ಬರಿದಾಗುತ್ತಿದೆ ಕೃಷ್ಣೆಯ ಒಡಲು ; ಕೃಷ್ಣೆಯನ್ನೇ ನಂಬಿದ ನೂರಾರು ಹಳ್ಳಿಯ ರೈತರಲ್ಲಿ ಆತಂಕ


Team Udayavani, Apr 9, 2022, 6:14 PM IST

ಬರಿದಾಗುತ್ತಿದೆ ಕೃಷ್ಣೆಯ ಒಡಲು ; ಕೃಷ್ಣೆಯನ್ನೇ ನಂಬಿದ ರೈತರಲ್ಲಿ ಆತಂಕ

ರಬಕವಿ-ಬನಹಟ್ಟಿ : ತಾಲೂಕಿನ ಹಿಪ್ಪರಗಿ ಸೇತುವೆ ಕೆಳಭಾಗದಲ್ಲಿ ಕೃಷ್ಣಾ ನದಿ ಸಂಪೂರ್ಣ ಬರಿದಾಗುತ್ತಿದ್ದು, ನದಿ ಅಕ್ಕಪಕ್ಕದ ಜನರಿಗೆ ನೀರಿನ ಅಭಾವದ ಶಂಕೆ ಮೂಡಿ ಆತಂಕ ಪಡುವಂತಾಗಿದೆ.

ಕೃಷ್ಣೆಯನ್ನೇ ನಂಬಿದ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲೂಕಿನ ನೂರಾರು ಹಳ್ಳಿಗಳು ಸಾವಿರಾರು ಏಕರೆ ಜಮೀನಿಗೆ ಈ ನದಿಯೇ ಜೀವನದಿಯಾಗಿದೆ. ಇನ್ನೂ ಖಾಲಿಯಾಗುವ ಲಕ್ಷಣಗಳು ಗೋಚರಿಸುತ್ತಿರುವುದರಿಂದ ಈ ಭಾಗದ ರೈತರಲ್ಲಿ ಆತಂಕದ ಚಾಯೆ ಮೂಡಿದೆ.

ಈಗತಾನೇ ಕಬ್ಬು ಕಟಾವು ಮುಗಿದು ಕುಳೆ ಬೆಳೆಗಳು ಚಿಗುರುತ್ತಿವೆ. ಈಗ ನದಿಯಲ್ಲಿ ನೀರು ಕಡಿಮೆಯಾದರೆ ಬೆಳೆಗಳು ಒಣಗುತ್ತವೆ ಎಂಬ ಭಯ ಶುರುವಾಗಿದೆ. ಆದರೆ ಅಧಿಕಾರಿಗಳು ಹೇಳುವಂತೆ ಈ ಬಾರಿ ಬೇಸಿಗೆಯಲ್ಲಿ ನೀರಿನ ಯಾವುದೇ ಅಭಾವವಾಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಬೆಸಿಗೆಯಲ್ಲಿನ ಬೆಳೆಗಳಾದ ಶೇಂಗಾ, ಮೆಕ್ಕೆಜೋಳ ಈಗ ತೆನೆಗಟ್ಟುತ್ತಿವೆ ಈಗ ನೀರಿನ ತೊಂದರೆಯಾದರೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗುತ್ತದೆ.

ಹಿಪ್ಪರಗಿ ಸೇತುವೆಯ ಒಟ್ಟು ನೀರಿನ ಸಾಮರ್ಥ್ಯ 6 ಟಿಎಂಸಿ. ಆದರೆ ಈಗ 5.16 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಸೇತುವೆ ಮೇಲ್ಬಾಗದ ಜನರಿಗೆ ಬೇಸಿಗೆ ಮುಗಿಯುವ ವರೆಗೂ ನಿರಿನ ಅಭಾವವಾಗಲು ಸಾಧ್ಯವಿಲ್ಲ ಎನ್ನುತ್ತಾರೆ ನೀರಾವರಿ ಇಲಾಖೆಯ ಅಧಿಕಾರಿ ವಿಠ್ಠಲ ನಾಯಕ್.

ಇದನ್ನೂ ಓದಿ : ಕೆನಡಾದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಸಾವು

ಜಲಾಶಯದ ಮುಂಬದಿಯಲ್ಲಿ ನೀರು ಖಾಲಿಯಾದ ಕಾರಣ ಈ ಭಾಗದ ಹಳ್ಳಿಗಳ ರೈತರು ಜಲಾಶಯದಿಂದ 1 ಟಿಎಂಸಿ ಯಷ್ಟಾದರೂ ನೀರನ್ನು ಕೆಳಾಬಾಗಕ್ಕೆ ಬಿಡಲು ಮನವಿ ಮಾಡಲಾಗಿದೆ. ನೀರು ಬಿಟ್ಟರೆ ಅದು ಚಿಕ್ಕಪಡಸಲಗಿ ಬ್ಯಾರೇಜ್‌ವರೆಗೂ ಹೋಗಿ ಸಂಗ್ರಹವಾಗುತ್ತದೆ. ಇದರಿಂದ ಈ ಭಾಗದ ರೈತರಿಗೂ ನೀರಿನ ಯಾವುದೇ ತೊಂದರೆಯಾಗುವುದಿಲ್ಲ ಎನ್ನುತ್ತಾರೆ ತುಬಚಿ ಗ್ರಾಮದ ರೈತರಾದ ಸುರೇಶಗೌಡ ಪಾಟೀಲ.

ರಬಕವಿ ಬನಹಟ್ಟಿ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಜಕ್‌ವೆಲ್ ಇರುವ ಮಹೀಷವಾಡಗಿ ಸೇತುವೆಯಲ್ಲಿ ಎರಡು ಟಿಎಂಸಿ ನೀರು ಸಂಗ್ರಹವಿದ್ದು, ಬೇಸಿಗೆ ಕಾಲ ಮುಗಿಯುವವರೆಗೂ ಈ ಬಾರಿ ಕುಡಿಯುವ ನೀರಿನ ಯಾವುದೇ ತೊಂದರೆಯಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.