PM Kusum Scheme: ಮೆಸ್ಕಾಂನಲ್ಲಿ 2,500 ಅರ್ಜಿ ನೋಂದಣಿ


Team Udayavani, Aug 30, 2024, 1:40 AM IST

PM Kusum Scheme: ಮೆಸ್ಕಾಂನಲ್ಲಿ 2,500 ಅರ್ಜಿ ನೋಂದಣಿ

ಮಂಗಳೂರು: ನೀರಾವರಿಗೆ ಸಾಂಪ್ರದಾ ಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಗೆ ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಆ.20ರ ವರೆಗೆ 2,500 ಅರ್ಜಿಗಳು ಸಲ್ಲಿಕೆಯಾಗಿವೆ.

ವಿದ್ಯುತ್‌ ಜಾಲದಿಂದ 500 ಮೀ.ಗಿಂತ ಹೆಚ್ಚು ದೂರ ವಿರುವ ಕೃಷಿ ಪಂಪ್‌ಸೆಟ್‌ಗಳಿಗೆ ಸೌರ ಪಂಪ್‌ಸೆಟ್‌ ಅಳವಡಿಸಲು ಪಿಎಂ-ಕುಸುಮ್‌ ಯೋಜನೆಯಡಿ ಸಹಾಯಧನವನ್ನು ರಾಜ್ಯ ಸರಕಾರವು ಶೇ. 30 ರಿಂದ ಶೇ. 50 ಕ್ಕೆ ಹೆಚ್ಚಿಸಿದೆ. ಕೇಂದ್ರ ಸರಕಾರ ಶೇ. 30 ಹಾಗೂ ರೈತರು ಕೇವಲ ಶೇ. 20 ವಂತಿಗೆ ಭರಿಸಬೇಕಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿ ವೃದ್ಧಿ ನಿಗಮ(ಕೆಆರ್‌ಇಡಿಎಲ್‌) ಯೋಜನೆಯ ಅನು ಷ್ಠಾನದ ಹೊಣೆ ಹೊತ್ತಿದ್ದು, ರೈತರು ಸೌರಚಾಲಿತ ಪಂಪ್‌ಸೆಟ್‌ ಬಳಸಿದರೆ ಸಾಂಪ್ರದಾಯಿಕ ವಿದ್ಯುತ್ತಿನ ಮೇಲಿನ ಅವಲಂಬನೆ ಆಗಬೇಕಿಲ್ಲ. ಇಂಥ ಸೋಲಾರ್‌ ಪಂಪ್‌ಗ್ಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ನಿರ್ವಹಿಸುವರು. ರೈತರಿಗೆ ಸೌರ ಫಲಕಗಳು, ಸಬ್‌ಮ ರ್ಸಿಬಲ್‌/ಸರ್ಫೆಸ್‌ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್‌ ಬೋರ್ಡ್‌, ಪೈಪ್‌ ಮತ್ತು ಕೇಬಲನ್ನು ಪೂರೈಸಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆ ಯಿಂದ 8 ಗಂಟೆಗಳ ಕಾಲ ಹಗಲಿನಲ್ಲಿ ವಿದ್ಯುತ್‌ ಪೂರೈಕೆಯಾಗಲಿದೆ.

ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆ ಗಳಿಗೆ ಪರದಾಡಬೇಕಿಲ್ಲ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮಾವತಿ ತಿಳಿಸಿದ್ದಾರೆ. ರೈತರು ತಮ್ಮ ಆಧಾರ್‌, ಆರ್‌ಟಿಸಿ ಮತ್ತು ಬ್ಯಾಂಕ್‌ ವಿವರಗಳೊಂದಿಗೆ ಆನ್‌ಲೈನ್‌ ಪೋರ್ಟಲ್‌ https://souramitra.com ನಲ್ಲಿ ನೋಂದಾಯಿಸಬಹುದು.

ಕುಸುಮ್‌ ಸಿ
ಕುಸುಮ್‌ ಸಿ ಯೋಜನೆಯಡಿ ಫೀಡರ್‌ ಮಟ್ಟದ ಸೋಲಾರ್‌ ಮೂಲಕ ರೈತರ ಹಾಲಿ ಪಂಪ್‌ಸೆಟ್‌ ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್‌ ಸರಬರಾಜು ಮಾಡಲಾ ಗುವುದು. ಪ್ರತ್ಯೇಕ ಸೋಲಾರ್‌ ಪಂಪ್‌ಗ್ಳ ಬದಲಿಗೆ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವ ಯೋಜನೆ ಇದು. ಐಪಿ ಸೆಟ್‌ಗಳಿಗೆ ಸೌರವಿದ್ಯುತ್‌ ಮೂಲದಿಂದ ವಿದ್ಯುತ್‌ ಪೂರೈಸಲಾಗುವುದು. ಸ್ಥಳೀ ಯವಾಗಿ ವಿದ್ಯುತ್‌ ಉತ್ಪಾದನೆ ಹೆಚ್ಚುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಹಗಲು ವಿದ್ಯುತ್‌ ಪೂರೈಸಲು ಸಾಧ್ಯವಾಗಲಿದೆ.

ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರಸ್ತುತ 118 ಎಕ್ರೆ ಸರಕಾರಿ ಹಾಗೂ 70 ಎಕ್ರೆ ಖಾಸಗಿ ಜಮೀನನ್ನು ಸೌರಶಕ್ತಿ ಯೋಜ ನೆಗೆ ಗುರುತಿಸಿದ್ದು, ಅಂದಾಜು 40 ಮೆ. ವ್ಯಾ. ಸೌರಶಕ್ತಿ ಉತ್ಪಾದಿಸುವ ಉದ್ದೇಶ ಹೊಂದಲಾಗಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.