Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ


Team Udayavani, Jul 3, 2024, 12:38 AM IST

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

ಮಡಿಕೇರಿ: ಮಳೆಯ ನಡುವೆ ಕೊಡಗಿನ ವಿವಿಧೆಡೆ ಕಾಡಾನೆ ಉಪಟಳ ಮಿತಿ ಮೀರಿದೆ. ಹಿಂಡು ಹಿಂಡು ಆನೆಗಳು ತೋಟಗಳಿಗೆ ಹಾನಿ ಮಾಡುತ್ತಿವೆ ಮತ್ತು ವಾಹನಗಳನ್ನು ಜಖಂಗೊಳಿಸುತ್ತಿವೆ.

ನಿರಂತರ ಮಳೆಯಿಂದಾಗಿ ಕಾಫಿ ತೋಟಗಳು ಹಸುರಾಗಿವೆ, ಹಲಸಿನ ಹಣ್ಣು ಸುವಾಸನೆ ಬೀರುತ್ತಿವೆ. ಹಣ್ಣು ಪ್ರಿಯ ಕಾಡಾನೆಗಳು ತೋಟದಿಂದ ತೋಟಕ್ಕೆ ಸಂಚರಿಸುತ್ತ ಫ‌ಸಲನ್ನು ತಿಂದು ತೇಗುತ್ತಿವೆ. ಮುಖ್ಯ ರಸ್ತೆಗಳಲ್ಲಿ ದಿಢೀರ್‌ ಆಗಿ ಕಾಣಿಸಿಕೊಳ್ಳುವ ಆನೆಗಳು ವಾಹನಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿಸುತ್ತಿವೆ.

ಮನೆಯ ಸಮೀಪ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ನಾಲಡಿ ಗ್ರಾಮದ ವಾಟೆಕಾಡುವಿನಲ್ಲಿ ಸಂಭವಿಸಿದೆ. ದೇವಯ್ಯ ಅವರು ಆಟೋ ರಿಕ್ಷಾ ನಿಲ್ಲಿಸಿ ಮನೆಗೆ ತೆರಳಿದ್ದರು. ರಾತ್ರಿಯ ವೇಳೆ ಕಾಡಾನೆ ಆಟೋ ರಿಕ್ಷಾದ ಮೇಲೆ ದಾಳಿ ಮಾಡಿ ಜಖಂಗೊಳಿಸಿದೆ.ಚೆಯ್ಯಂಡಾಣೆ ಗ್ರಾಮ ವ್ಯಾಪ್ತಿಯಲ್ಲಿ ಬೊವ್ವೆàರಿಯಂಡ ಹರೀಶ್‌ ಹಾಗೂ ಸಜನ್‌ ಅವರ ತೋಟಕ್ಕೆ ಹಾನಿಯಾಗಿದೆ.

ಸುಂಟಿಕೊಪ್ಪದ ಅತ್ತೂರು ನಲ್ಲೂರುಗ್ರಾಮದ ಕಡ್ಲೆಮನೆ ರಘು ಕುಮಾರ ಅವರ ಮನೆಯ ಸಮೀಪದ ತೋಟದಫ‌ಸಲನ್ನು ತಿಂದು ಧ್ವಂಸಗೊಳಿಸಿದೆ. ಬಾಳೆಗಿಡಗಳನ್ನು ಸಂಪೂರ್ಣ ತಿಂದು ಹಾಕಿದೆ. ಅರಣ್ಯ ಇಲಾಖೆ ಎಷ್ಟೇ ಕಾರ್ಯಾಚರಣೆ ನಡೆಸಿದರೂ ಕಾಡಾನೆಗಳ ಹಿಂಡು ತೋಟಗಳಲ್ಲಿಯೇ ಆಶ್ರಯ ಪಡೆದುಕೊಳ್ಳುತ್ತಿವೆ. ಈ ಭಾಗದ ಬಹುತೇಕ ತೋಟಗಳಿಗೆ ದಾಳಿ ಮಾಡಿರುವ ಕಾಡಾನೆಗಳು ಬಾಳೆಯೊಂದಿಗೆ ಕಾಫಿ ಗಿಡಗಳನ್ನು ಕೂಡ ನಾಶಗೊಳಿಸಿವೆ.

ಕಾರ್ಯಾಚರಣೆ ನಡೆಸಿದ ದಿನ ಮರೆಯಾಗುವ ಕಾಡಾನೆಗಳು ಮತ್ತೆ ಮಾರನೇಯ ದಿನ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಹಾಡಹಗಲೇ ಮುಖ್ಯ ರಸ್ತೆಯಲ್ಲೂ ಆನೆಗಳು ಸಂಚರಿ ಸುತ್ತಿವೆ. ಸುಂಟಿಕೊಪ್ಪ, ಆನೆಕಾಡು, ಕುಶಾಲನಗರ ಹೆದ್ದಾರಿಯಲ್ಲಿ ನಿತ್ಯ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರು ಆತಂಕದಲ್ಲೇ ತೆರಳಬೇಕಾಗಿದೆ.

ವೀರಾಜಪೇಟೆ ತಾಲೂಕಿನ ಬಿಟ್ಟಂ ಗಾಲ ಗ್ರಾ.ಪಂ. ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಭಾಗದ ತೋಟಗಳ ಮೇಲೂ ಕಾಡಾನೆಗಳ ದಾಳಿಯಾಗಿದೆ. ಸ್ಥಳೀಯ ಬೆಳೆಗಾರಾದ ಎ.ಎಚ್‌. ಸರಸ್ವತಿ ಹಾಗೂ ಟೋಮಿ ಅವರ ತೋಟಗಳಿಗೆ ನುಗ್ಗಿರುವ ಆನೆಗಳು ಕಾಫಿ, ಅಡಿಕೆ, ತೆಂಗು ಮತ್ತು ಬಾಳೆ ಕೃಷಿಯನ್ನು ನಾಶಗೊಳಿಸಿವೆ. ವಿದ್ಯುತ್‌ ಸಂಪರ್ಕದ ತಂತಿ ಮತ್ತು ಪರಿಕರಗಳಿಗೂ ಹಾನಿ ಮಾಡಿದ್ದು, ವಿದ್ಯುತ್‌ ವ್ಯತ್ಯಯವಾಗಿದೆ. ಕಾರ್ಮಿಕರು ತೋಟಕ್ಕೆ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Woman’s body found in Kasaragod Quattros; Beloved who surrendered to hanging

Kasaragod ಕ್ವಾಟ್ರಸ್‌ನಲ್ಲಿ ಮಹಿಳೆಯ ಶವ ಪತ್ತೆ; ನೇಣಿಗೆ ಶರಣಾದ ಪ್ರಿಯತಮ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.