Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!
ದೇಶದ ವ್ಯವಸ್ಥೆ ಕಂಡು ಅಭಿಮಾನದಿಂದ ಬಸ್ಸಿಗೆ ಇಸ್ರೇಲ್ ಹೆಸರಿಟ್ಟಿದ್ದೆ : ಬಸ್ ಮಾಲಕ
Team Udayavani, Oct 6, 2024, 7:45 AM IST
ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ.
ಇಸ್ರೇಲ್ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್ ಕಟೀಲು ಅವರು ಮಂಗಳೂರಿನಲ್ಲಿ ಬಸ್ ಖರೀದಿಸಿ ಅದಕ್ಕೆ “ಇಸ್ರೇಲ್ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದರು. ಬಸ್ನ ವ್ಯವಹಾರವನ್ನು ಅವರ ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕೆಲವರು “ಇಸ್ರೇಲ್ ಟ್ರಾವೆಲ್ಸ್’ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದರು.
ಇದು ಪೊಲೀಸರ ಗಮನಕ್ಕೂ ಬಂದಿತ್ತು. ಇದರಿಂದ ಮುಂದೆ ದ್ವೇಷ ಹರಡುವುದು ಬೇಡವೆಂಬ ಕಾರಣಕ್ಕೆ ಪೊಲೀಸರು ಬಸ್ನ ಮಾಲಕರಿಗೆ ಹೆಸರು ಬದಲಾಯಿಸಲು ಸೂಚನೆ ನೀಡಿದ್ದರು. ಹಾಗಾಗಿ ಲೆಸ್ಟರ್ ಅವರು ಈಗ ಬಸ್ಸಿಗೆ “ಜೆರುಸಲೇಂ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಲೆಸ್ಟರ್, “ಇಸ್ರೇಲ್ನಲ್ಲಿ ಕೆಲಸ ಮಾಡಿದ ಹಾಗೂ ಆ ದೇಶದ ವ್ಯವಸ್ಥೆಯನ್ನು ನೋಡಿ ಅಭಿಮಾನದಿಂದ ಬಸ್ಸಿಗೆ ಇಸ್ರೇಲ್ ಹೆಸರಿಟ್ಟಿದ್ದೆ. ಇದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಬೇಸರವಾಗಿ ಈಗ ಹೆಸರು ಬದಲಿಸಿದ್ದೇನೆ. ಜೆರುಸಲೇಂ ಪವಿತ್ರ ಭೂಮಿ. ಅದೂ ಇಸ್ರೇಲ್ನಲ್ಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ
Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.