Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

ಪ್ರಿಯಕರನ ಜತೆ ಸೇರಿ 2.50 ಲ.ರೂ.ಗಳಿಗೆ ಸುಪಾರಿ ನೀಡಿದ್ದ ಮಹಿಳೆ

Team Udayavani, Jul 3, 2024, 7:30 AM IST

Court-Symbol

ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಘಟನೆ 2016ರಲ್ಲಿ ನಡೆದಿತ್ತು. ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್‌ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್‌ ಅಹಮ್ಮದ್‌ (38), ಉಳ್ಳಾಲದ ಅಬ್ದುಲ್‌ ಮುನಾಫ್ ಆಲಿಯಾಸ್‌ ಮುನ್ನ (41), ಉಳ್ಳಾಲದ ಅಬ್ದುಲ್‌ ರೆಹಮಾನ್‌ (36) ಮತ್ತು ಬೋಳಿಯಾರ್‌ನ ಶಬೀರ್‌ (31) ಶಿಕ್ಷೆಗೊಳಗಾದವರು.
ಅನೈತಿಕ ಸಂಬಂಧ ಕಾರಣ
ಇಸ್ಮಾಯಿಲ್‌ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್‌ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್‌ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು.
ಬಾಡಿಗೆ ನೆಪದಲ್ಲಿ ಕರೆದೊಯ್ದಿದ್ದರು
ಜಮೀಲ್‌ನ ಜತೆ ಸೇರಿ ಪತಿ ಇಸ್ಮಾಯಿಲ್‌ನನ್ನು ಕೊಲೆ ಮಾಡಲು ನೆಬಿಸಾ ಸಂಚು ರೂಪಿಸಿದ್ದಳು. ಜಮಾಲ್‌ ತನ್ನ ಸ್ನೇಹಿತ ಆಟೋರಿಕ್ಷಾ ಚಾಲಕ ಅಬ್ದುಲ್‌ ರೆಹಮಾನ್‌ ಜತೆ ಅಬ್ದುಲ್‌ ಮುನಾಫ್ ಬಳಿ ತೆರಳಿ 2.50 ಲ.ರೂ.ಗಳಿಗೆ ಕೊಲೆ ಸುಪಾರಿ ನೀಡಿದ್ದರು. ಇಸ್ಮಾಯಿಲ್‌ ಫ‌ರಂಗಿಪೇಟೆಯಲ್ಲಿ ಮೂರು ವಾಹನಗಳನ್ನು ಹೊಂದಿ ಬಾಡಿಗೆ ನಡೆಸುತ್ತಿದ್ದರು. ಆರೋಪಿಗಳು 2016ರ ಫೆ. 16ರಂದು ಸಂಜೆ ಇಸ್ಮಾಯಿಲ್‌ ಬಳಿ ಹೋಗಿ ಬೆಂಗಳೂರಿಗೆ ಬಾಡಿಗೆ ಇದೆ ಎಂದು ಕರೆದುಕೊಂಡು ಹೋಗಿದ್ದರು. ಅದರಂತೆ ಏಸ್‌ ವಾಹನದಲ್ಲಿ ತೆರಳಿದ್ದರು. ಇವರ ಜತೆ ಇನ್ನೋರ್ವ ಆರೋಪಿ ಚಾಲಕ ಶಬೀರ್‌ ಕೂಡ ಜತೆಯಾಗಿದ್ದ. ದಾರಿ ಮಧ್ಯೆ ನೆಲ್ಯಾಡಿ ಬಳಿ ಬಾರ್‌ನಲ್ಲಿ ಇಸ್ಮಾಯಿಲ್‌ಗೆ ಮದ್ಯ ಕುಡಿಸಿದ್ದರು. ಅನಂತರ ಮುಂದಕ್ಕೆ ಶಿರಾಡಿ ರಕ್ಷಿತಾರಣ್ಯದ ಕೆಂಪುಹೊಳೆ ತಲುಪಿದಾಗ ವಾಹನ ಕೆಟ್ಟು ಹೋಯಿತು. ಅಲ್ಲಿ ಆರೋಪಿಗಳು ಮತ್ತೆ ಇಸ್ಮಾಯಿಲ್‌ಅವರಿಗೆ ಮದ್ಯಪಾನ ಮಾಡಿಸಿದರು. ಕಾಡಿನಲ್ಲಿ ಯುವತಿಯೋರ್ವಳು ಇದ್ದಾಳೆ ಎಂದು ಆಮಿಷವೊಡ್ಡಿ ರಾತ್ರಿ 11.30ರ ಸುಮಾರಿಗೆ ಕಾಡಿನ ನಡುವೆ ಕರೆದುಕೊಂಡು ಹೋಗಿ ತಾವು ತಂದಿದ್ದ ಚೂರಿಯಿಂದ ಇಸ್ಮಾಯಿಲ್‌ ಅವರನ್ನು ಇರಿದು ಕೊಲೆ ಮಾಡಿದ್ದರು. ಮೃತದೇಹವನ್ನು ಅಲ್ಲಿಯೇ ತಗ್ಗಾದ ಸ್ಥಳದಲ್ಲಿಟ್ಟು ತರೆಗೆಲೆ, ಮಣ್ಣು ಹಾಕಿ ಮುಚ್ಚಿಟ್ಟಿದ್ದರು. ವಾಹನವನ್ನು ಮರಳಿ ಉಪ್ಪಿನಂಗಡಿ ಬಜತ್ತೂರಿನ ನೀರಕಟ್ಟೆಗೆ ತಂದು ನಿಲ್ಲಿಸಿದ್ದರು. ಇಸ್ಮಾಯಿಲ್‌ನ ಮೊಬೈಲ್‌ ಮತ್ತು ಬಟ್ಟೆಯನ್ನು ತಂದು ನೇತ್ರಾವತಿ ನದಿಗೆ ಎಸೆದಿದ್ದರು.
