KPSC Appointment: ಕೆಪಿಎಸ್ಸಿಯಲ್ಲಿ “ಬಿತ್ತಿದಂತೆ ಬೆಳೆ’: ಸಿ.ಟಿ.ರವಿ
Team Udayavani, Jul 19, 2024, 7:16 AM IST
ಬೆಂಗಳೂರು: “ಬಿತ್ತಿದಂತೆ ಬೆಳೆ’ ಎಂಬಂತೆ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯಲ್ಲಿ ನಡೆಯುವ ಜಾತಿ ಮತ್ತು ಹಣದ ಪ್ರಭಾವ ಇತರ ನೇಮಕಾತಿಗಳ ಮೇಲೂ ಆಗುತ್ತದೆ ಎಂದು ಬಿಜೆಪಿ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕೆಪಿಎಸ್ಸಿ ಮೂಲಕ ನಡೆಯುವ ನೇಮಕಾತಿಗಳಲ್ಲಿ ಆಗುತ್ತಿರುವ ವಿಳಂಬ, ಪಾರದರ್ಶಕ ವ್ಯವಸ್ಥೆ ಇಲ್ಲದಿರುವುದನ್ನು ಪ್ರಸ್ತಾವಿಸಿ ಸರಕಾರದ ವಿರುದ್ಧ ಆರೋಪ ಮಾಡಿದ ಅವರು, ಇಡೀ ನೇಮಕಾತಿಯಲ್ಲಿ ಪಾರದರ್ಶಕ ವ್ಯವಸ್ಥೆ ಅಳವಡಿಸಿಕೊಳ್ಳದ ಕಾರಣ ಬಹುತೇಕ ಪ್ರಕರಣಗಳು ನ್ಯಾಯಾಲಯಕ್ಕೆ ಹೋಗುತ್ತಿವೆ. ನೇಮಕಾತಿಗಳಲ್ಲಿ “ಕ್ಯಾಷ್’ ಮತ್ತು “ಕಾಸ್ಟ್’ ಪ್ರಭಾವ ಬೀರುತ್ತದೆ. ಮದುವೆಗೆ ಒಪ್ಪಿಕೊಂಡರೆ ನೇಮಕಾತಿ ಆಗುವ “ಶಾದಿಭಾಗ್ಯ, ತಾಳಿಭಾಗ್ಯ’ ಯೋಜನೆಗಳು ಜಾರಿಯಲ್ಲಿವೆ ಎಂದರು.
ಇದಕ್ಕೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಸಚಿವ ಎನ್.ಎಸ್. ಬೋಸರಾಜ್, ನೇಮಕಾತಿ ಪ್ರಕ್ರಿಯೆಯಲ್ಲಿ ಸಾಕಷ್ಟು ಸುಧಾರಣೆ ಮತ್ತು ಪಾರದರ್ಶಕತೆ ತರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.