![IPL 2025 start date fixed: RCB to play in the opening match](https://www.udayavani.com/wp-content/uploads/2025/02/ipl-415x233.jpg)
![IPL 2025 start date fixed: RCB to play in the opening match](https://www.udayavani.com/wp-content/uploads/2025/02/ipl-415x233.jpg)
Team Udayavani, Sep 17, 2024, 11:58 PM IST
ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ, ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಬೆಳ್ಮಣ್ಣಿನ ರೋಹಿತ್ ಮಥಾಯಿಸ್ (33) ಬಂಧಿತ ಆರೋಪಿ. ಈತ 2021ರ ಡಿಸೆಂಬರ್ ತಿಂಗಳ ಮೊದಲ ವಾರದಿಂದ ಕುಲಶೇಖರದ ಮಹಿಳೆಯೋರ್ವರ ಜತೆ ಕೆಲವು ತಿಂಗಳು ಸಂಪರ್ಕವನ್ನಿಟ್ಟುಕೊಂಡು ಆಕೆಯೊಂದಿಗೆ ವಾಸವಿದ್ದು, ಬಳಿಕ ಆಕೆಯ ಮನೆಯಿಂದಲೇ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿ ಹೋಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
ಚಿನ್ನಾಭರಣಕ್ಕಾಗಿ ಕೊಲೆ
ರೋಹಿತ್ ಮಥಾಯಿಸ್ 2019ರಲ್ಲಿ ಬೆಳ್ಮಣ್ಣಿನಲ್ಲಿ ನೆರೆಮನೆಯವರಾದ ನಿವೃತ್ತ ಪಿಡಿಒ ಭರತಲಕ್ಷ್ಮೀ ಅವರನ್ನು ಇತರರೊಂದಿಗೆ ಸೇರಿಕೊಂಡು ಚಿನ್ನಾಭರಣಕ್ಕಾಗಿ ಕೊಲೆ ಮಾಡಿ ದೇಹವನ್ನು ಬಾವಿಗೆ ಹಾಕಿದ್ದ. ಜೈಲುವಾಸ ಅನುಭವಿಸಿ ಅನಂತರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಜಾಲತಾಣದ ಮೂಲಕ ಗೆಳೆತನ
ಆರೋಪಿ ಫೇಸ್ಬುಕ್ನಂತಹ ಜಾಲತಾಣಗಳ ಮೂಲಕ ಮಹಿಳೆಯರ ಗೆಳೆತನ ಮಾಡಿ ವಿಶ್ವಾಸಗಳಿಸುತ್ತಿದ್ದ. ಇದೇ ರೀತಿ ಕುಲಶೇಖರದ ಮಹಿಳೆಯ ಸಂಪರ್ಕವೂ ಅಗಿ ಆಕೆಯ ಜತೆ ವಾಸವಿದ್ದು, ಕಳವು ಮಾಡಿಕೊಂಡು ಹೋಗಿದ್ದ.
ಮತ್ತೊಂದು ಪ್ರಯತ್ನದಲ್ಲಿದ್ದಾಗ ಸಿಕ್ಕಿಬಿದ್ದ
ಆರೋಪಿ ರೋಹಿತ್ ಕಳವಿನ ಬಳಿಕ ಮುಂಬಯಿಗೆ ತೆರಳಿದ್ದ. ಇದೇ ರೀತಿ ಹಲವು ಮಹಿಳೆಯರನ್ನು ವಂಚಿಸಲು ಯೋಜನೆ ರೂಪಿಸಿಕೊಂಡಿದ್ದ. ಓರ್ವ ಮಹಿಳೆ ಈತನ ಬಲೆಗೆ ಬಿದ್ದಿದ್ದಳು. ಅನಂತರ ಆಕೆಗೆ ಸಂಶಯ ಬಂದಿತ್ತು. ಆಕೆಯ ಮೂಲಕವೇ ಉಪಾಯವಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Bengaluru: ತ್ಯಾಜ್ಯದಿಂದ ಪ್ಲಾಸ್ಟಿಕ್ಗೆ ಪರ್ಯಾಯ ಉತ್ಪನ್ನ: ನಿರಾಣಿ ಕಂಪನಿ ಯೋಜನೆ
Bengaluru ಏರ್ಪೋರ್ಟ್ಗೆ 3ನೇ ಟರ್ಮಿನಲ್ಗೆ ಚಿಂತನೆ: ಬಿಐಎಎಲ್
Aeroshow 2025: ಏರ್ ಶೋನಿಂದ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
IPL 2025 ಆರಂಭಕ್ಕೆ ದಿನಾಂಕ ಫಿಕ್ಸ್: ಉದ್ಘಾಟನಾ ಪಂದ್ಯದಲ್ಲೇ ಆರ್ ಸಿಬಿ ಆಟ
Aero Show 2025: ಕ್ಷಣ ಮಾತ್ರದಲ್ಲಿ ಮ್ಯಾಪಿಂಗ್ ಮಾಡಿಕೊಡುವ ಡ್ರೋನ್
You seem to have an Ad Blocker on.
To continue reading, please turn it off or whitelist Udayavani.