ಪತ್ನಿಯಿಂದ ನಾಪತ್ತೆ ದೂರು
ಒಂದೆಡೆ ಸುಪಾರಿಯ ಹಣವನ್ನು ನೀಡುವುದಕ್ಕಾಗಿ ಚಿನ್ನವನ್ನು ಗಿರವಿ ಇಟ್ಟ ನೆಬಿಸಾ, ಇನ್ನೊಂದೆಡೆ ಪತಿ ಇಸ್ಮಾಯಿಲ್‌ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದಳು.
ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ ಪರವಾಗಿ ಆರಂಭದಲ್ಲಿ ಸರಕಾರಿ ಅಭಿಯೋಜಕರಾದ ವಿ.ಶೇಖರ ಶೆಟ್ಟಿ ವಾದ ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕರಾದ ಚೌಧರಿ ಮೋತಿಲಾಲ್‌ ಅವರು ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರಾದ ಜುಡಿತ್‌ ಎಂ.ಒ.ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್‌ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಕೊಣಾಜೆ ಠಾಣೆಯ ಇನ್‌ಸ್ಪೆಕ್ಟರ್‌ ಅಶೋಕ್‌ ಪಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಒಂದು ದಿನದ ಬಳಿಕ ವಾಹನ ಪತ್ತೆ
ಇಸ್ಮಾಯಿಲ್‌ನ ವಾಹನ ಬಜತ್ತೂರಿನ ನೀರಕಟ್ಟೆಯಲ್ಲಿ ಫೆ.18ರಂದು ಪತ್ತೆಯಾಗಿ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ವಾಹನದೊಳಗೆ ರಕ್ತದ ಕಲೆಗಳು ಕೂಡ ಇದ್ದವು. ಇದನ್ನು ಗಮನಿಸಿದ ಇಸ್ಮಾಯಿಲ್‌ ಅವರ ಪುತ್ರ (ಮೊದಲನೇ ಪತ್ನಿಯ ಪುತ್ರ) ನೆಬಿಸಾ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನೆಬಿಸಾಳನ್ನು ತನಿಖೆಗೆ ಒಳಪಡಿಸಿದಾಗ ಪ್ರಕರಣ ಬಯಲಿಗೆ ಬಂದಿತ್ತು.

ಶಿಕ್ಷೆ ಪ್ರಕಟ
ನ್ಯಾಯಾಧೀಶರಾದ ಕಾಂತಜಾರು ಎಸ್‌.ವಿ. ಅವರು ಆರೋಪಿಗಳ ಅಪರಾಧ ಸಾಬೀತಾಗಿರುವುದರಿಂದ ಐಪಿಸಿ 302ರಂತೆ ಜೀವಾವಧಿ ಹಾಗೂ 2 ಲ.ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಮತ್ತೆ ಹೆಚ್ಚುವರಿ 2 ವರ್ಷ ಕಾರಾಗೃಹ, ಐಪಿಸಿ 201ರಡಿ 7 ವರ್ಷ ಕಠಿನ ಸಜೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಕಾರಾಗೃಹ, ಐಪಿಸಿ 120ರಡಿ 7 ವರ್ಷ ಕಠಿನಸಜೆ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಇಸ್ಮಾಯಿಲ್‌ ಅವರ ಮಕ್ಕಳಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಮಾಡಿದ್ದಾರೆ.

ಟಾಪ್ ನ್ಯೂಸ್

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.