ಅಮೆರಿಕದಲ್ಲೂ ವೆಂಟಿಲೇಟರ್‌ಗಳ ಕೊರತೆಯೇ ದೊಡ್ಡ ಸಮಸ್ಯೆ

13 ವರ್ಷಗಳ ವೆಂಟಿಲೇಟರ್‌ ಪ್ರಾಜೆಕ್ಟ್ ವಿಫಲ

Team Udayavani, Mar 31, 2020, 1:15 PM IST

ಅಮೆರಿಕದಲ್ಲೂ ವೆಂಟಿಲೇಟರ್‌ಗಳಕೊರತೆಯೇ ದೊಡ್ಡ ಸಮಸ್ಯೆ

ವಾಷಿಂಗ್ಟನ್‌: ಕೋವಿಡ್ 19 ಇಂದು ಜಗತ್ತಿನಾದ್ಯಂತ ಮರಣಮೃದಂಗವನ್ನು ಬಾರಿಸುತ್ತಿದೆ. ಚೀನಕ್ಕಿಂತ ಹೆಚ್ಚಿನ ಹಾನಿಯನ್ನು ಅಮೆರಿಕದಲ್ಲಿ ಮಾಡುತ್ತಿದೆ. ಅಮೆರಿಕದಲ್ಲಿ ಇದೀಗ ವೆಂಟಿಲೇಟರ್‌ ಕೊರತೆಯೇ ಸಮಸ್ಯೆಯಾಗಿ ಕಾಡುತ್ತಿದೆ. ಅಷ್ಟೇ ಅಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ 13 ವರ್ಷದ ಹಿಂದೆ ಯೋಚಿಸಿದಂತೆ ಕ್ರಿಯಾಶೀಲವಾಗಿದ್ದರೆ ಈ ಸಮಸ್ಯೆಯೇ ಇರುತ್ತಿರಲಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ನ ಲೇಖನವೊಂದು ಅಭಿಪ್ರಾಯಪಟ್ಟಿದೆ.

ಬರೀ ಹದಿಮೂರು ವರ್ಷ ಹದಿಮೂರು ವರ್ಷಗಳ ಹಿಂದಿನ ಕಥೆ ಇದು. ಆರೋಗ್ಯ ಅಧಿಕಾರಿಗಳ ತಂಡವೊಂದು ವೈದ್ಯಕೀಯ ವ್ಯವಸ್ಥೆಯಲ್ಲಿನ ಲೋಪಗಳ ಕುರಿತು ಶ್ವೇತಭವನದ ಗಮನಸೆಳೆದಿತ್ತು. ವೆಂಟಿಲೇಟರ್‌ಗಳ ಕೊರತೆ ರಾಷ್ಟ್ರದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಮುಂದೊಂದು ದಿನ ದೊಡ್ಡ ಸಮಸ್ಯೆಯಾಗಿ ಕಾಡಬಹುದು. ಪ್ರಸ್ತುತ ಸೀಮಿತ ಸಂಖ್ಯೆಯಲ್ಲಷ್ಟೇ ವೆಂಟಿಲೇಟರ್‌ಗಳು ಇದ್ದು, ದುಬಾರಿಯೂ ಆಗಿದೆ. ಜ್ವರ, ಸಾಂಕ್ರಾಮಿಕ ರೋಗಗಳು ಎದುರಾದ ಸಂರ್ಭದಲ್ಲಿ ನಾವು ಕೈಕಟ್ಟಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಇದನ್ನು ಅರಿತ ಸರಕಾರ ಬಜೆಟ್‌ ನಲ್ಲಿ ಹಣ ಮೀಸಲಿಟ್ಟಿತು. ಅಗ್ಗದಲ್ಲಿ ವೆಂಟಿಲೇಟರ್‌ಗಳನ್ನು ನಿರ್ಮಿಸಲು ಗುತ್ತಿಗೆಯನ್ನು ನೀಡಿತ್ತು. ಅಂತಿಮವಾಗಿ ಕಂಪೆನಿ ನಡುವೆ ಒಪ್ಪಂದವೂ ಆಯಿತು. ಕೆಲಸವೂ ಆರಂಭವಾಯಿತು. ವಿಪರ್ಯಾಸ ಎಂದರೆ ಅಮೆರಿಕ ಸರಕಾರ ಈ ಬಹುಕೋಟಿ ಡಾಲರ್‌ ಮೌಲ್ಯದ ವೈದ್ಯಕೀಯ ಸಾಧನಗಳ ತಯಾರಿಸಲು ಕ್ಯಾಲಿಫೋರ್ನಿಯಾದ ಸಣ್ಣ ಕಂಪನಿಗೆ ವಹಿಸಲಾಗಿತ್ತು. ಸಂಸ್ಥೆ ಇದರಲ್ಲಿ ವಿಫಲವಾಗಿ, ಉತ್ಪಾದಿಸಲಾದ ವೆಂಟಿಲೇಟರ್‌ಗಳು ಶೂನ್ಯ.

