![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 20, 2021, 8:52 PM IST
ಚಿಕ್ಕೋಡಿ/ಮಂಡ್ಯ: ಅಪ್ಪಂದಿರ ದಿನದಂದೇ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡರೆ, ಮತ್ತೂಂದು ಪ್ರಕರಣದಲ್ಲಿ ಮಗಳ ಆತ್ಮಹತ್ಯೆಯಿಂದ ಮನನೊಂದ ತಂದೆ ಆಘಾತದಿಂದ ಸಾವನ್ನಪ್ಪಿದ್ದಾರೆ.
ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಕಾಡಪ್ಪ ಪ್ರಧಾನಿ ರಂಗಾಪೂರೆ(48), ಹೆಣ್ಣುಮಕ್ಕಳಾದ ಕೀರ್ತಿ (18), ಸ್ಫೂರ್ತಿ (16) ಜತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾರದ ಹಿಂದೆ ಚೆನ್ನವ್ವ ಕಾಡಪ್ಪ ರಂಗಾಪೂರೆ ಹೃದಯಘಾತದಿಂದ ಮೃತಪಟ್ಟಿದ್ದರು. ಪತ್ನಿ ಸಾವಿಗೆ ಮನನೊಂದು ಪತಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್ನಲ್ಲಿ ಔಷಧ ರವಾನೆ
ಮಗಳ ಅಗಲಿಕೆ; ಆಘಾತಕ್ಕೊಳಗಾಗಿ ಸಾವು
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ಬಾಂಧವ್ಯ(17)ಆತ್ಮಹತ್ಯೆಯಿಂದ ಮನನೊಂದಿದ್ದ ಆಕೆಯ ತಂದೆ ರಾಜು (65) ಆಘಾತಕ್ಕೊಳಗಾಗಿ ಲೋ ಬಿಪಿಯಿಂದ ಸಾವನ್ನಪ್ಪಿದ್ದಾರೆ. ಆನ್ಲೈನ್ ತರಗತಿಗಳಿಂದ ಖನ್ನತೆಗೆ ಒಳಗಾಗಿದ್ದ ಬಾಂಧವ್ಯ, ವಿದ್ಯಾಭ್ಯಾಸ ಕುಂಠಿತವಾಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದು ಬಂದಿದೆ. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.92 ಅಂಕ ಪಡೆದಿದ್ದಳು. ನಂತರ ಬನ್ನೂರು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಮಧ್ಯರಾತ್ರಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.