Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ

Team Udayavani, Apr 23, 2024, 12:13 PM IST

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಉದಯವಾಣಿ ಸಮಾಚಾರ
ಮಂಡ್ಯ: ಲೋಕಸಭಾ ಚುನಾವಣೆಯ ಕಾವು ಜಿಲ್ಲೆಯಲ್ಲಿ ಜೋರಾಗಿದ್ದು, ಮಂಡ್ಯದಲ್ಲಿ ಪಾರುಪತ್ಯ ಸಾಧಿಸಲು ಸಾಂಪ್ರದಾಯಿಕ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟಿದ್ದು, ಮೈತ್ರಿ, ಗ್ಯಾರಂಟಿ, ಜಾತಿ ಲೆಕ್ಕಾಚಾರಗಳು ನಡೆಯುತ್ತಿವೆ. ದಿಲ್ಲಿಯಲ್ಲೂ ಸದ್ದು ಮಾಡುವ ರಾಜಕಾರಣ ಜಿಲ್ಲೆಯಲ್ಲಿ ಹಾಸು ಹೊಕ್ಕಾಗಿದೆ. ಪ್ರತಿ ಗ್ರಾಮದಲ್ಲೂ ರಾಜಕಾರಣದ್ದೇ ಚರ್ಚೆ. ಒಂದೆಡೆ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಮಾಜಿ ಸಿಎಂ ಆಗಿದ್ದು, ರಾಜಕೀಯ ಅನುಭವ ಹೊಂದಿದ್ದಾರೆ. ಆದರೂ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು)
ಹೊಸಬರಾಗಿದ್ದರೂ, ಅನುಭವಿ ರಾಜಕಾರಣಿ, ಸಚಿವ ಚಲುವರಾಯಸ್ವಾಮಿಯ ಕೃಪಕಟಾಕ್ಷ ಇದೆ.

ಇದುವರೆಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 13 ಬಾರಿ ಕಾಂಗ್ರೆಸ್‌ ಗೆದ್ದಿದ್ದರೆ, ಒಂದು ಬಾರಿ ಪ್ರಜಾ ಸೋಷ್ಯಲಿಸ್ಟ್‌ ಪಕ್ಷ, 5 ಬಾರಿ ಜೆಡಿಎಸ್‌ ಹಾಗೂ ಒಂದು ಬಾರಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮೊದಲು ಕ್ಷೇತ್ರವನ್ನು ಆಳಿದ್ದು, ಕಾಂಗ್ರೆಸ್‌ ಪಕ್ಷ. ನಂತರ ನಿಧಾನವಾಗಿ ಜೆಡಿಎಸ್‌ ತೆಕ್ಕೆಗೆ ಜಾರಿದ್ದು, ಸಾಂಪ್ರದಾಯಿಕ ಎದುರಾಳಿಗಳಾಗಿ ಗುರುತಿಸಿಕೊಂಡಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಹಾವು-ಏಣಿ ಆಟ ನಡೆಯುತ್ತಲೇ ಇದೆ. ಇದರ ನಡುವೆ ಸಿನಿಮಾದವರು ಮಂಡ್ಯ ಆಳಿದ್ದಾರೆ. ಕಳೆದ ಬಾರಿ ಸಂಸದೆ ಸುಮಲತಾ ಅಂಬರೀಷ್‌ ಪಕ್ಷೇತರವಾಗಿ ಗೆದ್ದಿದ್ದು ಇತಿಹಾಸ.

2019ರ ಲೋಕಸಭಾ ಚುನಾವಣೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಶಾಸಕರಿದ್ದರು. ಅಲ್ಲದೇ, ಆ ಚುನಾವಣೆಯಲ್ಲಿಯೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಾಗಿದ್ದರೂ ಗೆಲುವು ಸಿಕ್ಕಿರಲಿಲ್ಲ. ಈ ಬಾರಿ ಲೋಕಸಭಾ ವ್ಯಾಪ್ತಿಯ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಉಳಿದಂತೆ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕ ಇದ್ದಾರೆ. ಈಗಲೂ ಸಹ ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿರುವುದು ಕಳೆದ ಚುನಾವಣೆಯಂತೆ ಭಾಸವಾಗಿದೆ.

ಕಳೆದ ಬಾರಿ ದಳ-ಕೈ ಮೈತ್ರಿ ಅಭ್ಯರ್ಥಿ ಸೋಲಿಸಲು ಸುಮಲತಾಗೆ ಬಿಜೆಪಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜಿಲ್ಲೆಯ ಕೈ ನಾಯಕರು ಕೂಡ ಬೆಂಬಲ ಸೂಚಿಸಿದ್ದರು. ಇದರಿಂದ ಸುಮಲತಾ ಗೆಲುವು ಸುಲಭವಾಗಿತ್ತು. ಇದೀಗ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದು ಜಿಲ್ಲೆಯ ಜನರಲ್ಲಿ ಕುತೂಹಲ ಹೆಚ್ಚಿಸಿದೆ. ಕಳೆದ ಬಾರಿಯ ಚಿತ್ರಣ ಬದಲಾಗಲಿದೆಯೇ ಎಂಬ ಚರ್ಚೆಗಳು ನಡೆಯುತ್ತಿವೆ. ಜೊತೆಗೆ ಕಳೆದೆರಡು ಚುನಾವಣೆಗಳಿಂದ ಬಿಜೆಪಿ ಸ್ಪರ್ಧಿಸಿಯೇ ಇಲ್ಲ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪ ರ್ಧಿಸಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಕಣಕ್ಕಿಳಿದಿದ್ದಾರೆ.

