Kottigehara: ಮೇಗೂರು ಚಹಾ ತೋಟಕ್ಕೆ ಕಾಡಾನೆ ದಾಳಿ; ಬಾಳೆ, ಕಾಫಿ ಗಿಡಗಳು ಧ್ವಂಸ
ಒಂಟಿ ಸಲಗ ಸ್ಥಳಾಂತರಕ್ಕೆ ಸ್ಥಳೀಯರಿಂದ ಅರಣ್ಯ ಇಲಾಖೆಗೆ ಆಗ್ರಹ
Team Udayavani, Sep 23, 2024, 6:11 PM IST
ಕೊಟ್ಟಿಗೆಹಾರ (ಮೂಡಿಗೆರೆ): ತಾಲೂಕಿನ ಕೆಳಗೂರು ಸಮೀಪದ ಮೇಗೂರು’ಎ’ ವಿಭಾಗ ಚಹಾ (ಟೀ) ತೋಟದಲ್ಲಿ ಭಾನುವಾರ ಮಧ್ಯರಾತ್ರಿ ಒಂಟಿ ಸಲಗವೊಂದು ದಾಳಿ ನಡೆಸಿ ತೋಟದ ಲೈನ್ ಸಮೀಪ ಹಾಕಿರುವ ಬಾಳೆಗಿಡ ಹಾಗೂ ಕಾಫಿ ಗಿಡಗಳ ತುಳಿದು ಹಾನಿ ಉಂಟು ಮಾಡಿದೆ.
ಭಾನುವಾರ ರಾತ್ರಿ ಚಹಾ ಕಾರ್ಖಾನೆಯ ಟೀ ಮೇಕರ್ ಸುಧಾಕರ್ ಅವರ ಮನೆಯ ಮುಂದೆ ಲದ್ದಿ ಹಾಕಿ ಕಾಡಾನೆ ಕೂಗಿದಾಗ ಲೈನ್ ನಲ್ಲಿ ವಾಸ್ತವ್ಯವಿದ್ದ ಕಾರ್ಮಿಕರು ಭಯಭೀತರಾಗಿದ್ದಾರೆ. ಅದೃಷ್ಟವಶಾತ್ ಯಾರೂ ಹೊರ ಬಂದಿಲ್ಲ. ಲೈನ್ ಬಳಿ ದಾಂಧಲೆ ನಡೆಸಿದ ಕಾಡಾನೆ ಒಂದು ಗಂಟೆಗೂ ಅಧಿಕ ಕಾಲ ಅಲ್ಲೇ ಇದ್ದು ಸುತ್ತಮುತ್ತಲ ಬಾಳೆಗಿಡ ತುಳಿದು ಹಾನಿ ಮಾಡಿ ನಂತರ ಅಲ್ಲಿಂದ ತೆರಳಿದೆ.
ಒಂಟಿ ಸಲಗ ಸ್ಥಳಾಂತರಕ್ಕೆ ಒತ್ತಾಯ:
ಚಾರ್ಮಾಡಿ ಘಾಟ್, ಬಿದಿರುತಳ, ಆಲೇಕಾನ್, ಮಲೆಮನೆ ಮಾರ್ಗದ ಮೂಲಕ ಒಂಟಿ ಸಲಗ ಮೇಗೂರಿಗೆ ಬಂದಿದೆ. ಟೀ ಎಸ್ಟೇಟಿನಲ್ಲಿ ಹಲವು ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ.ಈ ಒಂಟಿ ಸಲಗ ಹಗಲಿನಲ್ಲಿ ಬಂದಿದ್ದರೆ ಕೂಲಿ ಕಾರ್ಮಿಕರ ಮೇಲೆ ದಾಳಿ ಮಾಡುತ್ತಿತ್ತು. ರಾತ್ರಿ ಬಂದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಈ ಭಾಗದಲ್ಲಿ ಒಂಟಿ ಸಲಗ ಆಗಾಗ ಜನವಸತಿ ಇರುವ ಕಡೆ ಪ್ರವೇಶಿಸುತ್ತಿದೆ. ಸಂಬಂಧಪಟ್ಟ ಅರಣ್ಯಾಧಿಕಾರಿಗಳು ಒಂಟಿ ಸಲಗ ಸ್ಥಳಾಂತರಿಸಬೇಕು ಎಂದು ಕಾರ್ಮಿಕ ಜಾನ್ ನೊರೋನ್ಹ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ
Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!
Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್ ಅಲರ್ಟ್
Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ
Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.