ಮತ್ತೆ ಟೆಂಡರ್‌ ಇದರಿಂದ 5 ವರ್ಷ ವ್ಯರ್ಥವಾಯಿತು. ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳ ಸಮಸ್ಯೆ ಕಾಡಲಾರಂಭಿಸಿದವು. 2014ರಲ್ಲಿ ಸರಕಾರ ಮತ್ತೂಂದು ಕಂಪನಿಯೊಂದಿಗೆ ಒಪ್ಪಂದ ಪ್ರಾರಂಭಿಸಿತು. ಆದರೆ ಅವರು ಉತ್ಪಾದಿಸಿದ ವೆಂಟಿಲೇಟರ್‌ಗಳು ಇನ್ನೂ ತಲುಪಬೇಕಿದೆ ಅಷ್ಟೇ. ಇಂದು ಅಮೆರಿಕ ಸೇರಿದಂತೆ ಬಹುತೇಕ ರಾಷ್ಟ್ರಗಳಲ್ಲಿ ವೆಂಟಿಲೇಟರ್‌ ಗಳ ಕೊರತೆಯು ತುರ್ತು ಪರಿಸ್ಥಿತಿಯ ನಿಯಂತ್ರಣದಲ್ಲಿ ಸೋಲುವಂತೆ ಮಾಡುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಅವರಿಗೆ ವೆಂಟಿಲೇಟರ್‌ತುಂಬಾ ಅಗತ್ಯ ಇದೆ. ಈಗ ಅಮೆರಿಕ ಕೊನೆಗೂ ಎಚ್ಚೆತ್ತಿದ್ದು, ಆಗ್ಗ ಮತ್ತು ಬಳಸಲು ಸುಲಭವಾದ ವೆಂಟಿಲೇಟರ್‌ಗಳನ್ನು ತಯಾರಿಸಲು ಮುಂದಾಗಿದೆ.

2006 ರಲ್ಲಿ, ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆಯು ಬಯೋಮೆಡಿಕಲ್‌ ಅಡ್ವಾನ್ಸ್ಡ್ ರಿಸರ್ಚ್‌ ಅಂಡ್‌ ಡೆವಲಪ್ಮೆಂಟ್‌ ಅಥಾರಿಟಿ ಎಂಬ ಹೊಸ ವಿಭಾಗವನ್ನು ಸ್ಥಾಪಿಸಿತ್ತು. ರಾಸಾಯನಿಕ, ಜೈವಿಕ ಮತ್ತು ಪರಮಾಣು ದಾಳಿಗಳಿಗೆ ಮತ್ತು ಸಾಂಕ್ರಾಮಿಕ ಕಾಯಿಲೆಗಳಿಗೆ ವೈದ್ಯಕೀಯ ಉಪಕರಣ ಗಳನ್ನು ಸಿದ್ಧಪಡಿಸುವ ಆದೇಶವನ್ನು ಹೊಂದಿತ್ತು. ಕಾರ್ಯಾ ಚರಣೆಯ ಮೊದಲ ವರ್ಷದಲ್ಲಿ, ವೆಂಟಿಲೇಟರ್‌ಗಳ ಸಂಖ್ಯೆಯನ್ನು ಹೇಗೆ ಹೆಚ್ಚಿಸಬೇಕೆಂದು ಅಧ್ಯಯನ ನಡೆಸಲಾಯಿತು. ಆ ಕಾರ್ಯ ಪ್ರಗತಿಯಲ್ಲಿದೆ.

ಅಮೆರಿಕ ಅಂದೇ ಎಚ್ಚೆತ್ತುಕೊಂಡಿದ್ದರೆ, ಇಂದು ವೆಂಟಿಲೇಟರ್‌ ಸಮಸ್ಯೆಯಿಂದ ಜನರು ಸಾವೀಗೀಡಾಗುತ್ತಿರಲ್ಲ. ಕೋವಿಡ್ 19 ಸಂದರ್ಭ ದಲ್ಲಿ ಅಸಹಾಯಕ ಸ್ಥಿತಿ ಉದ್ಬವಿಸುತ್ತಿರಲಿಲ್ಲ ಎನ್ನುತ್ತಾರೆ ಸ್ಥಳೀಯ ಪರಿಣಿತರು. ಬಹುತೇಕ ರಾಷ್ಟ್ರಗಳಲ್ಲಿ ಇಂದು ವೆಂಟಿಲೇಟರ್‌ಗಳ ಅಭಾವ ಬಹುವಾಗಿ ಕಾಡುತ್ತಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.