Mangaluru: ಮುಡಿಪು ಜವಾಹರ್ ನವೋದಯ ವಿದ್ಯಾಲಯ “ಪಿಎಂ ಶ್ರೀ’ ಶಾಲೆ: ಸಂಸದ ಕ್ಯಾ.ಚೌಟ ಘೋಷಣೆ
ಸುತ್ತಮುತ್ತ ಶಾಲೆಗಳಿಗೆ ಪ್ರೇರಣೆ, ಮಾರ್ಗದರ್ಶನ, ಅತ್ಯಾಧುನಿಕ ಸೌಲಭ್ಯಗಳು ಲಭ್ಯ
Team Udayavani, Sep 15, 2024, 1:02 AM IST
ಮಂಗಳೂರು: ಕೇಂದ್ರ ಸರಕಾರ ಘೋಷಿಸಿರುವ ಮಹತ್ವಾಕಾಂಕ್ಷಿ “ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರು ವುದನ್ನು ಸಂಸದ ಕ್ಯಾ| ಬ್ರಿಜೇಶ್ ಚೌಟ ಘೋಷಿಸಿದ್ದಾರೆ.
ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ(ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು. ಮುಖ್ಯಶಿಕ್ಷಕ ರಾಜೇಶ್, ಪ್ರಮುಖರಾದ ಸಂತೋಷ್ ಬೋಳಿಯಾರ್, ಜಗದೀಶ್ ಆಳ್ವ, ಶಿಕ್ಷಕರು ಉಪಸ್ಥಿತರಿದ್ದರು.
“ಪಿಎಂ ಶ್ರೀ’ ಶಾಲೆಯ ವಿಶೇಷತೆ:
ಪಿಎಂ ಶ್ರೀ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ದೇಶಾದ್ಯಂತ 14,500ಕ್ಕೂ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮೇಲ್ದರ್ಜೆಗೇರಿಸುವುದು ಈ ಯೋಜನೆಯ ಉದ್ದೇಶ. ಇವುಗಳು ಮಾದರಿ ಶಾಲೆಗಳಾಗಲಿದ್ದು, ಸುತ್ತಮುತ್ತ ಶಾಲೆಗಳಿಗೆ ಪ್ರೇರಣೆ ಹಾಗೂ ಮಾರ್ಗದರ್ಶನ ಒದಗಿಸಲಿವೆ. ಸುಸಜ್ಜಿತ ಪ್ರಯೋಗಾಲಯಗಳು, ಸ್ಮಾರ್ಟ್ ಕ್ಲಾಸ್ ರೂಂ, ಗ್ರಂಥಾಲಯಗಳು, ಕ್ರೀಡಾ ಸಲಕರಣೆ, ಕಲಾ ಕೊಠಡಿ ಮುಂತಾದ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.