Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
ದೇಗುಲಗಳು ಸರಕಾರದ ವಶದಿಂದ ಮುಕ್ತವಾಗಿ, ಸ್ವಂತ ಗೋಶಾಲೆ ಹೊಂದುವಂತಾಗಬೇಕಿದೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
Team Udayavani, Oct 6, 2024, 5:09 PM IST
ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಪ್ರಾಚೀನ ದೇವಾಲಯಗಳು ಸೇರಿದಂತೆ ಹಲವು ದೇವಾಲಯಗಳು ಇನ್ನೂ ಸರಕಾರದ ವಶದಲ್ಲಿ ಇರಿಸಿಕೊಂಡಿರುವುದರಿಂದ ಹಿಂದೂಗಳ ನಂಬಿಕೆಗೆ ಧಕ್ಕೆ ಉಂಟು ಮಾಡುವ ಕೆಲಸಗಳಾಗುತ್ತಿವೆ. ಆದ್ದರಿಂದ ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯಲ್ಲಿ ಎಲ್ಲ ದೇವಾಲಯಗಳಿಗೂ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ವಶದಲ್ಲಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಸೂಚನೆ ನೀಡಿದ್ದರೂ ದೇವಸ್ಥಾನಗಳು ಸರಕಾರ ವಶದಲ್ಲಿರುವುದರಿಂದಲೇ ನಮ್ಮ ಶ್ರದ್ಧಾ ಕೇಂದ್ರಗಳಿಗೆ ಅಪಚಾರಗಳು ಉಂಟಾಗುತ್ತಿವೆ. ನ್ಯಾಯಾಲಯದ ತೀರ್ಪಿನಂತೆ ಹಿಂದೂ ದೇವಾಲಯಗಳನ್ನು ಸರಕಾರವು ಸಮಾಜದ ವಶಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ತಿರುಪತಿ ಲಡ್ಡು ಅಪವಿತ್ರವಾಗದಂತೆ ಸರಕಾರ ನಿಗಾ ವಹಿಸಬೇಕಿತ್ತು:
ತಿರುಪತಿ-ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ಜಾಗೃತ ಕೇಂದ್ರಗಳಾದಾಗ ಮಾತ್ರ ಹಿಂದೂಗಳ ನಂಬಿಕೆ, ನಡವಳಿಕೆಯ ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.