Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

ಸಾವಿರಾರು ಮಂದಿ ವಿಹರಿಸುತ್ತಿದ್ದ ಜಾಗದಲ್ಲಿ ಈಗ ನೂರು ಮಂದಿ ಸೇರುವುದು ಕಷ್ಟ, ಇನ್ನೂ ಆರಂಭವಾಗದ ವಾಟರ್‌ ಸ್ಪೋರ್ಟ್ಸ್ 

Team Udayavani, Sep 18, 2024, 7:45 AM IST

Panamburu

ಮಂಗಳೂರು: ಪಣಂಬೂರು ಕಡಲತೀರ ಚಿಕ್ಕದಾಗುತ್ತಿದೆಯೇ? ಕೆಲವು ವರ್ಷಗಳಲ್ಲಿ ಪಣಂಬೂರು ಕಡಲತೀರದವರು ನೋಡುತ್ತಿರುವ ಪ್ರಕಾರ ಕಡಲ ಕಿನಾರೆ ಹಿಂದಿನಂತಿಲ್ಲ. ಹಿಂದೆ ಸಹಸ್ರಾರು ಮಂದಿ ಓಡಾಡಿಕೊಂಡಿದ್ದ ಬೀಚ್‌ನಲ್ಲಿ ಈಗ ನೂರು ಮಂದಿಗೂ ನಿಲ್ಲಲಾಗುತ್ತಿಲ್ಲ.

ಬಹುತೇಕ ಭೂಭಾಗವನ್ನು ಸಮುದ್ರ ಕಬಳಿಸಿಕೊಂಡಿದೆ. ಮಳೆಗಾಲದಲ್ಲಿ ಸಮುದ್ರ ಮಟ್ಟ ಮೇಲೆ ಬರುವುದು ಸಾಮಾನ್ಯವಾದರೂ ಆಗಸ್ಟ್‌ ವೇಳೆ ಮತ್ತೆ ಮಟ್ಟ ಕೆಳಗೆ ಹೋಗುತ್ತದೆ. ಆದರೆ 2-3 ವರ್ಷಗಳಿಂದ ಸೆಪ್ಟಂಬರ್‌ – ಅಕ್ಟೋಬರ್‌ನಲ್ಲೂ ನೀರಿನ ಮಟ್ಟ ಕೆಳಗಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯರು.
ಹಿಂದೆ ಬೀಚ್‌ ಉತ್ಸವ, ಗಾಳಿಪಟ ಉತ್ಸವ ಸಹಿತ ಹಲವು ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿದ್ದ ಈ ಬೀಚ್‌ ರಾಜ್ಯದಲ್ಲೇ ಖ್ಯಾತಿ ಗಳಿಸಿತ್ತು. ಈಗ ಪ್ರವಾಸಿಗರು ಬಂದರೆ ಓಡಾಡುವುದಕ್ಕೆ ಕಷ್ಟವಾಗುತ್ತಿದೆ.

ಈಗ ಸುರಕ್ಷೆಯ ದೃಷ್ಟಿಯಿಂದ ಸಮುದ್ರ ತೀರದಲ್ಲಿ ಹಗ್ಗ ಕಟ್ಟಲಾಗಿದ್ದು, ಅದನ್ನು ದಾಟಿ ಮುಂದೆ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಹಾಗಾಗಿ ಪ್ರವಾಸಿಗರು ನಿರಾಟವಾಡುವುದೂ ಕಷ್ಟ, ಮರಳಿನಲ್ಲಿ ನಡೆದಾಡುವುದೂ ಕಷ್ಟ ಎಂಬಂತಾಗಿದೆ. ಸಾಮಾನ್ಯವಾಗಿ ಸಮತಟ್ಟಾಗಿರುವ ವಿಶಾಲ ಬೀಚ್‌ ಪಣಂಬೂರು. ಸದ್ಯ ಅಲೆಗಳ ಅಬ್ಬರದಿಂದ ಅಲ್ಲಲ್ಲಿ ನೀರು ಒಳಬರುತ್ತಿದೆ. ಅಲೆಗಳ ಅಬ್ಬರದಿಂ ದಾಗಿ ಬೀಚ್‌ ಏರುತಗ್ಗುಗಳಿಂದ ಕೂಡಿದೆ.