ಕ್ಷೇತ್ರಕ್ಕೆ ಇಬ್ಬರ ಸ್ಪರ್ಧೆಯೂ ಹೊಸದಾಗಿದ್ದರೂ ಕುಮಾರಸ್ವಾಮಿ ಮಾಜಿ ಸಿಎಂ ಎಂಬ ಹಿನ್ನೆಲೆ ಇದೆ. ತನ್ನದೇ ಆದ ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆಯೂ ಇದೆ ಎಂದು ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೆ, ಮೈತ್ರಿ ಸಹಕಾರಿಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಜೊತೆಗೆ ಕಳೆದ ಬಾರಿಯ ಪುತ್ರನ ಸೋಲಿನ ಅನುಕಂಪ, ಆರೋಗ್ಯ ಸೇರಿದಂತೆ ಭಾವನಾತ್ಮಕವಾಗಿ ಮತದಾರರ ಸೆಳೆಯಲು ಮುಂದಾಗಿದ್ದಾರೆ.

ಗೆದ್ದರೆ ಕಾವೇರಿ ಸಮಸ್ಯೆ ನಿವಾರಿಸುವ ಭರವಸೆ ನೀಡುತ್ತಿದ್ದಾರೆ. ಇತ್ತ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ತಾನು ಸ್ಥಳೀಯ ವ್ಯಕ್ತಿ ಎಂಬ ಹಿನ್ನೆಲೆಯಲ್ಲಿ ಕಣಕ್ಕಿಳಿದಿದ್ದಾರೆ. ವೈಯಕ್ತಿಕ ವರ್ಚಸ್ಸು ಕಡಿಮೆ ಇದ್ದರೂ ಶಾಸಕರು, ವಿಧಾನ ಪರಿಷತ್‌ ಸದಸ್ಯರು ತಮ್ಮ ಬೆನ್ನೆಲುಬಾಗಿ ನಿಂತಿರುವುದು ಬಲ ತಂದಿದೆ. ಜಿಲ್ಲೆಯಲ್ಲಿ 7 ಮಂದಿ ಕಾಂಗ್ರೆಸ್‌ ಶಾಸಕರು, ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇರುವುದು ಆತ್ಮವಿಶ್ವಾಸ ಹೆಚ್ಚಿಸಿದೆ. ಚುನಾವಣೆ ಗೆದ್ದರೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ. ಏಳು ಶಾಸಕರ ಬೆಂಬಲದೊಂದಿಗೆ ಅಭಿವೃದ್ಧಿಗೆ ಸಹಕಾರ ಸಿಗಲಿದೆ ಎಂಬ ಹಿನ್ನೆಲೆಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಜಾತಿ ಲೆಕ್ಕಾಚಾರವೂ ಪ್ರಮುಖ ಪಾತ್ರ: ಪ್ರತೀ ಚುನಾವಣೆ ಯಲ್ಲಿಯೂ ಜಾತಿ ಲೆಕ್ಕಾಚಾರ ಪ್ರಮುಖ ವಿಷಯವಾಗಿ ಚರ್ಚೆಯಾಗುತ್ತಲೇ ಇರುತ್ತದೆ. ಮಂಡ್ಯ ಎಂದರೆ ಒಕ್ಕಲಿಗರ ಸಮುದಾಯ ಹೆಚ್ಚಿರುವ ಜಿಲ್ಲೆಯಾಗಿದೆ. ಮೈತ್ರಿ ಅಭ್ಯರ್ಥಿ ಒಕ್ಕಲಿಗ ಸಮುದಾಯದ ಮತಗಳು ಕೈ ಹಿಡಿಯಬ ಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದರೆ, ಕಾಂಗ್ರೆಸ್‌ಗೆ ಅಹಿಂದ ಮತಗಳು ಬಲ ನೀಡಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಒಕ್ಕಲಿಗ ಮತದಾರರಿದ್ದರೆ, 9 ಲಕ್ಷಕ್ಕೂ ಹೆಚ್ಚು ಅಹಿಂದ ಮತದಾರರಿದ್ದಾರೆ. ಮೈತ್ರಿ ಪಕ್ಷ ಹಾಗೂ ಕಾಂಗ್ರೆಸ್‌ ಕೂಡ ಜಾತಿ ಲೆಕ್ಕಾಚಾರದಲ್ಲಿ ತೊಡಗಿದೆ. ಒಕ್ಕಲಿಗರ ಮತದಾರರು ಮೊದಲ ಸ್ಥಾನದಲ್ಲಿದ್ದರೆ, 2ನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ನಂತರ ಕುರುಬ, ಲಿಂಗಾಯತ, ಮುಸ್ಲಿಂ ಸೇರಿದಂತೆ ಇತರೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಆಧಾರದ ಮೇಲೆಯೇ ಇಬ್ಬರೂ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

*ಎಚ್‌.ಶಿವರಾಜು

ಟಾಪ್ ನ್ಯೂಸ್

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

bajrang punia

ನಾಡಾ ನನ್ನನ್ನು ಗುರಿಯಾಗಿಸಿ  ದಾಳಿ ಮಾಡುತ್ತಿದೆ: ಬಜರಂಗ್‌

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.