ತರಕಾರಿಗಳ ಬೆಲೆ ನಿಯಂತ್ರಣಕ್ಕೆ ಸರಕಾರಗಳು ಮುಂದಾಗಲಿ


Team Udayavani, Jul 13, 2023, 5:25 AM IST

VEGETABLES

ದೇಶಾದ್ಯಂತ ತರಕಾರಿ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದಕ್ಕೆ ಪೂರಕವೆಂಬಂತೆ ಜೂನ್‌ ತಿಂಗಳಲ್ಲಿ ಸಗಟು ಹಣದುಬ್ಬರವೂ ಹೆಚ್ಚಾಗಿದೆ. ಅಂದರೆ ಗ್ರಾಹಕ ದರ ಸೂಚ್ಯಂಕ(ಸಿಪಿಐ)ವು ಕಳೆದ ನಾಲ್ಕು ತಿಂಗಳುಗಳಿಂದಲೂ ಇಳಿಕೆಯ ಹಾದಿಯಲ್ಲಿತ್ತು. ಆದರೆ ಜೂನ್‌ ತಿಂಗಳಲ್ಲಿ ದಿಢೀರನೇ ಟೊಮೆಟೊ ಸಹಿತ ವಿವಿಧ  ತರಕಾರಿಗಳು, ಬೇಳೆಕಾಳುಗಳು ಮತ್ತು ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಯಿತು. ಹೀಗಾಗಿ ಸಗಟು ಹಣದುಬ್ಬರ ದರ ಶೇ.4.81ಕ್ಕೆ ಏರಿಕೆಯಾಯಿತು. ಮೇ ತಿಂಗಳಲ್ಲಿ ಇದು ಶೇ.4.31ರಷ್ಟಿತ್ತು.

ರಾಷ್ಟ್ರೀಯ ಸಾಂಖೀಕ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಆಹಾರ ವಸ್ತುಗಳ ಹಣದುಬ್ಬರವೇ ಶೇ.4.49ಕ್ಕೆ ಏರಿಕೆಯಾಗಿದೆ. ಇದು ಮೇ ತಿಂಗಳಲ್ಲಿ ಶೇ.2.96ರಷ್ಟಿತ್ತು. ಹಾಗೆಯೇ ಜುಲೈ ತಿಂಗಳಲ್ಲಿ ಆಹಾರ ವಸ್ತುಗಳ ಹಣದುಬ್ಬರ ಶೇ.5.3ರಿಂದ ಶೇ.5.5ರಷ್ಟಕ್ಕೆ ಏರಿಕೆಯಾಗಬಹುದು ಎಂದು ವಿತ್ತ ತಜ್ಞರು ಅಂದಾಜಿಸಿದ್ದಾರೆ. ಹೀಗಾಗಿ ಸರಕಾರಗಳು ತರಕಾರಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ಈ ಬೆಳವಣಿಗೆಗಳ ಮಧ್ಯೆಯೇ ಕೇಂದ್ರ ಸರಕಾರ ದಿಲ್ಲಿ ಸಹಿತ ದೇಶದ ವಿವಿಧ ನಗರಗಳಲ್ಲಿ ಟೊಮೇಟೊ ಬೆಲೆ ಇಳಿಕೆ ಮಾಡಲು ಕ್ರಮ ತೆಗೆದುಕೊಂಡಿದೆ. ನಾಫೇಡ್‌ ಮೂಲಕ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದಿಂದ ಟೊಮೇಟೊವನ್ನು ಖರೀದಿಸಿ, ದೇಶದ ಇತರ ನಗರಗಳಿಗೆ ಪೂರೈಕೆ ಮಾಡುವಂತೆ ನಾಫೇಡ್‌ಗೆ ಸೂಚನೆ ನೀಡಿದೆ.

