತ್ಯೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕಿದ್ದ ಸರಕಾರಿ ವೈದ್ಯರೇ ಕಾನೂನು ಮುರಿಯುತ್ತಿರುವುದು “ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ’! ಕೇಂದ್ರ ಸರಕಾರದ “ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆ ಕಾಯ್ದೆ’ (ಪಿಸಿ ಮತ್ತು ಪಿಎನ್‌ಡಿಟಿ) ಅನುಸಾರ ಕೇಂದ್ರದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಕೇಂದ್ರ ತಂಡ ನಡೆಸಿದ ದಾಳಿ ವೇಳೆ ಬಾದಾಮಿ ಸರಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ವೈದ್ಯರಾಗಿರುವ ಡಾ| ಕವಿತಾ ಶಿವನಾಯ್ಕರ ಒಡೆತನದ ರೇಣುಕಾ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಸಾಮಗ್ರಿಗಳು ಪತ್ತೆಯಾಗಿವೆ. ಆಸ್ಪತ್ರೆಯಲ್ಲಿ ಹಲವು ಭ್ರೂಣಲಿಂಗ ಪತ್ತೆ ಮಾಡಿರುವುದು ಖಚಿತಪಟ್ಟಿದ್ದು, ಅವರೂ ಸೇರಿದಂತೆ ಆಸ್ಪತ್ರೆ ಒಡೆತನ ಹೊಂದಿರುವ ಮೂವರ ವಿರುದ್ಧ ಈಗ ಆರೋಗ್ಯ ಇಲಾಖೆ ದೂರು ನೀಡಲು ಸಜ್ಜಾಗಿದೆ.

ಕಳೆದ ವರ್ಷವೂ ಕರ್ನಾಟಕದಲ್ಲಿ ಭ್ರೂಣ ಹತ್ಯೆಗಳ ಪ್ರಕರಣಗಳು ಭಾರೀ ಸದ್ದು ಮಾಡಿದ್ದವು. ಮಂಡ್ಯದಲ್ಲಿ ಇಂಥ ಬೃಹತ್‌ ಜಾಲವೊಂದು ಬಯಲಾಗಿತ್ತು. ಆದರೆ, ಈಗ ವರದಿಯಾಗಿರುವ ಬಾಗಲಕೋಟೆ ಜಿಲ್ಲೆಯ ಪ್ರಕರಣವು ಇನ್ನೂ ಗಂಭೀರವಾಗಿದೆ. ಯಾಕೆಂದರೆ, ಸರಕಾರಿ ವೈದ್ಯರೊಬ್ಬರು ಭ್ರೂಣ ಹತ್ಯೆಯಂಥ ಹೀನ ಕೃತ್ಯವನ್ನು ನಡೆಸುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಭಾರತದಲ್ಲಿ 1990ರ ದಶಕದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯ ಪ್ರವೃತ್ತಿಯು ಹೆಚ್ಚಾಯಿತು.

ಅಲ್ಟ್ರಾ ಸ್ಕ್ಯಾನಿಂಗ್‌ ತಂತ್ರಜ್ಞಾನ ವ್ಯವಸ್ಥೆಯ ದುರ್ಬಳಕೆಯೇ ಇದಕ್ಕೆ ಮೂಲ ಕಾರಣ. ಮೊದಲು ನಗರಗಳಲ್ಲಿ ಶುರುವಾದ ಈ ಪ್ರವೃತ್ತಿ ನಿಧಾನವಾಗಿ ಇಡೀ ದೇಶವನ್ನು ಆವರಿಸಿಕೊಂಡಿತು. ಅಧಿಕೃತ ಅಂಕಿ ಸಂಖ್ಯೆಗಳ ಪ್ರಕಾರ, ವರ್ಷಕ್ಕೆ 5 ಲಕ್ಷ ಭ್ರೂಣ ಹತ್ಯೆ ನಡೆಯುತ್ತಿದೆ. ಆದರೆ, ವಾಸ್ತವದಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಿರುವ ಸಾಧ್ಯತೆಗಳಿವೆ. ಇದರಿಂದಾಗಿ ಲಿಂಗಾನುಪಾತ ಕುಸಿತ ಕಾಣುತ್ತಿದೆ. 2011ರ ಜನಗಣತಿಯ ಪ್ರಕಾರ, 1000 ಗಂಡು ಮಕ್ಕಳಿಗೆ ಕೇವಲ 914 ಹೆಣ್ಣು ಮಕ್ಕಳಿದ್ದಾರೆ.

ಇನ್ನು ಕರ್ನಾಟಕದಲ್ಲಿ ಈ ಪ್ರಮಾಣ 943 ಇದೆ. ಕೆಲವು ರಾಜ್ಯಗಳಲ್ಲಂತೂ ಹೆಣ್ಣು ಮಕ್ಕಳ ಸಂಖ್ಯೆ 900ಕ್ಕಿಂತಲೂ ಕೆಳಗಿದೆ. ಇದರಿಂದ ಸಾಮಾಜಿಕ ಅಸಮತೋಲನ ಸೃಷ್ಟಿಯಾಗಿದೆ. ಲಿಂಗ ಭ್ರೂಣ ಪತ್ತೆ ಮತ್ತು ಭ್ರೂಣ ಹತ್ಯೆ ತಡೆಗೆ ಕರ್ನಾಟಕದಲ್ಲೂ ಕಠಿನ ಕಾನೂನುಗಳು ಜಾರಿಯಲ್ಲಿವೆ. ಆದರೆ ಕಾನೂನು ಅನುಷ್ಠಾನದ ಕೊರತೆಯಿಂದಾಗಿ ಭ್ರೂಣ ಹತ್ಯೆ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇರುತ್ತವೆ. ಕಾಯ್ದೆಗೆ ತಿದ್ದುಪಡಿ ತಂದು ಹೆಚ್ಚಿನ ಶಿಕ್ಷೆ, ದಂಡ ವಿಧಿಸುವ ಬಗ್ಗೆ ಸರ್ಕಾರ ಮುಂದಾಗಬೇಕು.

ಭ್ರೂಣ ಹತ್ಯೆಯನ್ನು ಕೇವಲ ಕಾನೂನು ಬಲದಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲೂ ಸರಕಾರ ಇನ್ನೂ ಹೆಚ್ಚಿನ ಮುತುವರ್ಜಿಯಿಂದ ಕೆಲಸ ಮಾಡಬೇಕಿದೆ. ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ, ಹೆಚ್ಚಿನ ತಂದೆ- ತಾಯಿಗಳು ಹೆಣ್ಣು ಎಂದರೆ “ಭಾರ’ ಎಂದೇ ಭಾವಿಸುತ್ತಾರೆ. ಆದರೆ, ಹೆಣ್ಣು ಮಗು ಭಾರವಲ್ಲ, ಕುಟುಂಬದ “ಆಧಾರ’ ಎಂಬ ಮನೋಭಾವನೆಯನ್ನು ಸರಕಾರ ಬೆಳೆಸುವುದು ಈ ಕಾಲದ ಅಗತ್ಯವಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.