Mangaluru: ಹರೇಕಳ ಸೇತುವೆ ಜಲಾವೃತ, ಕಾಸರಗೋಡಿನಲ್ಲಿ ಗಾಳಿ, ಮಳೆ ಮನೆಗಳಿಗೆ ಹಾನಿ
Team Udayavani, Jul 31, 2024, 12:55 AM IST
ಉಳ್ಳಾಲ: ಅಡ್ಯಾರಿನಿಂದ ಹರೇ ಕಳವನ್ನು ಸಂಪರ್ಕಿಸುವ ಹರೇಕಳ ಸೇತುವೆ ಅಡ್ಯಾರು ಬಳಿ ಜಲಾ ವೃತಗೊಂಡಿದ್ದು, ವಾಹನ
ಸಂಚಾರ ಸ್ಥಗಿತಗೊಂಡಿದೆ. ಈಗ ಜನ ಸುತ್ತುಬಳಸಿ ತೊಕ್ಕೊಟ್ಟು-ಕೊಣಾಜೆ ಮಾರ್ಗವಾಗಿ ತೆರಳಬೇಕಾಗಿದೆ. ಒಂದು ಕೀ.ಮೀ. ಬದಲು ಈಗ 25 ಕಿ.ಮೀ. ಕ್ರಮಿಸಬೇಕಾಗಿದೆ.
50 ಮನೆಗಳು ಜಲಾವೃತ:
ಉಳ್ಳಾಲ ವ್ಯಾಪ್ತಿಯ ನೇತ್ರಾವತಿ ನದಿ ತೀರದ ಎಲ್ಲ ತಗ್ಗು ಪ್ರದೇಶಗಳು ಮುಳುಗಡೆ, ಪಾವೂರು, ಹರೇಕಳ, ಮುನೂºರು, ಅಂಬ್ಲಿಮೊಗರು, ಉಳ್ಳಾಲ ನದಿ ತೀರ ಪ್ರದೇಶಗಳು ಮುಳುಗಡೆ ಸುಮಾರು 50ಕ್ಕೂ ಹೆಚ್ಚುಮನೆಗಳು ಜಲಾವೃತ. ಪಾವೂರು ವ್ಯಾಪ್ತಿಯಲ್ಲಿ 12 ಮನೆಗಳ ನಿವಾಸಿಗಳನ್ನು ಎನ್ಡಿಆರ್ಎಫ್ ತಂಡ ಆಗಮಿಸಿ ಸ್ಥಳಾಂತರಿಸಿದೆ.
ಕಾಸರಗೋಡು: ಗಾಳಿ, ಮಳೆ ಮನೆಗಳಿಗೆ ಹಾನಿ, ಕಡಲ್ಕೊರೆತ
ಕಾಸರಗೋಡು: ಜಿಲ್ಲೆಯಾದ್ಯಂತ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮಳೆ ಹಾಗೂ ಗಾಳಿಗೆ ಕುಂಬಳೆ ಬದ್ರಿಯಾ ನಗರ ನಡುಕುನ್ನಿನ ಇಬ್ರಾಹಿಂ ವಳವಿಲ್ ಅವರ ಮನೆ ಹಾನಿಗೀಡಾಗಿದೆ. ಈ ಸಂದರ್ಭ ಮನೆಯಲ್ಲಿದ್ದ ಇಬ್ರಾಹಿಂ ಅವರ ಪತ್ನಿ ಹಾಗೂ ಮಗು ಹೊರಗೆ ಓಡಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
ಪೆರ್ವಾಡ್ ಕಡಪುರದಲ್ಲಿ ತೆಂಗಿನ ಮರ ಬಿದ್ದು ಮರಿಯಮ್ಮ ಅವರ ಮನೆ ಹಾನಿಗೀಡಾಗಿದೆ. ಶಬ್ದ ಕೇಳಿ ಮನೆಯಿಂದ ಹೊರಗೆ ಓಡಿದ್ದರಿಂದ ಅಪಾಯದಿಂದ ಪಾರಾದರು. ಗಾಳಿ ಮಳೆಯಿಂದ ಜಿಲ್ಲೆಯ ವಿವಿಧೆಡೆ ಕಡಲ್ಕೊರೆತ ತೀವ್ರಗೊಂಡಿದೆ. ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಂಡು ಅಪಾಯದ ಸ್ಥಿತಿಯಲ್ಲಿದೆ. ಅಲ್ಲಲ್ಲಿ ವಾಹನ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.
ಮುಂದಿನ 48 ಗಂಟೆಗಳ ವರೆಗೆ ಭಾರೀ ಗಾಳಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಭೂಕುಸಿತ, ಮಣ್ಣು ಕುಸಿತ, ನೀರು ನಿಲ್ಲುವ ಪ್ರದೇಶಗಳಲ್ಲಿರುವವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕೆಂದು ಮುನ್ನೆಚ್ಚರಿಕೆ ನೀಡಿದೆ. ನದಿ ತಟಗಳ ಬದಿಯಲ್ಲಿ, ಅಣೆಕಟ್ಟು ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ವಾಸ್ತವ್ಯ ಸ್ಥಳಾಂತರಗೊಳ್ಳಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.