Mangaluru: ನಿವೃತ್ತ ಪಿಡಿಒ ಕೊಲೆ ಆರೋಪಿ ಬಂಧನ

ಮಹಿಳೆಯರ ಗೆಳೆತನ ಬೆಳೆಸಿ ಚಿನ್ನಾಭರಣ ದೋಚುತ್ತಿದ್ದ ಖದೀಮ

Team Udayavani, Sep 17, 2024, 11:58 PM IST

PDO-Arrest

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ, ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಬೆಳ್ಮಣ್ಣಿನ ರೋಹಿತ್‌ ಮಥಾಯಿಸ್‌ (33) ಬಂಧಿತ ಆರೋಪಿ. ಈತ 2021ರ ಡಿಸೆಂಬರ್‌ ತಿಂಗಳ ಮೊದಲ ವಾರದಿಂದ ಕುಲಶೇಖರದ ಮಹಿಳೆಯೋರ್ವರ ಜತೆ ಕೆಲವು ತಿಂಗಳು ಸಂಪರ್ಕವನ್ನಿಟ್ಟುಕೊಂಡು ಆಕೆಯೊಂದಿಗೆ ವಾಸವಿದ್ದು, ಬಳಿಕ ಆಕೆಯ ಮನೆಯಿಂದಲೇ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿ ಹೋಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಚಿನ್ನಾಭರಣಕ್ಕಾಗಿ ಕೊಲೆ
ರೋಹಿತ್‌ ಮಥಾಯಿಸ್‌ 2019ರಲ್ಲಿ ಬೆಳ್ಮಣ್ಣಿನಲ್ಲಿ ನೆರೆಮನೆಯವರಾದ ನಿವೃತ್ತ ಪಿಡಿಒ ಭರತಲಕ್ಷ್ಮೀ ಅವರನ್ನು ಇತರರೊಂದಿಗೆ ಸೇರಿಕೊಂಡು ಚಿನ್ನಾಭರಣಕ್ಕಾಗಿ ಕೊಲೆ ಮಾಡಿ ದೇಹವನ್ನು ಬಾವಿಗೆ ಹಾಕಿದ್ದ. ಜೈಲುವಾಸ ಅನುಭವಿಸಿ ಅನಂತರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಜಾಲತಾಣದ ಮೂಲಕ ಗೆಳೆತನ
ಆರೋಪಿ ಫೇಸ್‌ಬುಕ್‌ನಂತಹ ಜಾಲತಾಣಗಳ ಮೂಲಕ ಮಹಿಳೆಯರ ಗೆಳೆತನ ಮಾಡಿ ವಿಶ್ವಾಸಗಳಿಸುತ್ತಿದ್ದ. ಇದೇ ರೀತಿ ಕುಲಶೇಖರದ ಮಹಿಳೆಯ ಸಂಪರ್ಕವೂ ಅಗಿ ಆಕೆಯ ಜತೆ ವಾಸವಿದ್ದು, ಕಳವು ಮಾಡಿಕೊಂಡು ಹೋಗಿದ್ದ.

ಮತ್ತೊಂದು ಪ್ರಯತ್ನದಲ್ಲಿದ್ದಾಗ ಸಿಕ್ಕಿಬಿದ್ದ
ಆರೋಪಿ ರೋಹಿತ್‌ ಕಳವಿನ ಬಳಿಕ ಮುಂಬಯಿಗೆ ತೆರಳಿದ್ದ. ಇದೇ ರೀತಿ ಹಲವು ಮಹಿಳೆಯರನ್ನು ವಂಚಿಸಲು ಯೋಜನೆ ರೂಪಿಸಿಕೊಂಡಿದ್ದ. ಓರ್ವ ಮಹಿಳೆ ಈತನ ಬಲೆಗೆ ಬಿದ್ದಿದ್ದಳು. ಅನಂತರ ಆಕೆಗೆ ಸಂಶಯ ಬಂದಿತ್ತು. ಆಕೆಯ ಮೂಲಕವೇ ಉಪಾಯವಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

