Local Body Reservation: ಮೀಸಲು ಸಿಕ್ಕರೂ ಪೂರ್ಣಾವಧಿ ಅಧಿಕಾರವಿಲ್ಲ!

180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಅಧಿಕಾರ "ಖೋತಾ',  ಈಗ ಅಧ್ಯಕ್ಷ-ಉಪಾಧ್ಯಕ್ಷರಾಗುವವರಿಗೆ 15-16 ತಿಂಗಳಷ್ಟೇ ಅಧಿಕಾರ!

Team Udayavani, Aug 7, 2024, 7:14 AM IST

vidhana-Soudha

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ 2ನೇ ಅವಧಿಗೆ ಮೀಸಲಾತಿಯನ್ನು ರಾಜ್ಯ ಸರಕಾರ ನಿಗದಿಪಡಿಸಿದೆ. ಆದರೆ 1 ವರ್ಷಕ್ಕೂ ಅಧಿಕ ಕಾಲದಿಂದ ಅಧಿಕಾರಕ್ಕಾಗಿ ಕಾದು ಕುಳಿತಿದ್ದ ರಾಜ್ಯದ 301 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 186ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿಧಿಗಳಿಗೆ ಅಧಿಕಾರ “ಖೋತಾ’ ಆಗಲಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ ಮುಗಿದು 14ರಿಂದ 15 ತಿಂಗಳು ಆಗಿದೆ. ಈಗ ಮೀಸಲಾತಿ ನಿಗದಿಪಡಿಸಲಾಗಿದೆ. ಅದರಂತೆ 2ನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ 30 ತಿಂಗಳ ಬದಲು ಕೇವಲ 15ರಿಂದ 16 ತಿಂಗಳು ಮಾತ್ರ ಅಧಿಕಾರ ಭಾಗ್ಯ ಸಿಗಲಿದೆ. ಏಕೆಂದರೆ 2019ರಲ್ಲಿ ಚುನಾವಣೆ ನಡೆದು 2020ರಲ್ಲಿ ಮೊದಲ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದ 180ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಅವಧಿ 2025ರ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಹಾಗಾಗಿ ತಮ್ಮದಲ್ಲದ ತಪ್ಪಿಗೆ 1 ಮಹಾನಗರ ಪಾಲಿಕೆ, 45ಕ್ಕೂ ಹೆಚ್ಚು ನಗರಸಭೆ, 90ಕ್ಕೂ ಅಧಿಕ ಪುರಸಭೆ ಹಾಗೂ 46ಕ್ಕೂ ಹೆಚ್ಚು ಪಟ್ಟಣ ಪಂಚಾಯತ್‌ಗಳು ಸೇರಿ ರಾಜ್ಯದ ಒಟ್ಟು 186ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷರು 2ನೇ ಅವಧಿಯ 30 ತಿಂಗಳ ಅಧಿಕಾರದಿಂದ ಅವಕಾಶ ವಂಚಿತರಾಗಲಿದ್ದಾರೆ.

1 ವರ್ಷಕ್ಕೂ ಅಧಿಕ ಕಾಲದಿಂದ ನನೆಗುದಿಗೆ ಬಿದ್ದಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ 2ನೇ ಅವಧಿಗೆ ಮೀಸಲಾತಿಯನ್ನು ರಾಜ್ಯ ಸರಕಾರ ಆಗಸ್ಟ್‌ 5ರಂದು ಪ್ರಕಟಿಸಿದೆ. ಚುನಾವಣೆಗೆ ದಿನಾಂಕ ನಿಗದಿಪಡಿಸಿಲ್ಲ. ಚುನಾವಣೆ ಯಾವಾಗ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರಕಾರಕ್ಕೆ ಹೈಕೋರ್ಟ್‌ ಹೇಳಿದೆ.

