70ಕಿಲೋ ಮೀಟರ್ ಪ್ರಯಾಣ,512 ಕೆಜಿ ಈರುಳ್ಳಿ ಮಾರಾಟ ಮಾಡಿದ ರೈತನಿಗೆ ಸಿಕ್ಕಿದ್ದೆಷ್ಟು ಗೊತ್ತಾ?

ಏನಿದು ಎಪಿಎಂಸಿ ಲೆಕ್ಕಾಚಾರ

Team Udayavani, Feb 24, 2023, 12:33 PM IST

70ಕಿಲೋ ಮೀಟರ್ ಪ್ರಯಾಣ,512 ಕೆಜಿ ಈರುಳ್ಳಿ ಮಾರಾಟ ಮಾಡಿದ ರೈತನಿಗೆ ಸಿಕ್ಕಿದ್ದೆಷ್ಟು ಗೊತ್ತಾ?

ಕೊಲ್ಹಾಪುರ: ಸೋಲಾಪುರ ಜಿಲ್ಲೆಯ ಬಾರ್ಶಿ ತಾಲೂಕಿನ ಬೋರಗಾಂವ್ ಗ್ರಾಮದ ಈರುಳ್ಳಿ ಕೃಷಿಕ ರಾಜೇಂದ್ರ ತುಕಾರಾಂ ಚವಾಣ್ (58ವರ್ಷ) ಎಂಬವರು ಇತ್ತೀಚೆಗೆ ತಾವು ಬೆಳೆದ 512ಕೆಜಿ ಈರುಳ್ಳಿಯನ್ನು 70 ಕಿಲೋ ಮೀಟರ್ ದೂರದ ಸೋಲಾಪುರ ಎಪಿಎಂಸಿಯಲ್ಲಿ ಹರಾಜು ಹಾಕಿದ್ದರು. ಆದರೆ ಅವರು ತಾವು ಬೆಳೆದ ಈರುಳ್ಳಿಯನ್ನು ಪ್ರತಿ ಕೇಜಿಗೆ ಕೇವಲ 1 ರೂಪಾಯಿಗೆ ಮಾರಾಟ ಮಾಡಲು ಸಾಧ್ಯವಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ನಿಧನ

ಬರೋಬ್ಬರಿ 70 ಕಿಲೋ ಮೀಟರ್ ಪ್ರಯಾಣಿಸಿ ಸೋಲಾಪುರ ಎಪಿಎಂಸಿಯಲ್ಲಿ ಈರುಳ್ಳಿಯನ್ನು ಹರಾಜು ಹಾಕಿದ್ದ ಚವಾಣ್ ಅವರಿಗೆ ಕೊನೆಗೆ ಲಾಭವಾಗಿದ್ದು ಕೇವಲ 2.49 ಪೈಸೆ. ಈ ಹರಾಜುಗೊಂಡ ಈರುಳ್ಳಿಗೆ ಸಿಕ್ಕ 2 ರೂಪಾಯಿ ಪೋಸ್ಟ್ ಡೇಟೆಡ್ ಚೆಕ್ ಅನ್ನು ಚವಾಣ್ ಪಡೆದಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬ್ಯಾಂಕ್ ವಹಿವಾಟಿನಲ್ಲಿ ಚೆಕ್ ಗಳಲ್ಲಿ ಪೈಸೆಗಳನ್ನು ಪರಿಗಣಿಸುವುದಿಲ್ಲವಾಗಿದ್ದರಿಂದ 49ಪೈಸೆ ಬಿಟ್ಟು, ಕೇವಲ 2 ರೂಪಾಯಿಯ ಚೆಕ್ ಅನ್ನು ಎಪಿಎಂಸಿ ಚವಾಣ್ ಅವರಿಗೆ ಕಳುಹಿಸಿದೆ. ತಾನು ಬೆಳೆದ ಈರುಳ್ಳಿಯನ್ನು ನೇರವಾಗಿ ವ್ಯಾಪಾರಿಗಳಿಗೆ ನೀಡಿದ್ದರೆ ಸ್ವಲ್ಪವಾದರೂ ಲಾಭವಾಗುತ್ತಿತ್ತು. ಆದರೆ ಇಷ್ಟೊಂದು ಶ್ರಮಪಟ್ಟು ಬೆಳೆದ ಬೆಳೆಗೆ ನಮಗೇನೂ ಸಿಕ್ಕಂತಾಗಿದೆ ಎಂದು ಚವಾಣ್ ಪ್ರತಿಕ್ರಿಯಿಸಿರುವುದಾಗಿ ವರದಿ ವಿವರಿಸಿದೆ.

