Pakistan: ಕುರಾನ್ ಗ್ರಂಥಕ್ಕೆ ಅಪಮಾನ: ವ್ಯಕ್ತಿಯ ಜೀವಂತ ದಹನ, ಪೊಲೀಸ್ ಠಾಣೆಗೆ ಬೆಂಕಿ
Team Udayavani, Jun 21, 2024, 12:14 PM IST
ಇಸ್ಲಾಮಾಬಾದ್: ಪವಿತ್ರ ಕುರಾನ್ ಗ್ರಂಥಕ್ಕೆ ಬೆಂಕಿ ಹಚ್ಚಿದ್ದರಿಂದ ಆಕ್ರೋಶಗೊಂಡ ಜನರ ಗುಂಪು ವ್ಯಕ್ತಿಯೊಬ್ಬನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಈಶಾನ್ಯ ಪಾಕಿಸ್ತಾನದ ಖೈಬರ್ ಪಖ್ತುನ್ ಖಾವಾದ ಸ್ವಾತ್ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Raichur; ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್
ಜನ ರೊಚ್ಚಿಗೆದ್ದು, ಹಿಂಸಾಚಾರ ನಡೆಸಿದ ಪರಿಣಾಮ ಸುಮಾರು ಎಂಟು ಮಂದಿ ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್ ನ ಸಿಯಾಲ್ ಕೋಟ್ ನ ವ್ಯಕ್ತಿ ಗುರುವಾರ ರಾತ್ರಿ ಕುರಾನ್ ಗ್ರಂಥದ ಕೆಲವು ಪುಟಗಳಿಗೆ ಬೆಂಕಿ ಹಚ್ಚಿರುವುದಾಗಿ ಪೊಲೀಸ್ ಅಧಿಕಾರಿ ಝಾಹಿದುಲ್ಲಾ ಮಾಹಿತಿ ನೀಡಿದ್ದಾರೆ.
ಪೊಲೀಸ್ ಠಾಣೆಗೆ ಬೆಂಕಿ:
ಕುರಾನ್ ಗೆ ಬೆಂಕಿ ಹಚ್ಚಿದ ಆರೋಪದಡಿ ವ್ಯಕ್ತಿಯನ್ನು ಬಂಧಿಸಿ ಪೊಲೀಸರು ಠಾಣೆಗೆ ಕರೆದೊಯ್ದಿದ್ದರು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಜನರ ಗುಂಪು ಠಾಣೆ ಮೇಲೆ ದಾಳಿ ನಡೆಸಿ, ಆರೋಪಿಯನ್ನು ಹೊರಗೆ ಎಳೆದೊಯ್ದಿದ್ದರು. ನಂತರ ಠಾಣೆಗೆ ಬೆಂಕಿ ಹಚ್ಚಿ, ಆರೋಪಿಗೂ ಬೆಂಕಿ ಹಚ್ಚಿ ಕೊಂದಿರುವುದಾಗಿ ವರದಿ ವಿವರಿಸಿದೆ.
ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
US Election; ಬೈಡೆನ್ ಬದಲಿಗೆ ಮಿಶೆಲ್ ಅಧ್ಯಕ್ಷೀಯ ಅಭ್ಯರ್ಥಿ?
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ
Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್ ಪ್ರತಿಮೆ!
MUST WATCH
ಹೊಸ ಸೇರ್ಪಡೆ
Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.