Kerala: ಅಘೋರಿಗಳಿಂದ ಶತ್ರು ಭೈರವಿ ಯಾಗ…ಡಿಕೆಶಿ ಆರೋಪಕ್ಕೆ ಕೇರಳ ಸರ್ಕಾರ ಹೇಳಿದ್ದೇನು?
ರಾಜ್ಯದ ಬೇರೆ ಕಡೆ ಇಂತಹ ಯಾಗ ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ
Team Udayavani, Jun 1, 2024, 1:08 PM IST
ತಿರುವನಂತಪುರಂ: ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದ್ದು, ಅಘೋರಿಗಳ ಮೂಲಕ ಈ ಕಾರ್ಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಪಂಚ ಬಲಿ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆರೋಪಕ್ಕೆ ಶನಿವಾರ (ಜೂನ್ 01) ಕೇರಳ ಸರ್ಕಾರ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಯಾವುದೇ ಪ್ರಾಣಿ ಬಲಿಯ ಯಾಗ ನಡೆದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ:T20 World Cup ಆರಂಭದ ದಿನದಂದು ಉದ್ಘಾಟನಾ ಸಮಾರಂಭವಿಲ್ಲ! ಇಲ್ಲಿದೆ ಎಲ್ಲಾ ವಿವರ
ಕೇರಳ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್ ಸ್ಪಷ್ಟನೆ ನೀಡಿ, ಕರ್ನಾಟಕದ ಡಿಸಿಎಂ ಶಿವಕುಮಾರ್ ಅವರು ಮಾಡಿರುವ ಗಂಭೀರ ಆರೋಪದ ಬಗ್ಗೆ ನಾವು ತನಿಖೆ ನಡೆಸಿದ್ದೇವು. ಪ್ರಾಥಮಿಕ ವರದಿ ಪ್ರಕಾರ, ರಾಜರಾಜೇಶ್ವರ ದೇವಾಲಯದ ಸಮೀಪವಾಗಲಿ ಅಥವಾ ಸುತ್ತಮುತ್ತ ಪ್ರಾಣಿಬಲಿ ನೀಡಿ ಯಾಗ ನಡೆಸಿರುವ ಘಟನೆ ನಡೆದಿಲ್ಲ. ಇದನ್ನು ದೇವಸ್ವಂ ಮಂಡಳಿ ಕೂಡಾ ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಯಾಕೆ ಇಂತಹ ಗಂಭೀರ ಆರೋಪ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ರಾಧಾಕೃಷ್ಣನ್ ಹೇಳಿದರು. ರಾಜ್ಯದ ಬೇರೆ ಕಡೆ ಇಂತಹ ಯಾಗ ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. 1968ರಿಂದ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದೆ.
ಕಣ್ಣೂರಿನಲ್ಲಿ ಶತ್ರು ಭೈರವಿ ಯಾಗ ಮಾಡಿ, ಅಲ್ಲಿ ಪಂಚ ಬಲಿ ನೀಡಲಾಗಿದೆ ಎಂಬ ಡಿಕೆಶಿ ಹೇಳಿಕೆ ನೂರಕ್ಕೆ ನೂರರಷ್ಟು ಸುಳ್ಳು. ದೇವಾಲಯದ ಸುತ್ತಮುತ್ತ, ಸಮೀಪದ ಸ್ಥಳದಲ್ಲಿ ಯಾಗ ನಡೆಸಿರುವುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ಸರ್ಕಾರಕ್ಕೆ ವರದಿ ನೀಡಿರುವುದಾಗಿ ಸಚಿವ ರಾಧಾಕೃಷ್ಣನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.