ಏನಿದು ಎಪಿಎಂಸಿ ಲೆಕ್ಕಾಚಾರ?

ಚವಾಣ್ ಅವರು ಪ್ರತಿ ಕೇಜಿ ಈರುಳ್ಳಿಗೆ ಒಂದು ರೂಪಾಯಿಯಂತೆ ಹಣ ಪಡೆದಿದ್ದರು. ಒಟ್ಟು 512ಕೆಜಿ ಈರುಳ್ಳಿಗೆ ಎಪಿಎಂಸಿ 512 ರೂ. ಲೆಕ್ಕಹಾಕಿತ್ತು. ನಂತರ ಸಾರಿಗೆ ಮತ್ತು ತೂಕದ ಶುಲ್ಕ ಸೇರಿ ಒಟ್ಟು ಮೊತ್ತದಲ್ಲಿ 509.50 ಪೈಸೆಯನ್ನು ಕಡಿತಗೊಳಿಸಿ, ಕೊನೆಗೆ 2ರೂಪಾಯಿ ಚೆಕ್ ಅನ್ನು ಕಳುಹಿಸಿಕೊಟ್ಟಿತ್ತು.

ಕಳೆದ 3-4 ವರ್ಷಗಳಿಂದ ರಸಗೊಬ್ಬರ ಮತ್ತು ಕೀಟನಾಶಕಗಳ ಬೆಲೆ ದುಬಾರಿಯಾಗಿದೆ. 500 ಕೇಜಿ ಈರುಳ್ಳಿ ಬೆಳೆಯಲು ಸುಮಾರು 40 ಸಾವಿರ ರೂಪಾಯಿ ಖರ್ಚು ಮಾಡಿರುವುದಾಗಿ ಚವಾಣ್ ಅಳಲು ತೋಡಿಕೊಂಡಿದ್ದಾರೆ.

ಎಪಿಎಂಸಿ ಟ್ರೇಡರ್ ವಾದವೇನು?

ಈರುಳ್ಳಿ ಬೆಳೆಗಾರ ಚವಾಣ್ ಅವರಿಗೆ 2 ರೂಪಾಯಿಗೆ ಪೋಸ್ಟ್ ಡೇಟೆಡ್ ಚೆಕ್ ನೀಡಿರುವ ಬಗ್ಗೆ ಸೋಲಾಪುರ್ ಎಪಿಎಂಸಿ ಟ್ರೇಡರ್ ನಾಸಿರ್ ಖಲೀಫಾ ಪ್ರತಿಕ್ರಿಯೆ ನೀಡಿದ್ದು, ನಾವು ಕಂಪ್ಯೂಟರ್ ಪ್ರಕ್ರಿಯೆಯ ಮೂಲಕ ಚೆಕ್ಸ್ ಮತ್ತು ಬಿಲ್ ಅನ್ನು ನೀಡುತ್ತೇವೆ. ಅದೇ ರೀತಿ ಚವಾಣ್ ಅವರಿಗೂ ಪೋಸ್ಟ್ ಡೇಟೆಡ್ ಚೆಕ್ ನೀಡಿದ್ದೇವೆ. ಈ ಹಿಂದೆಯೂ ನಾವು ತುಂಬಾ ಕಡಿಮೆ ಮೊತ್ತದ ಚೆಕ್ ಅನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ತುಂಬಾ ಕಡಿಮೆ ಗುಣಮಟ್ಟದ ಈರುಳ್ಳಿಯನ್ನು ಹರಾಜು ಹಾಕಲು ತರುತ್ತಾರೆ. ಈ ಮೊದಲು ಚವಾಣ್ ಅವರು ಉತ್ತಮ ಗುಣಮಟ್ಟದ ಈರುಳ್ಳಿಯನ್ನು ತಂದಿದ್ದು, ಪ್ರತಿ ಕೇಜಿಗೆ 18 ರೂಪಾಯಿಯಂತೆ ಮಾರಾಟ ಮಾಡಿದ್ದರು. ಕಡಿಮೆ ಗುಣಮಟ್ಟದ ಈರುಳ್ಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲ ಎಂದು ಖಲೀಫಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.