ಸಿದ್ದುಗೆ ವರುಣಾ ಗೆಲುವು ಅನಿವಾರ್ಯ


Team Udayavani, Apr 16, 2023, 8:00 AM IST

ಸಿದ್ದುಗೆ ವರುಣಾ ಗೆಲುವು ಅನಿವಾರ್ಯ

ಬೆಂಗಳೂರು: ಆರಂಭದಿಂದಲೂ ಎರಡು ಕ್ಷೇತ್ರಗಳ ಬಡಬಡಿಕೆಯಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಉತ್ಸಾಹಕ್ಕೆ ಕಾಂಗ್ರೆಸ್‌ನ ಮೂರನೇ ಪಟ್ಟಿ ತಣ್ಣೀರೆರಚಿದೆ.

ಕಳೆದ ಬಾರಿ ಬಾದಾಮಿ ಮತ್ತು ಚಾಮುಂಡೇಶ್ವರಿಯಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ, ಈ ಬಾರಿಯೂ ಎರಡು ಕಡೆಯಿಂದ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದರು. ಆ ಎರಡನೇ ಕ್ಷೇತ್ರ ಕೋಲಾರ ಆಗಿರಲಿದೆ ಎಂದು ಘೋಷಿಸಿದ್ದರು. ಈ ಮಧ್ಯೆ ಮೊದಲೆರಡು ಪಟ್ಟಿಯಲ್ಲಿ ಕೋಲಾರ ಪ್ರಸ್ತಾವ ಇರಲಿಲ್ಲ. ಆದರೆ ಕೋಲಾರಕ್ಕೆ ಕೊತ್ತೂರು ಮಂಜುನಾಥ ಹೆಸರು ಘೋಷಣೆಯಾಗುವ ಮೂಲಕ ನಿರೀಕ್ಷೆ ಹುಸಿಯಾಗಿದೆ. ಜತೆಗೆ ವರುಣಾದಿಂದ ಗೆಲ್ಲಲೇಬೇಕಾದ ಅನಿವಾರ್ಯ ಸಿದ್ದರಾಮಯ್ಯ ಅವರಿಗೆ ಸೃಷ್ಟಿಯಾಗಿದೆ.

2018ರಲ್ಲಿ ಎರಡು ಕಡೆ ಕಣಕ್ಕಿಳಿಯುವಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಒಂದು ಕಡೆ (ತವರು ಜಿಲ್ಲೆ) ಸೋಲನುಭವಿಸಿ, ಮತ್ತೂಂದು ಕಡೆ ಗೆದ್ದಿದ್ದರು. ಈಗ ಅವರು ವಿಪಕ್ಷ ನಾಯಕರಾಗಿದ್ದು, ಎರಡೆರಡು ಕಡೆ ಸ್ಪರ್ಧಿಸುವುದರೊಂದಿಗೆ ಗೆಲ್ಲಬೇಕಾಗುತ್ತದೆ. ಅಕಸ್ಮಾತ್‌ ಒಂದು ಕಡೆ ಸೋತರೂ ತಪ್ಪು ಸಂದೇಶ ರವಾನೆ ಆಗುತ್ತದೆ. ಹಾಗಾಗಿ ಒಂದೇ ಕ್ಷೇತ್ರದಿಂದ ಕಣಕ್ಕಿಳಿಯುವುದು ಸೂಕ್ತ ಎಂಬ ಅಭಿಪ್ರಾಯ ಪಕ್ಷದ ಒಳಗೆ ವ್ಯಕ್ತವಾಗಿತ್ತು. ಸಿದ್ದರಾಮಯ್ಯ ವಿರೋಧಿ ಬಣ ಕೊನೆಗೂ ಕೋಲಾರವನ್ನು ತಪ್ಪಿಸಿ ಅವರನ್ನು ವರುಣಾಗೆ ಸೀಮಿತಗೊಳಿಸಿದ್ದಾರೆ.

ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರು ಕಣಕ್ಕಿಳಿಯಲಿರುವ ಕ್ಷೇತ್ರ ವರುಣಾ ಒಂದೇ ಎನ್ನುವುದು ಖಚಿತವಾಗಿದೆ. ಈಗ ಅವರ ಮುಂದೆ ಎರಡು ಸವಾಲುಗಳಿವೆ- ಒಂದು ಪಕ್ಷದಲ್ಲೇ ತಮ್ಮನ್ನು ಕಟ್ಟಿಹಾಕಲು ಹವಣಿಸುತ್ತಿರುವ ಬಣದ ಬೇಗುದಿಯನ್ನು ಮೆಟ್ಟಿನಿಲ್ಲುವುದು. ಮತ್ತೂಂದು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿರುವ ಎದುರಾಳಿಗಳನ್ನು ಮಣಿಸುವುದು. ಇದರ ಜತೆಗೆ ರಾಜ್ಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಗೆಲುವಿನ ದಡ ತಲುಪಿಸುವುದು. ಇದೆಲ್ಲವೂ ಅಷ್ಟು ಸುಲಭದ ತುತ್ತು ಅಲ್ಲ. ಇದಕ್ಕಾಗಿ ಅವರು ಹಲವು ಪಟ್ಟುಗಳು, ಕಸರತ್ತುಗಳನ್ನು ಕೂಡ ನಡೆಸಬೇಕಾಗಿದೆ.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.