Kolkata: ಟ್ರೈನಿ ವೈದ್ಯೆ ಕೇಸು: ಸುಪ್ರೀಂ ಸ್ವಯಂ ಪ್ರೇರಿತ ವಿಚಾರಣೆ

ದೇಶದೆಲ್ಲೆಡೆ ಮುಂದುವರಿದ ವೈದ್ಯರ ಪ್ರತಿಭಟನೆ, ಸಿಎಂ ಮಮತಾ ಬ್ಯಾನರ್ಜಿ ಮೇಲೆ ನಮಗೆ ನಂಬಿಕೆ ಇಲ್ಲ: ಮೃತ ವೈದ್ಯೆಯ ಹೆತ್ತವರ ಅಳಲು

Team Udayavani, Aug 19, 2024, 6:45 AM IST

CM-Mamatha

ಹೊಸದಿಲ್ಲಿ: ಕೋಲ್ಕತಾದ ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾ ದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಕೈಗೆತ್ತಿ­ಕೊಂಡಿದೆ. ಆ.20ರ ಮಂಗಳವಾರವೇ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಸಿಜೆಐ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಪ್ರಕ ರಣದ ವಿಚಾರಣೆ ನಡೆಸಲಿದೆ. ದೇಶಾದ್ಯಂತ ವೈದ್ಯರ ಪ್ರತಿಭಟನೆಗಳು ತೀವ್ರಗೊಂಡಿರುವಂತೆಯೇ ಸುಪ್ರೀಂ ಕೋರ್ಟ್‌ ಮಧ್ಯ ಪ್ರ ವೇಶಿಸಿರುವುದು ಮಹತ್ವ ಪಡೆದಿದೆ.

ವರ್ಗಾವಣೆ ಹಿಂಪಡೆದ ಸರಕಾರ‌:
ವೈದ್ಯರನ್ನು ಬೆದರಿ­ಸಲೆಂದೇ ಪಶ್ಚಿಮ ಬಂಗಾಳ ಸರಕಾರ‌ ವರ್ಗಾವಣೆ­ಗಳನ್ನು ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದರ ಬೆನ್ನಲ್ಲೇ ಸರಕಾರ‌ ತನ್ನ ನಿರ್ಧಾರ ಹಿಂಪಡೆದಿದೆ.

ಮಮತಾ ಮೇಲೆ ನಂಬಿಕೆ ಇಲ್ಲ:
ಮಾಧ್ಯಮವೊಂದರ ಜತೆ ಮಾತನಾಡಿದ ಮೃತ ವೈದ್ಯೆಯ ಹೆತ್ತವರು, ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಮೊದಲು ಅವರ ಮೇಲೆ ನಮಗೆ ತುಂಬಾ ನಂಬಿಕೆ ಇತ್ತು. ಅವರು ನ್ಯಾಯ ಕೇಳು­ತ್ತಿದ್ದಾರೆ. ಆದರೆ ಪ್ರಕರಣವನ್ನು ಸಿಬಿಐಗೆ ವಹಿಸಿ­ದ್ದಾರೆ. ಅವರು ಏನನ್ನು ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ ತನ್ನ ಮಗಳ ಡೈರಿಯೊಂದನ್ನು ಸಿಬಿಐಗೆ ನೀಡಿರುವುದಾಗಿ ಅವರು ಹೇಳಿದ್ಧಾರೆ.

2 ಗಂಟೆಗೊಮ್ಮೆ ವರದಿ ಕೊಡಿ: ರಾಜ್ಯಗಳಿಗೆ ಕೇಂದ್ರ
ದೇಶಾದ್ಯಂತ ವೈದ್ಯರು ಮತ್ತು ಆರೋಗ್ಯ ಕಾರ್ಯಕ ರ್ತರ ಪ್ರತಿಭಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರತೀ 2 ಗಂಟೆಗೆ ಒಮ್ಮೆ ವರದಿ ಸಲ್ಲಿಸಬೇಕೆಂದು ಕೇಂದ್ರ ರವಿವಾರ ನಿರ್ದೇ­ಶಿಸಿದೆ. ಪ್ರತಿಭಟನೆ ವಿಕೋಪಕ್ಕೆ ತಲು­­ಪ­ದಂತೆ ಎಚ್ಚರ ವಹಿಸಲು ಈ ಕ್ರಮ ಕೈಗೊಂಡಿದೆ.

ಒಂದಾದ ಪ್ರತಿಸ್ಪರ್ಧಿ ಫ‌ುಟ್ಬಾಲ್‌ ಫ್ಯಾನ್ಸ್‌ ತಂಡ
ವೈದ್ಯೆ ಅತ್ಯಾ ಚಾ ರದ ವಿರುದ್ಧದ ಪ್ರತಿಭಟನೆ ಮೋಹನ್‌ ಬಾಗಾನ್‌ ಹಾಗೂ ಈಸ್ಟ್‌ ಬೆಂಗಾಲ್‌ ಫ‌ುಟ್ಬಾಲ್‌ ತಂಡಗಳ ಅಭಿಮಾನಿಗಳ ನಡುವಿನ ವೈರತ್ವವನ್ನು ದೂರ ಮಾಡಿದೆ. ರವಿವಾರ ಈ ಅಭಿಮಾನಿಗಳು ವೈರತ್ವ ಮರೆತು ಒಂದಾಗಿ, ತಮ್ಮ ತಂಡದ ಧ್ವಜ ಹಿಡಿದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರಿ­ದ್ದರಿಂದ ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ.