ಹಿಂದೆ ಹೀಗಿರಲಿಲ್ಲ. ಪ್ರವಾಸಿಗರು ರಸ್ತೆಯಲ್ಲಿ ಬಂದು ಬೀಚ್‌ ಸೇರುವ ಜಾಗವೇ ಅಗಲವಾಗಿತ್ತು. ಅಲ್ಲಿಂದ ಕಡಲ ಬದಿಯಲ್ಲೇ ನಡೆದು ಎಡಬದಿಯಲ್ಲಿರುವ ಬ್ರೇಕ್‌ವಾಟರ್‌ ವರೆಗೂ ಹೋಗಬಹುದಿತ್ತು. ಪಣಂಬೂರು ಕಡಲತೀರ ಅಭಿವೃದ್ಧಿಗೆ ಕದಳೀ ಟೂರಿಸಂ ಸಂಸ್ಥೆಗೆ ಗುತ್ತಿಗೆ ಕೊಡಲಾಗಿದ್ದು, ಅವರಿಗೆ 10 ಎಕ್ರೆ ಜಾಗ ಬಿಟ್ಟು ಕೊಡಲಾಯಿತ್ತು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಆದರೆ ಈಗ ಅಷ್ಟು ಜಾಗ ಕಾಣುತ್ತಿಲ್ಲ, ಎಲ್ಲವೂ ನೀರಿನೊಳಗೆ ಇದೆ ಎನ್ನುತ್ತಾರೆ ಗುತ್ತಿಗೆದಾರರು. ಈ ಬಾರಿಯ ಕರಾವಳಿ ಉತ್ಸವ ಸಂದರ್ಭದಲ್ಲಿ ಬೀಚ್‌ ಉತ್ಸವ ನಡೆಸಬೇಕಿದೆ. ಆದರೆ ಈಗಿನ ಸ್ಥಿತಿಯಲ್ಲಿ ಸಾಧ್ಯವೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಇನ್ನೆರಡು ತಿಂಗಳಲ್ಲಿ ಸಮುದ್ರ ಕೆಳಗೆ ಹೋಗುವುದೇ ಅನುಮಾನ ಎನ್ನಲಾಗುತ್ತಿದೆ.

ವಾಟರ್‌ಸ್ಪೋರ್ಟ್ಸ್ ಕೂಡ ಇಲ್ಲ
ಪಣಂಬೂರು ಬೀಚ್‌ನಲ್ಲಿ ವಾಟರ್‌ಸ್ಪೋರ್ಟ್ಸ್ ಜನಪ್ರಿಯಗೊಂಡಿತ್ತು. ಮಳೆಗಾಲದ ಕಾರಣದಿಂದ ಸದ್ಯ ಸ್ಥಗಿತಗೊಳಿಸಲಾಗಿದೆ. ಈಗ ಮತ್ತೆ ಆರಂಭಿಸಬೇಕಾದರೆ ಸ್ಥಳಾವಕಾಶ ಬೇಕಾಗುತ್ತದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ವಾಟರ್‌ನ್ಪೋರ್ಟ್ಸ್ ಆರಂಭಿಸಲಾಗುತ್ತಿಲ್ಲ.

ಕುಳಾಯಿ ಬ್ರೇಕ್‌ವಾಟರ್‌ ಕಾರಣ?
ಪಣಂಬೂರಿನಿಂದ ಎರಡು ಕಿ.ಮೀ. ಉತ್ತರಕ್ಕೆ ಕುಳಾಯಿಯಲ್ಲಿ ಮೀನುಗಾರಿಕೆ ಜೆಟ್ಟಿ ಹಾಗೂ ಅದರ ಪೂರಕ ಬ್ರೇಕ್‌ವಾಟರ್‌ ನಿರ್ಮಾಣ ನಡೆದಿದೆ. ಹಾಗಾಗಿಯೇ ಇಲ್ಲಿ ಸಮುದ್ರ ಒಳ ಬಂದಿರುವ ಸಾಧ್ಯತೆ ಇದೆ ಎನ್ನುತ್ತಾರೆ ಸ್ಥಳೀಯರು. ಈ ಕುರಿತು ಕರ್ನಾಟಕದ ಕಡಲತೀರಗಳ ಶೋರ್‌ಲೈನ್‌ ಮ್ಯಾನೇಜ್‌ಮೆಂಟ್‌ ಪ್ಲಾನ್‌ ಅನ್ನು ಚೆನ್ನೈಯ ನ್ಯಾಷನಲ್‌ ಸೆಂಟರ್‌ ಫಾರ್‌ ಸಸ್ಟೆನೆಬಲ್‌ ಕೋಸ್ಟಲ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆ ಸಿದ್ಧಪಡಿಸುತ್ತಿದೆ. ಅವರು ಪಣಂಬೂರು ಸಹಿತ ರಾಜ್ಯದ ಕಡಲತೀರದಲ್ಲಿ ಸಮುದ್ರದ ಚಲನೆ ಕುರಿತು ಅಧ್ಯಯನ ನಡೆಸಿದ್ದು, ಅದರಲ್ಲಿ ಕಳೆದ ಒಂದು ದಶಕದ ವಿವರಗಳು ಬರಲಿವೆ ಎಂದು ಬಂದರು ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

“ಬ್ರೇಕ್‌ವಾಟರ್‌ ಹಾಗೂ ಸಮುದ್ರದ ಅಲೆಗಳ ಚಲನೆ ಆಧರಿಸಿಕೊಂಡು ಸಮುದ್ರದಲ್ಲಿ ಒಂದೆಡೆ ಮರಳು ಶೇಖರಣೆಯಾದರೆ ಇನ್ನೊಂದೆಡೆ ಕಡಲ್ಕೊರೆತ ಉಂಟಾಗುವುದು ಇದೆ.” –ಪ್ರೊ| ಮನು, ಎನ್‌ಐಟಿಕೆ ಸುರತ್ಕಲ್‌ ಜಲಸಂಪನ್ಮೂಲ ಹಾಗೂ ಸಾಗರ ಎಂಜಿನಿಯರಿಂಗ್‌ ವಿಭಾಗದ ಉಪನ್ಯಾಸಕರು

– ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.