ಸದ್ಯ ದಿಲ್ಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಟೊಮೇಟೊ ಬೆಲೆ ಪ್ರತೀ ಕೆ.ಜಿ.ಗೆ 200 ರೂ.ಗಿಂತ ಹೆಚ್ಚು ಇದೆ. ಟೊಮೇಟೊ ಖರೀದಿ ಮಾಡುವುದು ಮಧ್ಯಮ ವರ್ಗಕ್ಕೆ ದುಸ್ತರವೆನಿಸಿದೆ. ಇಂಥ ಹೊತ್ತಿನಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವುದು ಸ್ವಾಗತಾರ್ಹವೇ ಹೌದು. ಅಲ್ಲದೆ ಟೊಮೇಟೊ ಹೆಚ್ಚು ಬೆಳೆಯುವ ರಾಜ್ಯಗಳಿಂದ ಖರೀದಿಸಿ, ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ(ನಾಫೇಡ್‌), ರಾಷ್ಟ್ರೀಯ ಸಹಕಾರ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್)ಗಳ ಮೂಲಕ ಮಾರಾಟಕ್ಕೆ ಮುಂದಾಗಿದೆ. ಜತೆಗೆ ದಿಲ್ಲಿ-ಎನ್‌ಸಿಆರ್‌, ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಲದಲ್ಲಿ ಡಿಸ್ಕೌಂಟ್‌ ಬೆಲೆಯಲ್ಲಿ ಮಾರಾಟ ಮಾಡಲು ನಿರ್ಧರಿಸಿದೆ. ಟೊಮೇಟೊ ಬೆಲೆ ಇಳಿಕೆಯಾಗುವವರೆಗೂ ಡಿಸ್ಕೌಂಟ್‌ನಲ್ಲೇ ಮಾರಾಟ ಮಾಡಲು ತೀರ್ಮಾನಿಸಿರುವುದರಿಂದ ಗ್ರಾಹಕರಿಗೆ ಕೊಂಚ ಮಟ್ಟಿನ ನಿರಾಳತೆ ಸಿಗಬಹುದು.

ಇನ್ನು ತಮಿಳುನಾಡಿನಲ್ಲಿಯೂ ಅಲ್ಲಿನ ರಾಜ್ಯ ಸರಕಾರ ರಿಯಾಯಿತಿ ಯಲ್ಲಿ ಟೊಮೇಟೊವನ್ನು ಮಾರಾಟ ಮಾಡುತ್ತಿದೆ. ಈ ಮೂಲಕ ಬೆಲೆ ಏರಿಕೆಯ ಬಿಸಿಯನ್ನು ಕೊಂಚ ಮಟ್ಟಿಗಾದರೂ ಅದು ತಗ್ಗಿಸುತ್ತಿದೆ.

ಸದ್ಯ ಕರ್ನಾಟಕದಲ್ಲಿಯೂ ಟೊಮೇಟೊ ಬೆಲೆ ಪ್ರತೀ ಕೆ.ಜಿ.ಗೆ 95ರಿಂದ 118 ರೂ.ವರೆಗೆ ಇದೆ. ಹೊಟೇಲ್‌ಗಳಲ್ಲಿ ಟೊಮೇಟೊ ಬಳಕೆ ಮಾಡುವುದನ್ನೇ ಸ್ಥಗಿತ ಮಾಡುವಷ್ಟರ ಸ್ಥಿತಿ ಎದುರಾಗಿದೆ. ಮನೆಗಳಲ್ಲಂತೂ ಗೃಹಿಣಿಯರು ಟೊಮೇಟೊ ಖರೀದಿ ವಿಚಾರದಲ್ಲಿ ಕಣ್ಣೀರು ಸುರಿಸುತ್ತಿದ್ದಾರೆ. ಇಂಥ ವೇಳೆಯಲ್ಲಿ ರಾಜ್ಯ ಸರಕಾರವು ತಮಿಳುನಾಡು ಮಾದರಿಯಲ್ಲೇ ರಿಯಾಯಿತಿ ರೂಪದಲ್ಲಿ ಟೊಮೇಟೊ ಸಹಿತ ತರಕಾರಿಗಳನ್ನು ಮಾರಾಟ ಮಾಡಿದರೆ ಶ್ರೀಸಾಮಾನ್ಯನ ಜೇಬಿಗೆ ಕೊಂಚವಾದರೂ ನೆಮ್ಮದಿ ಸಿಗುತ್ತದೆ. ಕೇಂದ್ರ ಸರಕಾರ ಕೂಡ ಈ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

BAnga

Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.