ಮಂಗಳೂರು: ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ

ಕ್ಯಾನ್ಸರ್‌ಗೆ ಕಡಿವಾಣ ಹಾಕುವ ಯತ್ನ; ಶೀಘ್ರ ಅನುಷ್ಠಾನ ನಿರೀಕ್ಷೆ

Team Udayavani, Feb 7, 2023, 7:00 AM IST

ಮಂಗಳೂರು: ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ

ಮಂಗಳೂರು: ಸಿಗರೇಟ್‌ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಇನ್ನು ಪರವಾನಿಗೆ ಕಡ್ಡಾಯ ವಾಗಲಿದ್ದು, ಬೇಕಾಬಿಟ್ಟಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಬೀಳಲಿದೆ.
ತಂಬಾಕು ಉತ್ಪನ್ನಗಳು ಕ್ಯಾನ್ಸರ್‌ಗೆ ಕಾರಣವಾಗಿರುವುದರಿಂದ ಮತ್ತು ಇಂತಹ ಉತ್ಪನ್ನಗಳು ಯುವಜನತೆ ಸೇರಿದಂತೆ ಸಾರ್ವಜನಿಕರ ಕೈಗೆ ಸುಲಭ ವಾಗಿ ದೊರೆಯುತ್ತಿರು ವುದರಿಂದ ಇದರ ನಿಯಂತ್ರಣಕ್ಕೆ ಅಬಕಾರಿ ಮಾದರಿಯಲ್ಲಿ ಪರವಾನಿಗೆ ಕಡ್ಡಾಯ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆ ಮತ್ತು ಸಂಬಂಧಿಸಿದ ಎಲ್ಲ ಇಲಾಖೆಗಳಿಂದ ಪರವಾನಿಗೆ ಕಡ್ಡಾಯವಾಗಲಿದೆ.

“ಕೋಟ್ಪಾ’ಕ್ಕಿಂತ ಪರಿಣಾಮಕಾರಿ
ಪ್ರಸ್ತುತ ಕೋಟ್ಪಾ 2003 (ಸಿಗರೇಟ್‌ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ) ಜಾರಿಯಲ್ಲಿದೆ. ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯವಿಲ್ಲ. ಪ್ಯಾಕೆಟ್‌ ಸಿಗರೇಟ್‌ ಮಾತ್ರವೇ ಮಾರಾಟ ಮಾಡಬೇಕು, ಸೂಕ್ತ ಎಚ್ಚರಿಕೆ ಫ‌ಲಕ ಗಳನ್ನು ಅಳವಡಿಸಬೇಕು ಮೊದಲಾದ ನಿಯಮಗಳು ಮಾತ್ರ ಜಾರಿಯಲ್ಲಿವೆ. ಈ ನಿಯಮಗಳನ್ನು ಉಲ್ಲಂ ಸಿದರೆ ಎಫ್ಐಆರ್‌ ದಾಖಲಿಸಿ ಲೈಸನ್ಸ್‌ ರದ್ದು ಮಾಡುವ ಅವಕಾಶವಿದೆ. ಸಾರ್ವಜನಿಕವಾಗಿ ಧೂಮಪಾನ ಮಾಡುವವರಿಂದಲೂ ದಂಡ ವಸೂಲಿ ಮಾಡಬಹುದಾಗಿದೆ. ಆದರೆ ಇದು ತುಂಬಾ ಪರಿಣಾಮಕಾರಿಯಾಗಿಲ್ಲ. ಪರವಾ ನಿಗೆ ಕಡ್ಡಾಯ ನಿಯಮದಿಂದ ಶಾಲಾ ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಬೀಳಲಿದೆ.

ವರ್ಷಕ್ಕೆ 10 ಲಕ್ಷ ಜನ ಸಾವು
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಪ್ರಕಾರ ಭಾರತದಲ್ಲಿ ವರ್ಷಕ್ಕೆ ಸುಮಾರು 10 ಲಕ್ಷ ಜನರು ತಂಬಾಕಿನ ಪರಿಣಾಮದ ಶ್ವಾಸಕೋಶದ ಕಾನ್ಸರ್‌ನಿಂದ ಮೃತಪಡುತ್ತಿದ್ದಾರೆ. ಇದರಲ್ಲಿ ಶೇ. 90ರಷ್ಟು ಪುರುಷರು, ಶೇ. 70ರಷ್ಟು ಮಂದಿ ಮಹಿಳೆಯರು ಇದ್ದಾರೆ ಎನ್ನುತ್ತಾರೆ ತಜ್ಞರು.

ದಂಡ ಪಾವತಿಸಿ ವ್ಯಾಪಾರ!
ಕೋಟಾ³ ತಂಡವು ನಿಯಮ ಉಲ್ಲಂ ಸುವ ಅಂಗಡಿ ಮಾಲಕರಿಗೆ, ಸಾರ್ವಜನಿಕವಾಗಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುತ್ತಿದೆ. ಆದರೆ ದಂಡ ಪಾವತಿಸಿ ಮತ್ತೆ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆ! ಉಡುಪಿ ಜಿಲ್ಲೆಯಲ್ಲಿ 2021-22ರಲ್ಲಿ 45 ಕಡೆ ದಾಳಿ ನಡೆಸಿ 96,250 ರೂ., 2022-23ರಲ್ಲಿ ಇದುವರೆಗೆ 54 ಪ್ರಕರಣಗಳಲ್ಲಿ 1,29,350 ರೂ. ದಂಡ ವಸೂಲಿ ಮಾಡಲಾಗಿದೆ. ದ.ಕ ಜಿಲ್ಲೆಯಲ್ಲಿ 2021-22ರಲ್ಲಿ 904 ಪ್ರಕರಣಗಳಲ್ಲಿ 1,42,160 ರೂ. ಹಾಗೂ 2022-23ರಲ್ಲಿ ಇದುವರೆಗೆ 800 ಪ್ರಕರಣಗಳಲ್ಲಿ 1,17,920 ರೂ. ದಂಡ ವಸೂಲಿ ಮಾಡಲಾಗಿದೆ.

ಬೇಕಾಬಿಟ್ಟಿಯಾಗಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುವ ಉದ್ದೇಶದಿಂದ ಸರಕಾರ ಪರವಾನಿಗೆ ಕಡ್ಡಾಯಗೊಳಿಸುವ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದೆ. ನಿಯಮಾವಳಿ/ ಆದೇಶ ಶೀಘ್ರ ಕೈಸೇರುವ ನಿರೀಕ್ಷೆ ಇದ್ದು ಬಳಿಕ ಅನುಷ್ಠಾನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸದ್ಯ ಕೋಟ್ಪಾ ಕಾಯಿದೆಯಂತೆ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜನರಲ್ಲಿ ಜಾಗೃತಿ ಕೂಡ ಇನ್ನಷ್ಟು ಹೆಚ್ಚಬೇಕಿದೆ.
– ಡಾ| ಜಗದೀಶ್‌, ಡಾ| ನಾಗರತ್ನಾ ದ.ಕ. ಮತ್ತು ಉಡುಪಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.