![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 26, 2021, 10:35 PM IST
ನಾಗಪುರ: ಮಹಾರಾಷ್ಟ್ರದ ವಿರೋಧಪಕ್ಷದ ನಾಯಕನಾಗಿರುವ, ಮಾಜಿ ಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವೀಸ್; ಮಹತ್ವದ ರಾಜಕೀಯ ದಾಳವೊಂದನ್ನು ಉರುಳಿಸಿದ್ದಾರೆ.
ಮಹಾರಾಷ್ಟ್ರದ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸ್ಥಳೀಯಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ಸಿಗುವವರೆಗೆ ಹೋರಾಡುತ್ತೇನೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಒಬಿಸಿಗೆ ಮೀಸಲಾತಿ ಜಾರಿ ಮಾಡಲಾಗುತ್ತದೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆಂದು ಫಡ್ನವೀಸ್ ಹೇಳಿದ್ದಾರೆ!
ಈ ವಿಷಯಕ್ಕೆ ಸಂಬಂಧಿಸಿದಂತೆ ಅವರ ನೇತೃತ್ವದಲ್ಲಿ ಶನಿವಾರ ನಾಗ್ಪುರ ವೆರೈಟಿ ಸ್ಕ್ವೇರ್ನಲ್ಲಿ ರಸ್ತೆ ತಡೆ ನಡೆದಿದೆ. ಹಾಗೆಯೇ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ಎಂವಿಎ ಸರ್ಕಾರ ಕೇಂದ್ರದತ್ತ ಬೆರಳು ತೋರಿಸುತ್ತಿದೆ. ಇದು ಪಕ್ಕಾ ಸುಳ್ಳು, ಈ ವಿಷಯವನ್ನು ಕಾನೂನು ಜಾರಿ ಮಾಡುವುದರ ಮೂಲಕ ರಾಜ್ಯದಲ್ಲೇ ನಿರ್ಧರಿಸಬಹುದು. ಅದನ್ನು ಮಾಡದಿರುವುದಕ್ಕೇ ಮಹಾರಾಷ್ಟ್ರವೊಂದನ್ನು ಹೊರತುಪಡಿಸಿ, ಉಳಿದೆಲ್ಲ ರಾಜ್ಯಗಳಲ್ಲಿ ಒಬಿಸಿ ಮೀಸಲು ಇದೆ ಎಂದಿದ್ದಾರೆ.
ಇದನ್ನೂ ಓದಿ :ತಮಿಳುನಾಡಿನ 21 ಜಿಲ್ಲೆಗಳಲ್ಲಿ 100 ರೂ. ದಾಟಿದೆ ಪೆಟ್ರೋಲ್ ದರ
ಒಬಿಸಿ ಮೀಸಲು ವಿಚಾರ ಸಂಬಂಧ ಚಕ್ಕಾ ಜಾಮ್ ನಡೆಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಫಡ್ನವೀಸ್ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.