Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Team Udayavani, Sep 22, 2024, 2:55 AM IST
ಪುತ್ತೂರು: ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರೊಂದಿಗೆ ಅಭಿಪ್ರಾಯ ಸಂಗ್ರಹ ನಡೆದಿದೆ. ಗೆಲುವಿನ ಬಗ್ಗೆ ಸಂಘಟನಾತ್ಮಕವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಅವರು ಪಕ್ಷದ ಹಿರಿಯರ ಜತೆಗೆ ಚರ್ಚಿಸಿದ್ದಾರೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ಎರಡೂ ಜಿಲ್ಲೆಯವರು ಅಭಿಪ್ರಾಯ ತಿಳಿಸಿದ್ದಾರೆ. ಅಂತಿಮವಾಗಿ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಕಾರ್ಯಕರ್ತರಿಗೆ ಗೆಲುವು ಮುಖ್ಯವೇ ಹೊರತು ಅಭ್ಯರ್ಥಿ ಯಾರು ಎಂಬುದಲ್ಲ ಎಂದರು.
ಸ್ಥಾನಮಾನ ವರಿಷ್ಠರ ನಿರ್ಧಾರ
ಅರುಣ್ ಕುಮಾರ್ ಪುತ್ತಿಲ ಅವರಿಗೆ ಜವಾಬ್ದಾರಿ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದಾರೆ. ಈ ವಿಷಯ ರಾಜ್ಯಮಟ್ಟದಲ್ಲಿ ತೀರ್ಮಾನವಾಗಲಿದೆ. ಅವರು ನೀಡುವ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ. ಅರುಣ್ ಪುತ್ತಿಲರಿಗೆ ಜವಾಬ್ದಾರಿ ನೀಡಬೇಕು ಎಂದು ನಾವು ವರಿಷ್ಠರಿಗೆ ಮನವಿ ಮಾಡಿದ್ದೇವೆ ಎಂದು ಸತೀಶ್ ಹೇಳಿದರು.
ಆರೋಪ ಮುಕ್ತರಾಗಿ ಬರುವ ವಿಶ್ವಾಸ ಇದೆ
ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಕುಂಪಲ, ಅರುಣ್ ಪುತ್ತಿಲ ಅವರು ಪುತ್ತೂರು ಭಾಗದ ಪ್ರಬಲ ಜನ ನಾಯಕ. ಆರೋಪಕ್ಕೆ ಧೃತಿಗೆಡದೆ ಅವರು ಕಾನೂನು ಮಾರ್ಗದಲ್ಲಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. ಜಾಮೀನು ಸಿಕ್ಕಿದೆ. ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ನಾನೇನೂ ಮಾತನಾಡುವುದಿಲ್ಲ. ಅವರು ಆರೋಪ ಮುಕ್ತರಾಗಿ ಬರುವ ವಿಶ್ವಾಸ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.