ಪ್ರಕರಣದ ಬಗ್ಗೆ ವದಂತಿ: ಬಿಜೆಪಿ ನಾಯಕ, 2 ವೈದ್ಯರಿಗೆ ಸಮನ್ಸ್‌!
ಟ್ರೈನಿ ವೈದ್ಯೆ ಹತ್ಯೆ ಪ್ರಕರಣದಲ್ಲಿ ಸುಳ್ಳು ಮಾಹಿತಿ ಹಬ್ಬಿಸಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ಹಾಗೂ ಇಬ್ಬರು ವೈದ್ಯರಿಗೆ ಕೋಲ್ಕತಾ ಪೊಲೀಸರು ಸಮನ್ಸ್‌ ನೀಡಿದ್ದಾರೆ. ವೈದ್ಯೆಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಕೆಯ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದೆ ಎಂದು ವೈದ್ಯ ಸುಬರ್ನೋ ಗೋಸ್ವಾಮಿ ವದಂತಿ ಹಬ್ಬಿಸಿದ್ದರು ಎನ್ನಲಾಗಿದೆ.

ಮತ್ತೋರ್ವ ವೈದ್ಯ ಕುನಾಲ್‌ ಸರ್ಕಾರ್‌ ಜಾಲತಾಣಗಳಲ್ಲಿ ಈ ಕುರಿತು ಕಮೆಂಟ್‌ ಮಾಡಿರುವ ಕಾರಣಕ್ಕೆ ಈ ಇಬ್ಬರಿಗೂ ಪೊಲೀಸರು ಸಮನ್ಸ್‌ ನೀಡಿದ್ದಾರೆ. ಜತೆಗೆ ಸಂತ್ರಸ್ತೆಯ ಫೋಟೋ ಹಾಗೂ ಹೆಸರನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ಬಿಜೆಪಿ ನಾಯಕಿ ಲಾಕೆಟ್‌ ಚಟರ್ಜಿಗೂ ಸಮನ್ಸ್‌ ನೀಡಲಾಗಿದೆ. ಸರಕಾರ‌ ತನಿಖೆ ಬಗ್ಗೆ ಗಮನಹರಿಸದೇ ಸಾಮಾಜಿಕ ಜಾಲತಾಣಗಳನ್ನು ನೋಡುತ್ತಾ ಕುಳಿತಿದೆ ಎಂದು ಚಟರ್ಜಿ ಚಾಟಿ ಬೀಸಿದ್ದಾರೆ.

ಟಿಎಂಸಿ ಸಂಸದನಿಗೂ ನೋಟಿಸ್‌: ಹತ್ಯೆ ನಡೆದ 3 ದಿನದ ಬಳಿಕ ಆಸ್ಪತ್ರೆಗೆ ಶ್ವಾನದಳ ಕಳುಹಿಸಲಾಗಿತ್ತು ಎಂದು ಟಿಎಂಸಿ ಸಂಸದ ಸುಖೇಂದು ಶೇಖರ್‌ ರಾಯ್‌ ಹೇಳಿಕೆ ನೀಡಿದ್ದರು. ಆದರೆ ಇದು ತಪ್ಪು ಮಾಹಿತಿ. ಹತ್ಯೆ ನಡೆದ ದಿನವೇ ಶ್ವಾನದಳ ಕಳುಹಿಸಲಾಗಿತ್ತು ಎಂದು ಬಂಗಾಲ ಪೊಲೀಸರು ಹೇಳಿದ್ದು, ಈ ಸಂಬಂಧ ರಾಯ್‌ಗೆ ನೋಟಿಸ್‌ ಕೂಡ ಜಾರಿ ಮಾಡಿದ್ದಾಗಿ ಹೇಳಿದ್ದಾರೆ.

ಆರೋಪಿಗೆ ಮಾನಸಿಕ ಪರೀಕ್ಷೆ
ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಯನ್ನು ಸಿಬಿಐ ಅಧಿಕಾರಿ ಗಳು ರವಿವಾರ ಮಾನಸಿಕ ಪರೀಕ್ಷೆಗೆ ಒಳ ಪಡಿಸಿದ್ದಾರೆ. ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದ (ಸಿಎಫ್ಎಸ್‌ಎಲ್‌) ಐವರು ಅಧಿಕಾರಿಗಳ ತಂಡ ಪರೀಕ್ಷೆಯ ಮೇಲ್ವಿಚಾರಣೆ ನಡೆಸಲಿದೆ. ಅಧಿಕಾರಿಗಳ ತಂಡವು ಶನಿವಾರವೇ ಕೋಲ್ಕತಾಗೆ ಆಗಮಿಸಿದ್ದು, ಆರೋಪಿ ಸಂಜಯ್‌ ರಾವ್‌ನನ್ನು ಪ್ರಶ್ನಿಸಲು ಪ್ರಶ್ನೆ ಪಟ್ಟಿಯನ್ನೂ ಮುಂಚೆಯೇ ಸಿದ್ಧಪಡಿಸಿ ಕೊಂಡಿದೆ. ಇದು ಆರೋಪಿಯ ಮನೋವಿಶ್ಲೇಷಣೆ ಪರೀಕ್ಷೆ ಯಾಗಿದ್ದು, ಆರೋಪಿಯ ದಿನಚರಿ, ನಡವಳಿಕೆ, ಅಭ್ಯಾಸ ಗಳನ್ನು ಅರ್ಥೈಸಿಕೊಳ್ಳಲು ಈ ಪರೀಕ್ಷೆ ನೆರವಾಗಲಿದೆ.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.