ಇಂದು ರಾಜ್ಯ ಬಂದ್‌? 600ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

ಶಾಲಾಕಾಲೇಜಿಗೆ ಅಧಿಕೃತ ರಜೆ ಇಲ್ಲ

Team Udayavani, Feb 13, 2020, 6:45 AM IST

karnataka

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಸರಕಾರಿ ಮತ್ತು ಖಾಸಗಿ ವಲಯ ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಹೆಚ್ಚು ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿ ಅತ್ಯಗತ್ಯವಾಗಿದ್ದು, ಬಂದ್‌ ಮೂಲಕ ಸರಕಾರದ ಮೇಲೆ ಒತ್ತಡ ಹೇರುವುದು ಉದ್ದೇಶ. ಬಂದ್‌ಗೆ 600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸಾರಿಗೆ, ಸರಕು ಸಂಬಂಧಿತ ಸೌಲಭ್ಯಗಳು ವ್ಯತ್ಯಯವಾಗುವ ಆತಂಕ ಇದೆ.

ಖಾಸಗಿ ಸೇವೆ ವ್ಯತ್ಯಯ
ಸಂಚಾರಿ ಸೇವೆಗಳಾದ ಓಲಾ, ಉಬರ್‌, ಖಾಸಗಿ ಬಸ್‌ಗಳ ಸಂಘಟನೆ ಗಳು ನೇರವಾಗಿ ಬೆಂಬಲ ನೀಡಿವೆ. ಹೀಗಾಗಿ ಖಾಸಗಿ ಬಸ್‌, ಟ್ಯಾಕ್ಸಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಆದರೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇಲ್ಲ. ಉಳಿದಂತೆ ರಾಜ್ಯ ಪೆಟ್ರೋಲ್‌ ಬಂಕ್‌ ಮಾಲಕರ ಸಂಘ ಮತ್ತು ಹೊಟೇಲ್‌ ಮಾಲಕರ ಸಂಘಗಳು ನೈತಿಕವಾಗಿ ಬೆಂಬಲ ಸೂಚಿಸಿವೆ. ಆದರೆ ಸೇವೆ ಎಂದಿನಂತೆ ಇರಲಿದೆ.

ಎಂದಿನಂತೆ ಬಸ್‌ ಸಂಚಾರ?
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದರೂ ಬಸ್‌ ಸೇವೆ ಸ್ಥಗಿತಗೊಳಿಸುವುದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ರಜೆ ಜಿಲ್ಲಾಡಳಿತಗಳಿಗೆ ಬಿಟ್ಟದ್ದು
ಬಂದ್‌ಗೆ ಸಂಬಂಧಿಸಿ ಗುರುವಾರ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಆಯಾ ಜಿÇÉಾಡಳಿತಗಳು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಬಹುದಾಗಿದೆ ಎಂದೂ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೂಚನೆ ನೀಡಿದ್ದಾರೆ.

ದ.ಕ., ಉಡುಪಿ: ಪರಿಣಾಮ ಸಾಧ್ಯತೆ ಕಡಿಮೆ
ಮಂಗಳೂರು/ಉಡುಪಿ: ಗುರುವಾರದ ರಾಜ್ಯವ್ಯಾಪಿ ಬಂದ್‌ ಕರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪೂರಕ ಪ್ರತಿಕ್ರಿಯೆ ವ್ಯಕ್ತವಾಗುವ ಸಾಧ್ಯತೆ ಕಡಿಮೆ. ಸರಕಾರಿ ಮತ್ತು ಖಾಸಗಿ ಬಸ್‌ ಸಂಚಾರ ಎಂದಿನಂತೆ ಓಡಾಟ ನಡೆಸುವ ಸಾಧ್ಯತೆ ಇದ್ದು, ಶಾಲಾ-ಕಾಲೇಜುಗಳು ಕಾರ್ಯಾಚರಿಸಲಿವೆ ಎನ್ನಲಾಗಿದೆ.

ಪಿಯುಸಿ ಪರೀಕ್ಷೆ
ಪ್ರಥಮ ಪಿಯುಸಿ ಅಂತಿಮ ಪರೀಕ್ಷೆಗಳು ನಡೆಯುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು. ಹೀಗಾಗಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಪರೀಕ್ಷೆ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ರಾಜ್ಯದ ಕೆಲವು ವಿಶ್ವ  ವಿದ್ಯಾಲಯಗಳು ಕೂಡ ಪರಿಸ್ಥಿತಿ ಅವಲೋಕಿಸಿ ಪರೀಕ್ಷೆ ಮುಂದೂಡಿಕೆಯಂಥ ಕ್ರಮಕೈಗೊಳ್ಳಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

4-naxalites

Chikkamagalur: ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ: ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

1-horoscope

Horoscope: ಆಲಸ್ಯ ತೊಲಗಿಸಿದರೆ ಕ್ಷಿಪ್ರಫ‌ಲ, ಉತ್ಸಾಹ ವರ್ಧನೆ, ವಧೂವರ ಅನ್ವೇಷಕರಿಗೆ ಶುಭ

balaparadha

Kasaragodu: ಉಗ್ರ ನಿಗ್ರಹ ದಳ, ಪೊಲೀಸರಿಂದ ವ್ಯಾಪಕ ದಾಳಿ: 27 ಬಾಂಗ್ಲಾದೇಶ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Karnataka ಕಾಂಗ್ರೆಸ್‌ನಲ್ಲಿ ಭಿನ್ನರಾಗ!: ಊಹಾಪೋಹಕ್ಕೆ ಸಚಿವರು ಗರಂ

suicide (2)

ಸಾವಿನಂಚಿನ ರೋಗಿಯ ಸುಖಮರಣಕ್ಕೆ ಸಮ್ಮತಿ : ಏನಿದು ನಿರ್ಧಾರ? ಅನುಮತಿ ಹೇಗೆ?

BJP 2

BJP; ಬಣ ಜಗಳ ದಿಲ್ಲಿ ವರಿಷ್ಠರ ಜಗಲಿಗೆ:ಬೊಮ್ಮಾಯಿ ಸಲಹೆ ಮೇರೆಗೆ ದಿಲ್ಲಿಗೆ ತೆರಳಲು ನಿರ್ಧಾರ

MUDA

MUDA; ಅಕ್ರಮ ವಹಿವಾಟು ಬಗ್ಗೆ ಯಾವುದೇ ಸಾಕ್ಷಿಯಿಲ್ಲ: ಸಿದ್ದರಾಮಯ್ಯ

chalavadi

MUDA ಹಗರಣ ಮಾಡಿಲ್ಲ ಅಂದಮೇಲೆ ಸೈಟ್‌ ಏಕೆ ವಾಪಸ್‌ ಕೊಟ್ಟಿರಿ?

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

4-naxalites

Chikkamagalur: ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ: ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.