ವಿಳಂಬಕ್ಕೆ ಕಾರಣ?
ಒಟ್ಟು 5 ವರ್ಷದ ಅವಧಿಯಲ್ಲಿ ಮೊದಲ 30 ತಿಂಗಳ ಅಧ್ಯಕ್ಷ-ಉಪಾಧ್ಯಕ್ಷ ಕಾರ್ಯಾವಧಿ ಮುಗಿದ ಬಳಿಕ ಎರಡನೇ ಅವಧಿಯ 30 ತಿಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಬೇಕಿತ್ತು. ಮೀಸಲಾತಿ ವಿಚಾರ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದ್ದ ಕಾರಣ ಮೀಸಲಾತಿ ನಿಗದಿ ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನ್ಯಾ| ಭಕ್ತವತ್ಸಲ ಆಯೋಗ ರಚಿಸಿತ್ತು. ಅದರ ವರದಿ ಸಲ್ಲಿಕೆಯಾಗಬೇಕಾದ ಹಿನ್ನೆಲೆಯಲ್ಲಿ ಮೀಸಲಾತಿ ಮತ್ತೆ ನನೆಗುದಿಗೆ ಬಿದ್ದಿತ್ತು.

ಅಧಿಕಾರ ಖೋತಾ ಹೇಗೆ?
ಒಟ್ಟು 5 ವರ್ಷದ ಅವಧಿಯಲ್ಲಿ ಅಧಿಕಾರ ಹಂಚಿಕೆ ಸೂತ್ರದಡಿ ತಲಾ 30 ತಿಂಗಳುಗಳಿಗೆ 2 ಅವಧಿಗೆ ಮೀಸಲಾತಿ ನಿಗದಿಪಡಿಸಲಾಗುತ್ತದೆ. ಅದರಂತೆ 2ನೇ ಅವಧಿಗೆ ಕರ್ನಾಟಕ ಪೌರನಿಗಮಗಳ ಕಾಯ್ದೆ-1964ರ ಸೆಕ್ಷನ್‌ 42 ಹಾಗೂ ಕರ್ನಾಟಕ ಪೌರನಿಗಮಗಳ (ಅಧ್ಯಕ್ಷ-ಉಪಾಧ್ಯಕ್ಷ) ಚುನಾವಣೆ (ತಿದ್ದುಪಡಿ) ನಿಯಮಗಳು-2024ರ ನಿಯಮ 13-ಎ ಮತ್ತು 13ರಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.

ಪೌರ ನಿಗಮಗಳ ಕಾಯ್ದೆ-1964ರ ಸೆಕ್ಷನ್‌ 42ರ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿಯು ಚುನಾವಣೆ ನಡೆದ ಅನಂತರ ಪ್ರಥಮ ಸಭೆ ನಡೆದ ದಿನಾಂಕದಿಂದ 5 ವರ್ಷಗಳಾಗಿರುತ್ತದೆ. ಅದರಂತೆ ಚುನಾಯಿತ ಸದಸ್ಯರ ಮೊದಲ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ 30 ತಿಂಗಳ ಅಧಿಕಾರವಧಿ ಕಳೆದ ವರ್ಷ ಎಪ್ರಿಲ್‌-ಮೇಯಲ್ಲಿ ಮುಗಿದಿದ್ದರೂ ಮೀಸಲಾತಿ ಗೊಂದಲದ ಕಾರಣಕ್ಕೆ 2ನೇ ಅವಧಿಗೆ 30 ತಿಂಗಳಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗಿರಲಿಲ್ಲ.

ಈಗಾಗಲೇ ಮೊದಲ ಅವಧಿ ವಿಸ್ತರಿಸಲು ಅವಕಾಶವಿರುವುದಿಲ್ಲ. ಹಾಗಾಗಿ 2020ರ ಅಕ್ಟೋಬರ್‌-ನವೆಂಬರ್‌ನಲ್ಲಿ ಚುನಾವಣೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಅವಧಿ 2025ರ ಅಕ್ಟೋಬರ್‌- ನವೆಂಬರ್‌ನಲ್ಲಿ 5 ವರ್ಷ ಪೂರ್ಣಗೊಳ್ಳುತ್ತದೆ. 2ನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷ ರಾದವರು ಅಲ್ಲಿವರೆಗೆ ಮಾತ್ರ ಅಧಿಕಾರ ಹೊಂದಿರುತ್ತಾರೆ.

– ರಫೀಕ್‌ ಅಹ್ಮದ್‌ 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.