Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
ಸಿಹಿನೀರಿನ ಮೂಲಗಳಲ್ಲಿ ಕಂಡು ಬರುವ ಸೂಕ್ಷ್ಮ ಜೀವಿಯಾಗಿದೆ.
Team Udayavani, Jul 4, 2024, 2:55 PM IST
ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
ಚಿಕ್ಕ ಕೊಳವೊಂದರಲ್ಲಿ ಈಜಾಡಿದ ನಂತರ ಬಾಲಕನಿಗೆ ಈ ಸೋಂಕು ಹರಡಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ಬಹಿರಂಗಪಡಿಸಿವೆ. ಅಪರೂಪದ ಮೆದುಳು ತಿನ್ನುವ ಅಮೀಬಾದಿಂದಾಗಿ ಸಾವನ್ನಪ್ಪಿರುವ ಮೂರನೇ ಘಟನೆ ಇದಾಗಿದೆ.
ಮೇ 21ರಂದು ಮಲಪ್ಪುರಂನ ಐದು ವರ್ಷದ ಪುಟ್ಟ ಬಾಲಕಿ ಈ ಸೋಂಕಿನಿಂದ ಮೃತಪಟ್ಟಿದ್ದು, ಜೂನ್ 25ರಂದು ಕಣ್ಣೂರ್ ನ 13 ವರ್ಷದ ಬಾಲಕಿಯೊಬ್ಬಳು ಕೊನೆಯುಸಿರೆಳೆದಿದ್ದಳು. ಇದೀಗ ಮೂರನೇ ಘಟನೆ ನಡೆದಿದೆ.
ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ನೆಗ್ಲೇರಿಯಾ ಫೌಲೆರಿಯಿಂದ ಜನ್ಮತಳೆಯುತ್ತವೆ. ಇದು ಸರೋವರ, ನದಿಗಳಂತಹ ಬೆಚ್ಚಗಿನ ಸಿಹಿನೀರಿನ ಮೂಲಗಳಲ್ಲಿ ಕಂಡು ಬರುವ ಸೂಕ್ಷ್ಮ ಜೀವಿಯಾಗಿದೆ.
ಈ ಸೂಕ್ಷ್ಮ ಅಮೀಬಾ ನೀರಿನಲ್ಲಿ ನಾವು ಈಜಾಡಿದಾಗ, ಅಥವಾ ಆಟವಾಡುವ ಸಂದರ್ಭದಲ್ಲಿ ಮೂಗಿನ ಒಳಗಿನಿಂದ ದೇಹವನ್ನು ಪ್ರವೇಶಿಸುತ್ತದೆ. ಈ ಮೂಲಕ ಮೆದುಳಿಗೆ ಹೋಗಿ ಅಲ್ಲಿ ಮೆದುಳನ್ನು ತಿನ್ನಲು ಪ್ರಾರಂಭಿಸುತ್ತದೆ. ಇದು ಮಾರಣಾಂತಿಕವಾಗಿ ಸಾವು ಸಂಭವಿಸುತ್ತದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ
Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್ಗೆ ಹಾನಿ
Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.