IPL 2025 start date fixed: RCB to play in the opening match

IPL 2025 ಆರಂಭಕ್ಕೆ ದಿನಾಂಕ ಫಿಕ್ಸ್:‌ ಉದ್ಘಾಟನಾ ಪಂದ್ಯದಲ್ಲೇ ಆರ್‌ ಸಿಬಿ ಆಟ

7-aeroshow

Aero Show 2025: ಕ್ಷಣ ಮಾತ್ರದಲ್ಲಿ ಮ್ಯಾಪಿಂಗ್‌ ಮಾಡಿಕೊಡುವ ಡ್ರೋನ್‌

4-airshow

Aeroindia 2025: ವಿಮಾನಗಳ ಸಾಹಸ ವೀಕ್ಷಿಸಿ ಸಂಭ್ರಮಿಸಿದ ಜನತೆ

Modi In US: Trump issues tariff warning while calling Modi a friend

Modi In US:‌ ಮೋದಿಯನ್ನು ದೋಸ್ತಿ ಎನ್ನುತ್ತಲೇ ಟ್ಯಾರಿಫ್‌ ಎಚ್ಚರಿಕೆ ನೀಡಿದ ಟ್ರಂಪ್

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ

Surathkal ಕಾಟಿಪಳ್ಳ: ಯುವಕರ ಹೊಡೆದಾಟ; ವಶ

Surathkal ಕಾಟಿಪಳ್ಳ: ಯುವಕರ ಹೊಡೆದಾಟ; ವಶ

Mangaluru: ತೆಂಗಿನ ತುಂಡು ಎದೆಗೆ ಹೊಕ್ಕಿದ್ದ ಬಾಲಕ ಚೇತರಿಕೆ

Mangaluru: ತೆಂಗಿನ ತುಂಡು ಎದೆಗೆ ಹೊಕ್ಕಿದ್ದ ಬಾಲಕ ಚೇತರಿಕೆ

Kulai: ನಿಲ್ಲಿಸಿದ್ದ ಟ್ಯಾಂಕರ್‌ ಮುಂದಕ್ಕೆ ಚಲಿಸಿ ಹಾನಿ

Surathkal: ಸರಣಿ ಅಪಘಾತ: ಹಲವು ವಾಹನ ಜಖಂ

Mangaluru: ಪಾನ್‌ ಮಸಾಲಾ, ಸುಪಾರಿ ವಹಿವಾಟು ಕಂಪೆನಿ ಮೇಲೆ ಐಟಿ ದಾಳಿ

Mangaluru: ಪಾನ್‌ ಮಸಾಲಾ, ಸುಪಾರಿ ವಹಿವಾಟು ಕಂಪೆನಿ ಮೇಲೆ ಐಟಿ ದಾಳಿ

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

9

Bengaluru: ತ್ಯಾಜ್ಯದಿಂದ ಪ್ಲಾಸ್ಟಿಕ್‌ಗೆ ಪರ್ಯಾಯ ಉತ್ಪನ್ನ: ನಿರಾಣಿ ಕಂಪನಿ ಯೋಜನೆ

8-

Bengaluru ಏರ್‌ಪೋರ್ಟ್‌ಗೆ 3ನೇ ಟರ್ಮಿನಲ್‌ಗೆ ಚಿಂತನೆ: ಬಿಐಎಎಲ್‌

7-aeroshow

Aeroshow 2025: ಏರ್‌ ಶೋನಿಂದ ಕಿ.ಮೀ.ಗಟ್ಟಲೆ ಟ್ರಾಫಿಕ್‌ ಜಾಮ್‌

IPL 2025 start date fixed: RCB to play in the opening match

IPL 2025 ಆರಂಭಕ್ಕೆ ದಿನಾಂಕ ಫಿಕ್ಸ್:‌ ಉದ್ಘಾಟನಾ ಪಂದ್ಯದಲ್ಲೇ ಆರ್‌ ಸಿಬಿ ಆಟ

7-aeroshow

Aero Show 2025: ಕ್ಷಣ ಮಾತ್ರದಲ್ಲಿ ಮ್ಯಾಪಿಂಗ್‌ ಮಾಡಿಕೊಡುವ ಡ್ರೋನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.